ಚನ್ನಪಟ್ಟಣ ಉಪಚುನಾವಣೆ | ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಯೋಗೇಶ್ವರ ; ಕಾಂಗ್ರೆಸ್‌ ಸೇರ್ಪಡೆ ಈಗ ಔಪಚಾರಿಕ

ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. … Continued

ಜಾರ್ಖಂಡ ಚುನಾವಣೆ | ಸೀಟು ಹಂಚಿಕೆ ಬಗ್ಗೆ ‘ಇಂಡಿಯಾ ಬಣ’ದಲ್ಲಿ ಮೂಡದ ಒಮ್ಮತ ; ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ..!

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆ (Jharkhand Assembly Election) ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ (RJD) ಹೇಳಿದೆ. ಸೀಟು ಹಂಚಿಕೆಗೆ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued

ದೇವೇಗೌಡರನ್ನೇ ಸೋಲಿಸಿದ ನನಗೇ ಟಿಕೆಟ್ ಕೊಡಿ : ಸಿದ್ದರಾಮಯ್ಯಗೆ ತೇಜಸ್ವಿನಿ ಗೌಡ ಪತ್ರ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ತೀವ್ರತೆ ಪಡೆದುಕೊಂಡಿದೆ. ಇದರ ಮಧ್ಯೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ತಾನೂ ಟಕೆಟ್‌ ಆಕಾಂಕ್ಷಿಯಾಗಿದ್ದು, ತಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಪತ್ರ ಬರೆದಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಜಾಟ್ ಕೇಂದ್ರೀಕೃತ ಪ್ರಚಾರದಿಂದ ಹಿಡಿದು ಒಳಜಗಳದ ವರೆಗೆ…: ಹರಿಯಾಣದಲ್ಲಿ ಕಾಂಗ್ರೆಸ್‌ ಆಘಾತಕಾರಿ ಸೋಲಿನ ಹಿಂದಿನ 5 ಕಾರಣಗಳು…

ನವದೆಹಲಿ: ಹರಿಯಾಣ ಚುನಾವಣೆಯ ಮತ ಎಣಿಕೆಗೆ ಮಂಗಳವಾರ ಬೆಳಗ್ಗೆ ಆರಂಭವಾದ ನಂತರ 9 ಗಂಟೆ ಸುಮಾರಿಗೆ ಕಾಂಗ್ರೆಸ್‌ ಬಿಜೆಪಿಗಿಂತ ಸಾಕಷ್ಟು ಮುನ್ನಡೆ ಸಾಧಿಸಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಜಲೇಬಿ ಹಂಚುವುದು ಮತ್ತು ಡೊಳ್ಳು ಬಾರಿಸುವ ಸಂಭ್ರಮಾಚರಣೆಯೂ ನಡೆದಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಕಚೇರಿ ನಿರ್ಜನವಾಗಿತ್ತು. ಆದರೆ ಒಂದು ಗಂಟೆಯ ನಂತರ, ಟ್ರೆಂಡ್‌ ಸಂಪೂರ್ಣ ಬದಲಾಯಿತು. … Continued

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ : ಕಾಂಗ್ರೆಸ್‌ ನಾಯಕ ಕೋಳಿವಾಡ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪಿತ ಮುಡಾ ಹಗರಣದ ಪರಿಣಾಮ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued