ಬಿಜೆಪಿ ನಾಯಕ ಯೋಗೇಶ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಬಿಜೆಪಿ ನಾಯಕ ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. .ಏಪ್ರಿಲ್ 15 ರಂದು ವಿನಯ್ ಕುಲಕರ್ಣಿ ಮತ್ತು … Continued

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿದೆ. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ … Continued

ಸತತ ವಿದ್ಯುತ್ ಕಡಿತಕ್ಕೆ ಆಕ್ರೋಶ: ವಿದ್ಯುತ್‌ ಇಲಾಖೆ ಅಧಿಕಾರಿಗಳ ಮನೆಯ ವಿದ್ಯುತ್‌ ಕಟ್ ಮಾಡಿದ ಶಾಸಕ…!

ಹರಿದ್ವಾರ : ಸತತ ವಿದ್ಯುತ್ ಕಡಿತದಿಂದ ಆಕ್ರೋಶಗೊಂಡ ಹರಿದ್ವಾರ ಜಿಲ್ಲೆಯ ಜಬ್ರೇಡಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಅವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸ್ವತಃ ವಿದ್ಯುತ್ ಕಂಬ ಏರಿದ ಶಾಸಕರು, ವಿದ್ಯುತ್‌ ಇಲಾಖೆಯ ಮೂವರು ಉನ್ನತ ಅಧಿಕಾರಿಗಳ ನಿವಾಸದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯುತ್ ಇಲಾಖೆಯು ರೂರ್ಕಿ ಸಿವಿಲ್ ಲೈನ್ಸ್ … Continued

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ … Continued

ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued

ಚೆಕ್‌ ಬೌನ್ಸ್‌ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ₹1.25 ಕೋಟಿ ಪಾವತಿಸಲು ಕೋರ್ಟ್‌ ಆದೇಶ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಅವರನ್ನು ದೋಷಿ ಎಂದು ಬುಧವಾರ ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ದೂರುದಾರರಿಗೆ ₹1.25 ಕೋಟಿ ಪಾವತಿಸಬೇಕು. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ವಿಎಸ್‌ಎಲ್‌ ಸ್ಟೀಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued

ಅಕ್ರಮ ಅದಿರು ಸಾಗಣೆ ಪ್ರಕರಣ: ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ ಸೈಲ್‌ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಸಾವಿರಾರು ಮೆಟ್ರಿಕ್‌ ಟನ್‌ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿರುವ ಆರು ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿ ಏಳು ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲ್ಲದೆ, ಒಟ್ಟಾರೆ ₹44.65 ಕೋಟಿ … Continued