ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ಮನಮೋಹನ್‌ ಸಿಂಗ್‌ ನಿಧನದ ಶೋಕಾಚರಣೆ ಮಧ್ಯೆ ಹೊಸವರ್ಷದ ಪಾರ್ಟಿಗೆ ವಿಯೆಟ್ನಾಂಗೆ ಹೊರಟ ರಾಹುಲ್‌ ಗಾಂಧಿ ; ಬಿಜೆಪಿ ವಾಗ್ದಾಳಿ

ನವದೆಹಲಿ: ಸೋಮವಾರ ರಾಜಕೀಯ ವಿವಾದ ಎಬ್ಬಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯವರ ಸಾವನ್ನು ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳವೀಯ, “ಗಾಂಧಿಗಳು ಮತ್ತು … Continued

2023-24ರಲ್ಲಿ ಬಿಜೆಪಿಗೆ ಬಂತು 2600 ಕೋಟಿ ರೂ. ದೇಣಿಗೆ ; ಕಾಂಗ್ರೆಸ್ಸಿಗೆ ಬಂದಿದ್ದೆಷ್ಟು..?

ನವದೆಹಲಿ: ಚುನಾವಣಾ ಆಯೋಗ (ಇಸಿ) ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ವರದಿಗಳ ಪ್ರಕಾರ 2023-24ರ ಅವಧಿಯಲ್ಲಿ ಆಡಳಿತಾರೂಢ ಬಿಜೆಪಿಯು 2,604.74 ಕೋಟಿ ರೂ.ಗೂ ಹೆಚ್ಚು ದೇಣಿಗೆಯನ್ನು ಪಡೆದಿದೆ. ಪ್ರತಿಪಕ್ಷ ಕಾಂಗ್ರೆಸ್ 281.38 ಕೋಟಿ ರೂ.ಗಳನ್ನು ಪಡೆದುಕೊಂಡಿದೆ ಎಂದು ವರದಿಗಳಲ್ಲಿ ಪಟ್ಟಿ ಮಾಡಲಾದ ದೇಣಿಗೆಗಳನ್ನು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಾರ್ಚ್ 31, 2024 ರವರೆಗೆ ಸ್ವೀಕರಿಸಲಾಗಿದೆ. 2019ರ ಲೋಕಸಭೆ … Continued

ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ಮನಮೋಹನ್ ಸಿಂಗ್ ಸ್ಮಾರಕದ ವಿಚಾರವಾಗಿ ಬಿಜೆಪಿ vs ಕಾಂಗ್ರೆಸ್

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಶುಕ್ರವಾರ ಮಾತಿನ ಚಕಮಕಿ ನಡೆದಿದೆ. ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್ ಮನವಿಯನ್ನು ಕೇಂದ್ರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾತನಾಡಿರುವ ರಾಜನೀತಿಜ್ಞರಿಗೆ ಸ್ಮಾರಕಗಳೊಂದಿಗೆ … Continued

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ

ಬೆಂಗಳೂರು : ಶಾಸಕ ಮುನಿರತ್ನ ಅವರು ದಿ.ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ತಲೆಗೆ ಮೊಟ್ಟೆ ಎಸೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಲಗ್ಗೆರೆ ಬಳಿಯ ಲಕ್ಷ್ಮೀದೇವಿ ನಗರದಲ್ಲಿ ಬುಧವಾರ ಮಧ್ಯಾಹ್ನ 12:30ಕ್ಕೆ ಶಾಸಕ ಮುನಿರತ್ನ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದುಕೊಂಡು … Continued

ಚುನಾವಣಾ ನಿಯಮಾವಳಿ ತಿದ್ದುಪಡಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಚುನಾವಣಾ ನಿಯಮಾವಳಿ 1961ಕ್ಕೆ ಈಚೆಗೆ ಮಾಡಲಾದ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆ ಹೊಂದಿದ್ದು, ಸಾರ್ವಜನಿಕ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನಿಗೆ ಏಕಪಕ್ಷೀಯವಾಗಿ ತಿದ್ದುಪಡಿ ಮಾಡುವುದನ್ನು ಒಪ್ಪಲಾಗದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು … Continued