ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ … Continued

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಎಪಿ ನಿರ್ಧಾರ

ನವದೆಹಲಿ :  ಇಂಡಿಯಾ (I.N.D.I.A) ಬ್ಲಾಕ್‌ಗೆ ಹಿನ್ನಡೆಯಲ್ಲಿ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಘೋಷಿಸಿದೆ. ಮಹಾ ವಿಕಾಸ್ ಅಘಾಡಿ (MVA) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಊಹಾಪೋಹಗಳನ್ನು ಪಕ್ಷ ನಿರಾಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಪ್ರಾಥಮಿಕ ಸ್ಪರ್ಧೆಯು … Continued

ರಾಹುಲ್​ ಗಾಂಧಿ ಹೊಲಿಗೆ ಹಾಕಿದ್ದ ಚಪ್ಪಲಿಗೆ ಡಿಮಾಂಡಪ್ಪೋ ಡಿಮಾಂಡು : ಚಪ್ಪಲಿಗೆ ₹10 ಲಕ್ಷದ ಆಫರ್‌ ತಿರಸ್ಕರಿಸಿದ ಅಂಗಡಿಯಾತ..!

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ (Rahul Gandhi) ಸುಲ್ತಾನ್​ಪುರಕ್ಕೆ ಹೋಗಿದ್ದಾಗ ಚಪ್ಪಲಿ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ವೇಳೆ ಅವರು ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಈಗ ಚಿನ್ನದ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಮುಂದೆ ಬಂದಿದ್ದಾರೆ. ರಾಹುಲ್ ಗಾಂಧಿ ಜುಲೈ 26ರಂದು ಮಾನನಷ್ಟ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಆರ್‌ ಎಸ್‌ ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧ ವಾಪಸ್ : ಕಾಂಗ್ರೆಸ್ ಖಂಡನೆ

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಇದ್ದ ನಿಷೇಧ ಹಿಂಪಡೆಯಲಾಗಿದೆ ಎಂದು ಸರ್ಕಾರದ ಉನ್ನತ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued

ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued

“ನಾವು ಕಾಂಗ್ರೆಸ್ಸಿನಂತೆಯೇ ತಪ್ಪುಗಳನ್ನು ಮಾಡಿದರೆ…”: ಬಿಜೆಪಿಗೆ ಎಚ್ಚರಿಸಿದ ನಿತಿನ್ ಗಡ್ಕರಿ

ಪಣಜಿ: ಬಿಜೆಪಿ ಭಿನ್ನರೀತಿಯ ಪಕ್ಷವಾಗಿದೆ. ಅದಕ್ಕಾಗಿಯೇ ಅದು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪಣಜಿಯಲ್ಲಿ ಹೇಳಿದ್ದಾರೆ. ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ ಮಾಡಿದ ತಪ್ಪುಗಳನ್ನು ನಾವೂ ಪುನರಾವರ್ತಿಸಿದರೆ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪಕ್ಷದ ನಾಯಕರಿಗೆ ಮುನ್ನೆಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸದಾನಂದ … Continued

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ : ವರದಿ

ಮುಂಬೈ: ರಾಜ್ಯದ 48 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆದ್ದು ಬೀಗುತ್ತಿದ್ದ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಗೆ ಆಘಾತ ಎದುರಾಗಿದೆ. ಆತಂಕಕಾರಿ ಸಂಕೇತವಾಗಿ, ಶುಕ್ರವಾರ ನಡೆದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು … Continued

ಶಿರಸಿ: ಕಚೇರಿಗೆ ತೆರಳಿ ಬಿಜೆಪಿ ಸಂಸದ ಕಾಗೇರಿ ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ…!

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಶಿರಿಸಯಲ್ಲಿ ಅಭಿನಂದಿಸಿದ್ದಾರೆ..! ಸಂಸದರ  ಕಚೇರಿಗೆ ತೆರಳಿದ ಶಾಸಕ ಭೀಮಣ್ಣ ನಾಯ್ಕ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಹಾರ ಹಾಕಿ, ಫಲ‌ ನೀಡಿ ಅಭಿನಂದಿಸಿದರು‌. ಈ ವೇಳೆ … Continued