ಕಪಿಲ್ ಸಿಬಲ್ ಟೀಕೆಯ ನಂತರ, ಶೀಘ್ರವೇ ಸಿಡಬ್ಲ್ಯುಸಿ ಸಭೆ ನಡೆಯಲಿದೆ ಎಂದ ಕಾಂಗ್ರೆಸ್

ನವದೆಹಲಿ: ಜಿ -23 ನಾಯಕರ ಬೇಡಿಕೆಯನ್ನು ಅನುಸರಿಸಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ತಿಳಿಸಿದ್ದಾರೆ. ಜಿ -23 – ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ಕೋರಿ ಕಾಂಗ್ರೆಸ್ ಉನ್ನತಾಧಿಕಾರಿಗಳಿಗೆ ಪತ್ರ ಬರೆದ ನಾಯಕರ ಗುಂಪು -ಅದು ಪಕ್ಷದಲ್ಲಿ ಸಾಂಸ್ಥಿಕ ಚುನಾವಣೆಗೆ ಒತ್ತಾಯಿಸುತ್ತಿದೆ. … Continued