ಕಾಂಗ್ರೆಸ್‌ ವಿರುದ್ಧದ ಆಕ್ಷೇಪಾರ್ಹ ಅನಿಮೇಟೆಡ್‌ ವೀಡಿಯೊ : ನಡ್ಡಾ, ಮಾಳವಿಯಾಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹ ಅನಿಮೇಟೆಡ್ ವೀಡಿಯೊಕ್ಕೆ ಆಕ್ಷೇಪಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ ಮಾಳವಿಯಾ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಕಲಬುರ್ಗಿಯ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ … Continued

ಬಳ್ಳಾರಿ ನೂತನ ಮೇಯರ್ ಆಗಿ ನಂದೀಶಬಾಬು, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್‌ ಆಗಿ ಕಾಂಗ್ರೆಸ್ಸಿನ ಮುಲ್ಲಂಗಿ ನಂದೀಶಬಾಬು ಶುಕ್ರವಾರ ಆಯ್ಕೆಯಾಗಿದ್ದಾರೆ. ಉಪ ಮೇಯರ್‌ ಆಗಿ ಕಾಂಗ್ರೆಸ್ಸಿನ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 21 ಹಾಗೂ ಪಕ್ಷೇತರರಾಗಿ ಆರಿಸಿ ಬಂದು ಕಾಂಗ್ರೆಸ್ ಬೆಂಬಲಿಸಿರುವ 5 ಜನ ಸದಸ್ಯರು ಸೇರಿದಂತೆ 26 ಜನರ … Continued

ನೇಣು ಬಿಗಿದುಕೊಂಡು ಕಾಂಗ್ರೆಸ್‌ ಶಾಸಕನ ಪತ್ನಿ ಆತ್ಮಹತ್ಯೆ…!?

ಕರೀಂನಗರ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾ ದೇವಿ ಅವರು ಜೂನ್ 20 ಶುಕ್ರವಾರ ತಡರಾತ್ರಿ ಅಲ್ವಾಲ್‌ನ ಪಂಚಶೀಲ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸತ್ಯಂ ಅವರು ಹಿಂದಿನ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದಲ್ಲಿದ್ದರು. ಮೂಲಗಳ ಪ್ರಕಾರ ರೂಪಾ ದೇವಿ … Continued

ವಿಪಕ್ಷ ನಾಯಕನಾಗಲು ಒಪ್ಪದ ರಾಹುಲ್ ಗಾಂಧಿ : ಕಾಂಗ್ರೆಸ್ಸಿನಲ್ಲಿ ಮುನ್ನೆಲೆಗೆ ಮೂವರ ಹೆಸರುಗಳು…!?

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳ ಮಧ್ಯೆಯೇ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ತೆಗೆದುಕೊಳ್ಳಲು ರಾಹುಲ್ ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಮೂರು ಹೆಸರುಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued

ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಜೊತೆಗಿನ ಮೋದಿ ಭೇಟಿ ಅಣಕಿಸಿದ ಕಾಂಗ್ರೆಸ್; ಭಾರೀ ಆಕ್ರೋಶದ ನಂತರ ಕ್ರೈಸ್ತರ ಕ್ಷಮೆಯಾಚನೆ

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೇರಳ ಕಾಂಗ್ರೆಸ್‌ ಘಟಕವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಿದೆ. ಅಳಿಸಲಾದ … Continued

ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!

ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ”‌ ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ  ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued

ಕಾಂಗ್ರೆಸ್‍ನ ಸಂಸದೀಯ ಪಕ್ಷದ ನಾಯಾಕಿಯಾಗಿ ಸೋನಿಯಾ ಗಾಂಧಿ ಪುನಃ ಆಯ್ಕೆ

ನವದೆಹಲಿ: ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಪಕ್ಷದ ಸಂಸದೀಯ ಪಾರ್ಟಿ ಅಧ್ಯಕ್ಷರಾಗಿ (Congress Parliamentary Party Chairperson) ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ … Continued

ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕ : ಸಿಡಬ್ಲ್ಯುಸಿಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಶನಿವಾರ (ಜೂನ್ 8) ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ (ಎಲ್‌ಒಪಿ) ನೇಮಕ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸರ್ವಾನುಮತದಿಂದ ಮನವಿ ಮಾಡಿದೆ. ಸಂಸತ್ತಿನ ಒಳಗೆ ಈ ಅಭಿಯಾನ … Continued