ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued

ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

ರಾಯ್ಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಅಮೆರಿಕ ಭೇಟಿಯ ವೇಳೆ ನೀಡಿದ ಹೇಳಿಕೆಗಳು  ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದೆ ಎಂದು ಆರೋಪಿಸಿ ಛತ್ತೀಸ್‌ಗಢದಲ್ಲಿ ರಾಹುಲ್‌ ಗಾಂಧಿಯವರ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಬಿಲಾಸ್‌ಪುರ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

ವೀಡಿಯೊ…| ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ-ಅಶ್ಲೀಲ ಕಾಮೆಂಟ್‌ ; ವ್ಯಕ್ತಿಯ ಮನೆಗೇ ತೆರಳಿ ಕಾಂಗ್ರೆಸ್‌ ನಾಯಕಿ-ಬೆಂಬಲಿಗರಿಂದ ಗೂಸಾ

ವಾರಾಣಸಿ : ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿರುವುದು ಮತ್ತು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಮಹಿಳಾ ನಾಯಕಿ ರೋಶನಿ ಕುಶಾಲ ಜೈಸ್ವಾಲ್ ಹಾಗೂ ಅವರ ಬೆಂಬಲಿಗರು ಕೇಸರಿ ರಾಜೇಶ ಸಿಂಗ್ ಎಂಬ ವ್ಯಕ್ತಿಯನ್ನು ಆತನ ನಿವಾಸಕ್ಕೆ ತೆರಳಿ ಥಳಿಸಿದ್ದಾರೆ. ಮನೆಗೆ ನುಗ್ಗಿ, ಹೆಂಡತಿ ಮಕ್ಕಳ ಮುಂದೆಯೇ ಆತನಿಗೆ ಥಳಿಸಿದ್ದಾರೆ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು … Continued

ಹರಿಯಾಣ ವಿಧಾನಸಭೆ ಚುನಾವಣೆ; ಕುಸ್ತಿಪಟು ವಿನೇಶ್‌ ಫೋಗಟ್‌ ಗೆ ಕಾಂಗ್ರೆಸ್‌ ಟಿಕೆಟ್‌

ಚಂಡೀಗಢ : ಜುಲಾನಾದಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಲಿಂಪಿಯನ್‌ ಕುಸ್ತಿಪಟು ವಿನೇಶ್ ಫೋಗಟ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಜುಲಾನ್‌ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಇದು ತೂಕದ ಕಾರಣಕ್ಕೆ ಒಲಿಂಪಿಕ್ ನಿಂದ ಅನರ್ಹತೆಗೊಂಡ ನಂತರ ಪ್ರಸಿದ್ಧ ಕುಸ್ತಿಪಟುವಿನ ಜೀವನದಲ್ಲಿ ಹೊಸ ಆರಂಭವನ್ನು ಗುರುತಿಸಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರ, ಮತ್ತು … Continued