ಇವಿಎಂ ಹೇಗೆ ತಿರುಚಬಹುದು ಎಂಬುದನ್ನು ತೋರಿಸಿ : ಒಮರ್‌ ಅಬ್ದುಲ್ಲಾ ನಂತರ ಕಾಂಗ್ರೆಸ್‌ ನಿಲುವು ಪ್ರಶ್ನಿಸಿದ ಟಿಎಂಸಿ

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಕಾಂಗ್ರೆಸ್ ನೇತೃತ್ವದ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಕಸದ ಬುಟ್ಟಿಗೆ ಹಾಕಿರುವ ಬೆನ್ನಲ್ಲೇ ಮತ್ತೊಂದು ಪ್ರಮುಖ ವಿಪಕ್ಷವು ಇವಿಎಂ ಸುತ್ತಲಿನ ಕಾಂಗ್ರೆಸ್‌ ಪ್ರಶ್ನೆಗಳನ್ನು ತಳ್ಳಿಹಾಕಿದೆ. ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ತಿರುಚುವ ಬಗ್ಗೆ ಯಾವುದೇ ಪುರಾವೆ ಇದ್ದರೆ ಅದನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು ಎಂದು ತೃಣಮೂಲ ಕಾಂಗ್ರೆಸ್ … Continued

“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

75 ಬಾರಿ ಸಂವಿಧಾನ ಬದಲಾಯಿಸಿರುವ ಕಾಂಗ್ರೆಸ್…ಅದಕ್ಕೆ ತುರ್ತು ಪರಿಸ್ಥಿತಿ ಕಳಂಕ ಅಳಿಸಿಹಾಕಲು ಸಾಧ್ಯವಿಲ್ಲ ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನ ರಚನೆಕಾರರು ಭಾರತದ ವಿವಿಧತೆಯಲ್ಲಿ ಏಕತೆಯ ಬಲವನ್ನು ಆಚರಿಸಿದರೆ, ಕೆಲವರು ವಿಭಿನ್ನ ಮಾರ್ಗವನ್ನು ಆರಿಸಿಕೊಂಡರು ಎಂದು ಹೇಳಿದ್ದಾರೆ. “ಸಂವಿಧಾನವನ್ನು ಅಳವಡಿಸಿಕೊಳ್ಳುವ ಬದಲು, ಅವರು (ಕಾಂಗ್ರೆಸ್) ಅಪಶ್ರುತಿ ಮತ್ತು ನಕಾರಾತ್ಮಕತೆಯ ಬೀಜಗಳನ್ನು ಬಿತ್ತಿದ್ದಾರೆ” ಎಂದು ಸಂವಿಧಾನದ ಚರ್ಚೆಗೆ ಉತ್ತರಿಸಿದ ಪ್ರಧಾನಿ ಲೋಕಸಭೆಯಲ್ಲಿ … Continued

2024ರಲ್ಲಿ ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳೇನು ಗೊತ್ತೆ..? ಇಲ್ಲಿದೆ ಪಟ್ಟಿ

ನವದೆಹಲಿ: 2024 ರ ವರ್ಷ ಮುಗಿದು ೨೦೨೫ಕ್ಕೆ ಕಾಲಿಡುವ ಹಂತದಲ್ಲಿದ್ದೇವೆ. ಈ ವರ್ಷ ಜನರು ಯಾವ ಯಾವ ವಿಷಯಗಳನ್ನು ಹೆಚ್ಚಾಗಿ ತಿಳಿದುಕೊಳ್ಳಲು ಇಷ್ಟಪಟ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ (Google) ಸರ್ಚ್ ಇಂಜಿನ್ ವಾರ್ಷಿಕವಾಗಿ ತನ್ನ ವಿಶೇಷ “ಇಯರ್ ಇನ್ ಸರ್ಚ್” ವರದಿಯಲ್ಲಿ ವಿವಿಧ ಥೀಮ್‌ಗಳಲ್ಲಿ ಹೆಚ್ಚು ಹುಡುಕಲಾದ ವಿಷಯಗಳ ಪಟ್ಟಿಯನ್ನು ಮಾಡುತ್ತದೆ. ಬಿಡುಗಡೆಯಾದ 2024 ರ … Continued

ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್‌ಸಿಪಿ ಬೆಂಬಲ

 ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued

ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು? : ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಚಿವ ಪರಮೇಶ್ವರ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೇನು ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ … Continued

ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ನಾಟ್‌ ಓಕೆ..? ಆಪ್ ಜೊತೆ ಮೈತ್ರಿ ಇಲ್ಲ ; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್‌ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿವುದಾಗಿ ಶುಕ್ರವಾರ ಪ್ರಕಟಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ. ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued

ವಯನಾಡು ಉಪಚುನಾವಣೆ: ರಾಹುಲ್‌ ಗಾಂಧಿಗಿಂತ ಹೆಚ್ಚಿನ ಅಂತರದಲ್ಲಿ ಜಯಗಳಿಸಿದ ಸಹೋದರಿ ಪ್ರಿಯಾಂಕಾ ಗಾಂಧಿ…!

ತಿರುವನಂತಪುರಂ: ಇಡೀ ದೇಶದ ಗಮನ ಸೆಳೆದಿದ್ದ ವಯನಾಡು (Wayanad) ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹೋದರ ರಾಹುಲ್‌ ಗಾಂಧಿ … Continued