ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ‘ಭ್ರಷ್ಟಾಚಾರ’ ಆರೋಪ; ನ್ಯಾಯಾಂಗ ತನಿಖೆಗೆ ಕಾಗೇರಿ ಆಗ್ರಹ

ಬೆಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರ (UT Khader) ಅವಧಿಯಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ ಎಂದು ಸಂಸದ ಮತ್ತು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ ಆ ಸ್ಥಾನವು ಮುಕ್ತವಾಗಬೇಕು. ಯು.ಟಿ. … Continued

ಬಿಹಾರ ಚುನಾವಣೆ : ವಾರಗಳ ಹಗ್ಗಜಗ್ಗಾಟದ ನಂತರ ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಹೆಸರು ಘೋಷಣೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅನೇಕ ದಿನಗಳ ಊಹಾಪೋಹಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಯಿತು. ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ ಸಹಾನಿ ಅವರನ್ನು ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ … Continued

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲಕ್ಕೆ ಐಷಾರಾಮಿ ಕಾರುಗಳ ಖರೀದಿ ನಿರ್ಧಾರ ಟೀಕಿಸಿದ ಕಾಂಗ್ರೆಸ್‌

ನವದೆಹಲಿ: ಲೋಕಪಾಲ (ಭ್ರಷ್ಟಾಚಾರ ನಿಗ್ರಹ ಸಂಸ್ಥೆ) ತನ್ನ ಸದಸ್ಯರಿಗಾಗಿ ತಲಾ ಸುಮಾರು ₹ 70 ಲಕ್ಷ ಮೌಲ್ಯದ ಏಳು ಬಿಎಂಡಬ್ಲ್ಯೂ ಕಾರುಗಳನ್ನು ಖರೀದಿಸಲು ನಿರ್ಧರಿಸಿದೆ ಎಂಬ ವರದಿಯು ತೀವ್ರ ಟೀಕೆಗೆ ಗುರಿಯಾಗಿದೆ. ಸಮಗ್ರತೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಂಸ್ಥೆಗೆ ಇದು ” ವಿಪರ್ಯಾಸ” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಲೋಕಪಾಲ ಕುರಿತ ಸಂಸದೀಯ ಸಮಿತಿಯ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಶಾಸಕ ನಂಜೇಗೌಡ ಆಯ್ಕೆ ಅಸಿಂಧು ; ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ : ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ … Continued

ಬಿಹಾರ ಚುನಾವಣೆ ; ತೇಜಸ್ವಿ ಯಾದವಗೆ ಇರುವ 6 ಪ್ರಮುಖ ಸವಾಲುಗಳು

ಬಿಹಾರದ ಸಂಕೀರ್ಣ ರಾಜಕೀಯ ರಂಗದಲ್ಲಿ 2025ರ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಎನ್‌ಡಿ ಮೈತ್ರಿಕೂಟ ಹಾಗೂ ಆರ್‌ಜೆಡಿ ನೇತೃತ್ವದ ಮಹಾಘಟಬಂಧನದ ನಡುವೆ ತೀವ್ರ ಹಣಾಹಣಿಯ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಮುನ್ಸೂಚನೆ ನೀಡಿವೆ. ಬಿಹಾರದ ಪ್ರಮುಖ ವಿಪಕ್ಷವಾದ ಆರ್‌ಜೆಡಿಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ ಯಾದವ್‌ ಅವರ ಪುತ್ರ 35 ವರ್ಷದ ತೇಜಸ್ವಿ ಯಾದವ್ ಅವರು … Continued

ಬ್ಲೂ ಸ್ಟಾರ್ ಕಾರ್ಯಾಚರಣೆ ಒಂದು ‘ತಪ್ಪು’ ನಿರ್ಧಾರವಾಗಿತ್ತು ; ಇಂದಿರಾ ಗಾಂಧಿ ತಮ್ಮ ಪ್ರಾಣವನ್ನೇ ತೆತ್ತರು : ಪಿ ಚಿದಂಬರಂ

 ಕಸೌಲಿ (ಹಿಮಾಚಲ ಪ್ರದೇಶ): ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆದೇಶದ ಮೇರೆಗೆ 1984ರಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್‌ನಿಂದ ಉಗ್ರರನ್ನು ಹೊರಹಾಕಲು ನಡೆಸಿದ ‘ಆಪರೇಷನ್ ಬ್ಲೂ ಸ್ಟಾರ್’ ಒಂದು “ತಪ್ಪು ಮಾರ್ಗ”ವಾಗಿತ್ತು. ಈ ತಪ್ಪಿಗೆ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿಯವರು ತಮ್ಮ ಪ್ರಾಣವನ್ನೇ ತೆತ್ತರು ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. ಆದಾಗ್ಯೂ, ಈ … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಹಗರಣ : 50 ಕೋಟಿ ರೂ.ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶಕ್ಕೆ ಪಡೆದ ಇ.ಡಿ.

ನವದೆಹಲಿ: ಬಂಧಿತ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರ ಕೆಲವರು ಭಾಗಿಯಾಗಿದ್ದಾರೆ ಎನ್ನಲಾದ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಹೊಸದಾಗಿ ನಡೆಸಿದ ಶೋಧದ ಸಮಯದಲ್ಲಿ 50.33 ಕೋಟಿ ರೂ. ಮೌಲ್ಯದ ಸುಮಾರು 40 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಎರಡು ಲಾಕರ್‌ಗಳಿಂದ 24 ಕ್ಯಾರೆಟ್ … Continued