ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ವಿರುದ್ಧ ದೂರು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ ಅವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರೊಬ್ಬರು ಆರೋಪಿಸಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಕಾರ್ಯಕರ್ತೆ ನಂದಿನಿ ನಾಗರಾಜ ಅವರು ದೂರು ದಾಖಲಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೂ … Continued

ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು…

ಚಂಡೀಗಢ: ಹರಿಯಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಬಿಜೆಪಿ ಬುಧವಾರ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿಯು ರೋಹ್ಟಕ್, ಸಿರ್ಸಾ ಮತ್ತು ಕರ್ನಾಲ್‌ನಲ್ಲಿ ದೊಡ್ಡ ಗೆಲುವುಗಳನ್ನು ದಾಖಲಿಸಿದೆ, ಅಲ್ಲಿ ಅಭ್ಯರ್ಥಿಗಳು ತಮ್ಮ ಕಾಂಗ್ರೆಸ್ ವಿರೋಧಿಗಳ ವಿರುದ್ಧ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಬಿಜೆಪಿಯು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 10 ಮೇಯರ್ ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದಿದೆ. … Continued

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued

ಕೆಲ ಕಾಂಗ್ರೆಸ್‌ ನಾಯಕರು ಬಿಜೆಪಿಗಾಗಿ ಕೆಲಸ ಮಾಡ್ತಾರೆ, ಅಂತಹ 30-40 ನಾಯಕರನ್ನು ಪಕ್ಷದಿಂದ ಕಿತ್ತೆಸೆಯಬಹುದು ; ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆ

ಅಹಮದಾಬಾದ್‌ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ತಮ್ಮ ಪಕ್ಷದ ನಾಯಕರ ವಿರುದ್ಧವೇ ಸ್ಫೋಟಕ ಹೇಳಿಕೆ ನೀಡಿದ್ದು ಪಕ್ಷದ ಕೆಲ ನಾಯಕರು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಗತ್ಯಬಿದ್ದರೆ ಅಂತಹ 30-40 ಕಾಂಗ್ರೆಸ್ ನಾಯಕರನ್ನು ವಜಾ ಮಾಡಬಹುದು ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಗುಜರಾತ್ ಪ್ರವಾಸದ ಎರಡನೇ ದಿನ ಈ ಹೇಳಿಕೆಗಳನ್ನು … Continued

ಸಾವರ್ಕರ್ ಮಾನನಷ್ಟ ಪ್ರಕರಣ : ಕೋರ್ಟಿಗೆ ಹಾಜರಾಗದೇ ಇದ್ದುದಕ್ಕೆ ರಾಹುಲ್ ಗಾಂಧಿಗೆ ದಂಡ

ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚುವರಿ … Continued

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡ

ಬೆಂಗಳೂರು : ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ. ರಾಜ್ಯಾದ್ಯಂತ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವಾಗ, ಆಡಳಿತಾರೂಢ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ 4ರಷ್ಟು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ನಿರ್ಧರಿಸಿದೆ ಎಂದು ಬಿಜೆಪಿ … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ರೋಹಿತ್ ಶರ್ಮಾ ವಿವಾದ : ಮುಜುಗರಕ್ಕೊಳಗಾದ ನಂತರ ಪಕ್ಷದ ನಾಯಕಿಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಡಿಲೀಟ್‌ ಮಾಡಲು ಸೂಚಿಸಿದ ಕಾಂಗ್ರೆಸ್‌

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಹಾಗೂ ಅವರ ಸಾಮರ್ಥ್ಯದ ಕುರಿತು ಪಕ್ಷದ ವಕ್ತಾರೆ ಶಮಾ ಮೊಹಮ್ಮದ್ ಮಾಡಿದ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತವಾದ ನಂತರ ಕಾಂಗ್ರೆಸ್ ಅವರ ಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಡಿಲೀಟ್‌ ಮಾಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಭಾನುವಾರ ಪಂದ್ಯದ … Continued