ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ಕರ್ನಾಟಕ ಸುವರ್ಣ ಸಂಭ್ರಮ : 100 ಸಾಧಕರಿಗೆ ವಿಶೇಷ ಪ್ರಶಸ್ತಿ ಪ್ರಕಟ

ಬೆಂಗಳೂರು : ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವೆಂಬರ್‌ 1ರಂದು ಕರ್ನಾಟಕ ಸಂಭ್ರಮ-50 ಅಭಿಯಾನದ ಸಮಾರೋಪ ನಡೆಯಲಿದೆ. ಸುವರ್ಣ ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಮಹಿಳಾ ಮತ್ತು 50 ಪುರುಷ ಸಾಧಕರು ಸೇರಿ ಒಟ್ಟು 100 ಸಾಧಕರಿಗೆ 2024ನೇ … Continued

ಹರಿಯಾಣ ಚುನಾವಣೆ : ನಿಮ್ಮ ನಿರಾಧಾರ ಆರೋಪಗಳು ಅರಾಜಕತೆ ಸೃಷ್ಟಿಸಬಹುದು; ಕಾಂಗ್ರೆಸ್ಸಿಗೆ ಚುನಾವಣಾ ಆಯೋಗ ತರಾಟೆ, ಆರೋಪಕ್ಕೆ 1,642 ಪುಟಗಳ ಉತ್ತರ…

ನವದೆಹಲಿ : ಇತ್ತೀಚೆಗಷ್ಟೇ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮಾಡಿದ “ಅಕ್ರಮ”ಗಳ ಆರೋಪಗಳನ್ನು “ಆಧಾರರಹಿತ” ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ತಿರಸ್ಕರಿಸಿದೆ. ಹಾಗೂ ತಮಗೆ ಅನುಕೂಲಕರವಲ್ಲದ ಚುನಾವಣಾ ಫಲಿತಾಂಶಗಳು ಬಂದಾಗ ಅನುಮಾನಗಳ ಹೊಗೆ ಹೆಚ್ಚಿಸದಂತೆ ಪಕ್ಷಕ್ಕೆ ಎಚ್ಚರಿಕೆ ನೀಡಿದೆ. ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಲವು ಆರೋಪಗಳನ್ನು ಮಾಡಿತ್ತು. ಇವಿಎಂ … Continued

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್‌ ತೀರ್ಪು

ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued

ಉಪಚುನಾವಣೆ : ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ಘೋಷಣೆ ಮಾಡಿದ ಕಾಂಗ್ರೆಸ್‌

ನವದೆಹಲಿ : ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಇಂದು ಗುರುವಾರ (ಅಕ್ಟೋಬರ್ 24) ಅಭ್ಯರ್ಥಿಯನ್ನು ಪ್ರಕಟಿಸಿದೆ. ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued

ವಯನಾಡು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಆಸ್ತಿ ಘೋಷಣೆ ; ಇವರಿಗಿಂತ ಪತಿಯ ಆಸ್ತಿ 5 ಪಟ್ಟು ಹೆಚ್ಚು

 ವಯನಾಡು : ವಯನಾಡು ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ತಮ್ಮ ಬಳಿ ಇರುವ ಆಸ್ತಿಯ ಮೌಲ್ಯವನ್ನು ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಸುಮಾರು 66 ಕೋಟಿ ರೂಪಾಯಿ ಮೌಲ್ಯದ ಆಸ್ತಿ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ … Continued