ಕೆಪಿಎಸ್‌ಸಿ ಎಇಇ ನೇಮಕಾತಿಯಲ್ಲಿ ಅಕ್ರಮ ಆರೋಪ : ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ 2022ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ … Continued

ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ

ನವದೆಹಲಿ : ವಂದೇ ಮಾತರಂಗೆ ಸಂಬಂಧಿಸಿದಂತೆ 1937ರಲ್ಲಿ ಅಂದಿನ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಅಂಗೀಕರಿಸಿದ್ದ ನಿರ್ಣಯಕ್ಕೆ ಬದ್ಧವಾಗಿರಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಬುಧವಾರ ತೀರ್ಮಾನಿಸಿದೆ. ಇದರಂತೆ, ಇನ್ನು ಮುಂದೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕರು … Continued

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆಗಸ್ಟ್ 14ರಂದು ನಡೆಯಲಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾಗಿದ್ದು, ಸ್ಪೀಕರ್ ಚುನಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ (ಪ್ರೊ-ಟೆಮ್ ಸ್ಪೀಕರ್) ಆಗಿ ನೇಮಕ ಮಾಡಿದ್ದಾರೆ. … Continued

ʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆ

ನವದೆಹಲಿ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಗಳಿಗೆ ‘ನೈಜ ಜನರೇಷನ್‌ ಝೆಡ್‌’ (Real Gen Z) ಪಾಲ್ಗೊಂಡಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ವಿದ್ಯಾರ್ಥಿಗಳ ವಿಚಾರಕ್ಕೆ ಸಂಬಂಧಿಸಿದ ಪ್ರತಿಭಟನೆಗಳನ್ನು ‘ಕಾಕ್ರೋಚ್‌ ಜನತಾ ಪಾರ್ಟಿ’ (CJP) ನಡೆಸಿದ ಪ್ರತಿಭಟನೆಗಳಿಗೆ ಹೋಲಿಕೆ ಮಾಡುವಂತಹ ಹೇಳಿಕೆಗಳನ್ನು ನೀಡುವಾಗ ಪಕ್ಷದ ನಾಯಕರು … Continued

ಉಡುಪಿ: ಕಾಂಗ್ರೆಸ್‌ ಮುಖಂಡ- ಉದ್ಯಮಿ ಡೇವಿಡ್ ಡಿ’ಸೋಜಾಗೆ ಗುಂಡಿಕ್ಕಿ ಹತ್ಯೆ

ಉಡುಪಿ : ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು  ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ … Continued

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ (Legislative Council Chairman) ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಇಂದು (ಆಗಸ್ಟ್‌ 7) ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು, ಶುಕ್ರವಾರ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜೊತೆ ಸುಮಾರು 10 ನಿಮಿಷಗಳ … Continued

ಸಚಿವ ಸಂಪುಟ ವಿಸ್ತರಣೆ ; ಕೊನೆ ಕ್ಷಣದ ಬದಲಾವಣೆಗಳು, ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ, ರಾಜೀನಾಮೆ ಮಾತುಗಳು…ಪ್ರತಿಭಟನೆಗಳು

ಬೆಂಗಳೂರು: ಸುಮಾರು ಎರಡು ತಿಂಗಳುಗಳ ಕಾಲ ಎಐಸಿಸಿ ಮಟ್ಟದಲ್ಲಿ ನಡೆದ ಸುದೀರ್ಘ ಸಮಾಲೋಚನೆಗಳ ಬಳಿಕ ಅಂತಿಮಗೊಂಡಿದ್ದ ಕಾಂಗ್ರೆಸ್‌ನ ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ, ಕೊನೆಯ ಕ್ಷಣದ ಬದಲಾವಣೆಗಳು, ಆಂತರಿಕ ಅಸಮಾಧಾನ, ರಾಜೀನಾಮೆ ನೀಡುವುದಾಗಿ ಘೋಷಣೆ ಹಾಗೂ ಪ್ರತಿಭಟನೆಗಳಿಂದಾಗಿ ಭಾರೀ ಸುದ್ದಿಯಾಗಿದೆ ಸೋಮವಾರ ಎಐಸಿಸಿ 20 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ, ದಿನವಿಡೀ ಗೊಂದಲ ಮತ್ತು … Continued

ಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ೯ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸೋಮವಾರ (ಆಗಸ್ಟ್‌ 3) ನಡೆದ ಸಚಿವ ಸಂಪುಟದ ವಿಸ್ತರಣೆ ವೇಳೆ 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.  ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಬೀದರ, ವಿಜಯನಗರ ಜಿಲ್ಲೆಗಳಿಗೆ ಮಂತ್ರಿ … Continued