ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್‌ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…

ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್‌ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್‌ ಸಂಪೂರ್ಣ ಬದಲಾಯಿತು. … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued

ಮತಗಟ್ಟೆ ಸಮೀಕ್ಷೆಗಳು ಠುಸ್‌ : ಹರ್ಯಾಣದಲ್ಲಿ ಬಿಜೆಪಿ ಮ್ಯಾಜಿಕ್‌ ; ಹ್ಯಾಟ್ರಿಕ್‌ ಗೆಲುವಿನತ್ತ ಕಮಲ ಪಕ್ಷ…!

ನವದೆಹಲಿ : ಹರ್ಯಾಣದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳು ತಲೆಕೆಳಗಾಗುವುದು ಬಹುತೇಕ ನಿಚ್ಚಳವಾಗಿದ್ದು, ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲು ಇಡುತ್ತಿದೆ. ಮಂಗಳವಾರ ಮಧ್ಯಾಹ್ನ 12:55ರ ಹೊತ್ತಿಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 49ರಲ್ಲಿ ಬಿಜೆಪಿ ಮುಂದಿದ್ದರೆ, ಕಾಂಗ್ರೆಸ್ 34ರಲ್ಲಿ ಮುನ್ನಡೆ ಸಾಧಿಸಿದೆ. ಏಳು ಎಕ್ಸಿಟ್ ಪೋಲ್‌ಗಳ ಪ್ರಕಾರ ಕಾಂಗ್ರೆಸ್ 55 ಸ್ಥಾನಗಳನ್ನು ಗೆಲ್ಲುತ್ತದೆ, ಹಾಗೂ … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ವೀಡಿಯೊ..: ಸಾವರ್ಕರ್ ದನದ ಮಾಂಸ ತಿನ್ನುತ್ತಿದ್ದರು, ಗೋಹತ್ಯೆಯ ವಿರುದ್ಧ ಇರಲಿಲ್ಲ : ಭಾರೀ ವಿವಾದಕ್ಕೆ ಕಾರಣವಾದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯ ವಿರುದ್ಧ ಇರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿರುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ‘ಚಿತ್ಪಾವನ ಬ್ರಾಹ್ಮಣ’ರಾದ ಸಾವರ್ಕರ್ ಮಾಂಸ ತಿನ್ನುತ್ತಿದ್ದರು. ಅವರು ಮಾಂಸಾಹಾರಿ ಮತ್ತು ಅವರು ಗೋಹತ್ಯೆಯ ವಿರೋಧಿಯಾಗಿರಲಿಲ್ಲ. ಅವರು ಗೋಮಾಂಸವನ್ನೂ ತಿನ್ನುತ್ತಿದ್ದರು ಎಂದು … Continued

ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಪರ ಬ್ಯಾಟ್‌ ಬೀಸಿದ ಜೆಡಿಎಸ್‌ ನಾಯಕ..

ಮೈಸೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ನಾಯಕ ಜಿ.ಟಿ.ದೇವೇ ಗೌಡ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಬ್ಯಾಟ್‌ ಬೀಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued