ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued

ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಬುಧವಾರ (ಏಪ್ರಿಲ್‌ ೩) … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಲೋಕಸಭೆ ಚುನಾವಣೆ : 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ಕಡಪಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಇತ್ತೀಚಿನ ಪಟ್ಟಿಯಲ್ಲಿ ಒಡಿಶಾದಿಂದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದಿಂದ ಐದು ಅಭ್ಯರ್ಥಿಗಳು, ಬಿಹಾರದಿಂದ ಮೂವರು ಮತ್ತು ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಬಿಹಾರದಲ್ಲಿ … Continued

ಕೆಪಿಸಿಸಿ ಪುನರ್ರಚನೆ : 7 ಜಿಲ್ಲಾಧ್ಯಕ್ಷರು, 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕವನ್ನೂ ಮಾಡಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ ಬಾಬು ಅವರನ್ನು ನೇಮಕ ಮಾಡಲಾಗಿದ್ದು, ವಿನಯ … Continued