ತಮಿಳುನಾಡಿನಲ್ಲಿ 2019ರ ಸೂತ್ರದಂತೆ ಸ್ಥಾನ ಹಂಚಿಕೆ ಮಾಡಿದ ಡಿಎಂಕೆ : ಕಾಂಗ್ರೆಸ್ಸಿಗೆ 9 ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಡಿಎಂಕೆ ಪಕ್ಷವು ತನ್ನ ಇಂಡಿಯಾ ಬ್ಲಾಕ್ ಮಿತ್ರವಾದ ಕಾಂಗ್ರೆಸ್ಸಿಗೆ ತಮಿಳುನಾಡಿನಲ್ಲಿ ಒಂಬತ್ತು ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನು ನೀಡಿದೆ. ಡಿಎಂಕೆಯ 2019 ರ ಸೀಟು ಹಂಚಿಕೆಯ ಸೂತ್ರದಂತೆ ಈ ಬಾರಿಯೂ … Continued

ಕಾಂಗ್ರೆಸ್ಸಿಗೆ ಆಘಾತ : ಸೋನಿಯಾ ಗಾಂಧಿ ಕುಟುಂಬದ ಆಪ್ತ ಬಿಜೆಪಿಗೆ ಸೇರ್ಪಡೆ

ಭೋಪಾಲ್ : ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವವಾರು ನಾಯಕರು ಶನಿವಾರ ಭೋಪಾಲ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ … Continued

ಲೋಕಸಭೆ ಚುನಾವಣೆ : ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಕಾಂಗ್ರೆಸ್ಸಿಗೆ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಎಂದ ಸಮೀಕ್ಷೆ; ಬಿಜೆಪಿಗೆ ಎಷ್ಟು ಸ್ಥಾನ..?

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈಗಲೇ ದೇಶದಲ್ಲಿ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್​ ನೌ ಸುದ್ದಿ ವಾಹಿನಿ- ಇಟಿಜಿ ನಡೆಸಿರುವ ಸಮೀಕ್ಷೆಯಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್ಸಿನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕರ್ನಾಟಕದಿಂದ 7 ಅಭ್ಯರ್ಥಿಗಳಿಗೆ ಟಿಕೆಟ್‌…!

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದಿಂದ 7, ಕೇರಳದ 15, ತೆಲಂಗಾಣದ 4, ಛತ್ತೀಸ್​ಗಡದ 6, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ​ ಹಾಗೂ ತ್ರಿಪುರಾದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 39 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಈಗ ಚುನಾವಣೆ ನಡೆದರೆ ಎನ್‌ಡಿಎ ಎಷ್ಟು ಗೆಲ್ಲಲಿದೆ..? ಇಂಡಿಯಾ ಮೈತ್ರಿಕೂಟ ಗೆಲ್ಲುವುದೆಷ್ಟು..? : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್ ಹೇಳಿದ್ದೇನೆಂದರೆ…

ನವದೆಹಲಿ: ಈಗಲೇ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಮಂಗಳವಾರ (ಮಾರ್ಚ್ 5) ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್ (ತೃಣಮೂಲ ಕಾಂಗ್ರೆಸ್ ಇಲ್ಲದೆ) 98 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಮಮತಾ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸ್ವೀಪ್, ತೆಲಂಗಾಣ, ತಮಿಳುನಾಡಿನಲ್ಲಿ ಬಿಜೆಪಿ ಗಮನಾರ್ಹ ಸಾಧನೆ; ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌

ಬೆಂಗಳೂರು : 2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಭವಿಷ್ಯ ನುಡಿದಿದೆ. ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಸೋಮವಾರ (ಮಾರ್ಚ್ 4) ಪ್ರಕಟವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ … Continued

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ಸಿನ ಡಾ ನಾಸಿರ್‌ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ‘ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ’ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ … Continued

ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶವೇ ಹೊರತು ನಮಗಲ್ಲ : ವಿವಾದಕ್ಕೆ ಕಾರಣವಾದ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಹರಿಪ್ರಸಾದ … Continued