ಆಘಾತಕಾರಿ…: ಪತ್ನಿಯನ್ನು ಕೊಂದು, ಶವದ ಜೊತೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ವ್ಯಕ್ತಿ

ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಘಟನೆಯಲ್ಲಿ, ಕೋಯಮತ್ತೂರಿನ ಮಹಿಳಾ ವಸತಿ ನಿಲಯದೊಳಗೆ ತಿರುನೆಲ್ವೇಲಿ ಮೂಲದ ಮಹಿಳೆಯೊಬ್ಬರನ್ನು ಅವರಿಂದ ಬೇರೆಯಾಗಿರುವ ಪತಿ ಅತ್ಯಂತ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಕೋಯಮತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀಪ್ರಿಯಾ ಅವರು ತಮ್ಮ ಪತಿ … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂಡ್ರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು…!

ಕೊಯಮತ್ತೂರು : ಮುಟ್ಟಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಶಿಕ್ಷಕರು ತರಗತಿಯಿಂದ ಹೊರಗೆ ಕೂಡ್ರಿಸಿ ಪರೀಕ್ಷೆ ಬರೆಸಿರುವ ಘಟನೆ ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ ಎಂದು ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ಬಂದ ಬಳಿಕ ಮುಟ್ಟು ಕಾಣಿಸಿಕೊಂಡಿತ್ತು. ಈ ಬಗ್ಗೆ ಆಕೆ ಪ್ರಾಂಶುಪಾಲರ ಬಳಿ ಹೇಳಿಕೊಂಡಾಗ ಅವರು ಶಾಲೆಯ ಹೊರಗಡೆ ಕುಳಿತುಕೊಂಡು ಪರೀಕ್ಷೆ ಬರೆಯುವಂತೆ ಸೂಚಿಸಿದ್ದಾರೆ. ಈ ಸಂಬಂಧ … Continued

ವೀಡಿಯೊ | ಆಹಾರ ಹುಡುಕಿಕೊಂಡು ಸೀದಾ ಮನೆಗೇ ನುಗ್ಗಿದ ಕಾಡಾನೆ ; ಮುಂದಾಗಿದ್ದೇನೆಂದರೆ….

ಕೊಯಮತ್ತೂರು : ತಮಿಳುನಾಡಿನ ಕೊಯಮತ್ತೂರಿನಲ್ಲಿ ಶನಿವಾರ (ಜನವರಿ 18) ರಾತ್ರಿ ಕಾಡಾನೆಯೊಂದು ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ ಭಯಾನಕ ಘಟನೆ ನಡೆದಿದೆ. ಅನಿರೀಕ್ಷಿತ ಅತಿಥಿಯ ಭೇಟಿಯಿಂದ ಮನೆಯೊಳಗಿದ್ದ ಜನರು ಭಯಭೀತರಾಗಿದ್ದರು. ಈ ಘಟನೆಯನ್ನು ಮನೆಯವರೇ ವೀಡಿಯೊ ಮಾಡಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದೃಷ್ಟವಶಾತ್ ಆನೆ ಮನೆಯೊಳಗೆ ನುಗ್ಗದ ಕಾರಣ ಯಾರಿಗೂ ಹಾನಿಯಾಗಿಲ್ಲ, ಬಾಗಿಲ ಬಳಿಯೇ … Continued

ಕೊಯಮತ್ತೂರು : ಡಿಐಜಿ ಸಿ.ವಿಜಯಕುಮಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೊಯಮತ್ತೂರು: ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ.ವಿಜಯಕುಮಾರ ಅವರು ಇಂದು, ಶುಕ್ರವಾರ ಬೆಳಗ್ಗೆ ನಗರದ ರೆಡ್‌ಫೀಲ್ಡ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 45 ವರ್ಷ ವಯಸ್ಸಿನ ಸಿ.ವಿಜಯಕುಮಾರ ಅವರು ಕೊಯಮತ್ತೂರು ನಗರದ ರೆಡ್ ಫೀಲ್ಡ್ಸ್‌ನಲ್ಲಿರುವ ಅವರ ಕ್ವಾರ್ಟರ್ಸ್‌ನಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 6:15ರ ಸುಮಾರಿಗೆ … Continued

ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟದ ಹೊಣೆ ಹೊತ್ತ ಐಎಸ್‍ಕೆಪಿ ಉಗ್ರ ಸಂಘಟನೆ

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್‌ಕೆಪಿ ಉಗ್ರ ಸಂಘಟನೆ ಹೊತ್ತಿದೆ. ಖೊರಾಸನ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ (ISKP) ಎಂಬ ಉಗ್ರ ಸಂಘಟನೆ ತನ್ನ ವಾಯ್ಸ್‌ ಆಫ್ ಖುರಾಸನ್ ನಿಯತಕಾಲಿಕೆಯಲ್ಲಿ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಕಳೆದ ಅಕ್ಟೋಬರ್‌ 23ರಂದು ಕೊಯಮತ್ತೂರಿನಲ್ಲಿ ನಡೆದ ಕಾರು ಸ್ಫೋಟ ಮತ್ತು … Continued

ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕನ ಬಂಧನ

ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ … Continued