ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಸಚಿವ ಕಡನ್ನಪಲ್ಲಿ ರಾಮಚಂದ್ರನ್ ಅವರು ಭಾಷಣ ಮಾಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಕಣ್ಣೂರಿನ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸಚಿವರು ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತಲೆಸುತ್ತು ಕಾಣಿಸಿಕೊಂಡಿದ್ದು, ವೇದಿಕೆಯ ಮೇಲೆಯೇ ಕುಸಿದು ಬಿದ್ದರು. ತಕ್ಷಣವೇ … Continued

ವೀಡಿಯೊಗಳು..| ಸ್ವಿಟ್ಜರ್‌ಲ್ಯಾಂಡ್‌ : ರಣಭೀಕರ ಭೂ ಕುಸಿತಕ್ಕೆ ಸುಂದರ ಹಳ್ಳಿಯೇ ನಾಶ ; ವೀಕ್ಷಿಸಿ

ರಮಣೀಯ ಸ್ಥಳಗಳು ಹಾಗೂ ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಸ್ವಿಟ್ಜರ್‌ಲ್ಯಾಂಡ್‌ ನಲ್ಲಿ ಹಿಮಚ್ಛಾದಿತ ಗುಡ್ಡವೊಂದು ಕುಸಿದ ನಂತರ ಬ್ಲಾಟೆನ್ ಎಂಬ ಗ್ರಾಮವೇ ಬಹುತೇಕ ನಾಶವಾಗಿದೆ. ಬಿರ್ಚ್ ಹಿಮನದಿ ಶಿಥಿಲಗೊಳ್ಳುತ್ತಿದೆ ಎಂಬ ಭಯದಿಂದಾಗಿ ಕೆಲವು ದಿನಗಳ ಹಿಂದೆ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದ್ದರೂ, ಒಬ್ಬ ವ್ಯಕ್ತಿ ಕಾಣೆಯಾಗಿದ್ದಾರೆ ಮತ್ತು ಅನೇಕ ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ಬ್ಲಾಟೆನ್‌ನ ಮೇಯರ್ ಮ್ಯಾಥಿಯಸ್ ಬೆಲ್‌ವಾಲ್ಡ್ ಅವರು, … Continued

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಹಳೆ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕ ಜೇಮ್ಸ್ ಜತ್ತನ್ನ (56) ಹಾಗೂ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ … Continued

‘ನಾವು ಭಯಪಡುತ್ತೇವೆ…ಈ ಶತಮಾನದಲ್ಲಿ ಜನ-ಸಮುದಾಯಕ್ಕೆ ವಿನಾಶಕಾರಿ ಆಪತ್ತು ಎದುರಾಗಬಹುದು : ಹವಾಮಾನ ವರದಿಯಲ್ಲಿ 15,000 ವಿಜ್ಞಾನಿಗಳ ಎಚ್ಚರಿಕೆ

163 ದೇಶಗಳ 15,000 ಸಂಶೋಧಕರು ಸಹಿ ಮಾಡಿದ ಹೊಸ “ಹವಾಮಾನ ಸ್ಥಿತಿ” ವರದಿಯಲ್ಲಿ ಮಾನವ-ಚಾಲಿತ ಹವಾಮಾನ ಬದಲಾವಣೆಯ ಪರಿಣಾಮವಾಗಿ ನಾವು ಈಗ “ಗುರುತಿಸದ ಪ್ರದೇಶ” ದಲ್ಲಿದ್ದೇವೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ಉಂಟಾದ ಪ್ರಸ್ತುತ ಸಂಕಟವನ್ನು ಸಂಶೋಧಕರು ಒತ್ತಿಹೇಳಿದ್ದಾರೆ ಮತ್ತು ಭವಿಷ್ಯದಲ್ಲಿ ವ್ಯಾಪಕವಾದ ಸಾಮಾಜಿಕ ಮತ್ತು ಪರಿಸರ ಕುಸಿತದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ, … Continued

ಮುಂಬೈ-ಗೋವಾ ಹೆದ್ದಾರಿಯಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆ | ವೀಡಿಯೊ

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಸೋಮವಾರ ಚಿಪ್ಲುನ್‌ನಲ್ಲಿ ಕುಸಿದು ಬಿದ್ದಿದೆ. ಪಿಲ್ಲರ್ ಕುಸಿದ ಕೆಲವೇ ಕ್ಷಣಗಳಲ್ಲಿ ಮೇಲ್ಸೇತುವೆಯ ಒಂದು ಭಾಗವೂ ಕುಸಿದು ಬಿದ್ದಿದ್ದು, ನಿರ್ಮಾಣ ಸ್ಥಳದಲ್ಲಿ ಬಳಸುತ್ತಿದ್ದ ಕ್ರೇನ್ ಯಂತ್ರಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು … Continued