ಶಾಸಕರ ಅಸಮಾಧಾನಕ್ಕೆ ಸಿದ್ದರಾಮಯ್ಯ ಮದ್ದು : ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ – ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಭರವಸೆ

ಬೆಂಗಳೂರು : ವರ್ಗಾವಣೆ ಹಾಗೂ ಅನುದಾನದ ವಿಚಾರದಲ್ಲಿ ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಆಡಳಿತಾತ್ಮಕ ಒತ್ತಡಗಳ ನಡುವೆಯೂ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಅಲ್ಲಿ ಚರ್ಚಿಸುತ್ತೇನೆ. … Continued