ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

2014 ರಲ್ಲಿ ಕಾಂಗ್ರೆಸ್ ಸೋಲಿಗೆ ಸಿಐಎ, ಮೊಸಾದ್ ಸಂಚು ರೂಪಿಸಿದ್ದವು: ಕಾಂಗ್ರೆಸ್‌ ಮಾಜಿ ಸಂಸದರ ಹೇಳಿಕೆ

ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಅಮೆರಿಕಾದ ಗುಪ್ತಚರ ಸಂಸ್ಥೆ ಸಿಐಎ (CIA) ಮತ್ತು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸ್ಸಾದ್ (Mossad) ಸಂಚು ರೂಪಿಸಿದ್ದವು ಎಂದು ಕಾಂಗ್ರೆಸ್‌ನ ಮಾಜಿ ಸಂಸದರಾದ ಕುಮಾರ ಕೇತ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇತ್ಕರ್, ಈ ಹೇಳಿಕೆ … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?

ಬೆಂಗಳೂರು:ಕರ್ನಾಟಕದ ಕಾಂಗ್ರೆಸ್‌(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued

ಬಿಹಾರದಲ್ಲಿ ಹೀನಾಯ ಸೋಲಿನ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ತೀವ್ರ ; ಕಾಂಗ್ರೆಸ್‌ ನಾಯಕತ್ವದ ಮುಂದೆ ದೊಡ್ಡ ಸವಾಲು…

ಬಿಹಾರದಲ್ಲಿ ಭಾರಿ ಹಿನ್ನಡೆಯನ್ನು ಅನುಭವಿಸಿದ ನಂತರ ‘ಇಂಡಿಯಾ’ (INDIA) ಮೈತ್ರಿಕೂಟವು ಅತ್ಯಂತ ಗಂಭೀರವಾದ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮೈತ್ರಿಕೂಟದ ಹಲವಾರು ಪ್ರಾದೇಶಿಕ ಅಂಗಪಕ್ಷಗಳು ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಬಹಿರಂಗವಾಗಿ ಪ್ರಶ್ನೆಗಳನ್ನು ಎತ್ತುತ್ತಿವೆ. ಇವು ಆರಂಭದಲ್ಲಿ ಅಸಮಾಧಾನದ ಸಣ್ಣ ಮಾತುಗಳಾಗಿದ್ದವು, ಆದರೆ ಬಿಹಾರದ ಚುನಾವಣೆಯಲ್ಲಿ ಮಹಾಘಟಬಂಧನದ ಹೀನಾಯ ಸೋಲಿನ … Continued

ಇದು ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುಗ್ಗಿಸುವ ಪ್ರಯತ್ನ ; ರಾಹುಲ್ ವಿರುದ್ಧ 272 ಮಾಜಿ ನ್ಯಾಯಾಧೀಶರು, ಅಧಿಕಾರಿಗಳ ಗುಂಪಿನಿಂದ ಪತ್ರ

ನವದೆಹಲಿ: ಸುಮಾರು 300 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು, ಮಾಜಿ ಸೇನಾ ಅಧಿಕಾರಿಗಳು ಮತ್ತು ರಾಜತಾಂತ್ರಿಕರ ಗುಂಪು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ‘ವೋಟ್ ಚೋರಿ’ ಅಭಿಯಾನದ ಅಡಿಯಲ್ಲಿ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದೆ. ಪತ್ರಕ್ಕೆ ಸಹಿ ಮಾಡಿದ 272 ಜನರಲ್ಲಿ 16 ನಿವೃತ್ತ ನ್ಯಾಯಾಧೀಶರು, … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued

ಅಕ್ರಮ ಅದಿರು ರಫ್ತು ಪ್ರಕರಣ; ಕಾರವಾರ ಶಾಸಕ ಸತೀಶ ಸೈಲ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೈಲ್‌ ಹಾಗೂ ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಬೆಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಯಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಬೆಂಗಳೂರಿನ  ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ದೂರು ದಾಖಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ತಿಳಿಸಿದೆ. ಕಬ್ಬಿಣದ … Continued

ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಪ್ರಕಟ ; ಬಿಜೆಪಿ, ಕಾಂಗ್ರೆಸ್ಸಿಗೆ ಸಮಬಲ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಗಳ ಮತ ಎಣಿಕೆಯು ಮಿಶ್ರ ಫಲಿತಾಂಶವನ್ನು ಬಹಿರಂಗಪಡಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಗಮನಾರ್ಹ ಗೆಲುವು ಸಾಧಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ರಾಜಸ್ಥಾನದ ಅಂತಾ ಕ್ಷೇತ್ರ : ಕಾಂಗ್ರೆಸ್ ಪಕ್ಷವು ರಾಜಸ್ಥಾನದ ಅಂತಾ ಕ್ಷೇತ್ರದಲ್ಲಿ ಪ್ರಮುಖ ಗೆಲುವು ಸಾಧಿಸಿದೆ. … Continued