ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ವೀಡಿಯೊ..| ರಾಜ್ಯ ರಾಜಕಾರಣದಲ್ಲಿ ಸಂಚಲನ ; ಕಾಂಗ್ರೆಸ್ಸಿಗೆ ಜಗದೀಶ ಶೆಟ್ಟರ ಗುಡ್‌ ಬೈ; ಪುನಃ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ (Jagadish Shettar) ಬಿಜೆಪಿಗೆ ಪುನಃ ಸೇರ್ಪಡೆಯಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಟಿಎಂಸಿ ನಂತ್ರ ಈಗ ಪಂಜಾಬಿನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದ ಎಎಪಿ ; ಇಂಡಿಯಾ ಮೈತ್ರಿಕೂಟಕ್ಕೆ ಡಬಲ್ ಶಾಕ್‌…!

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿ, ಪಂಜಾಬ್ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಭಗವಂತ ಸಿಂಗ್‌ ಮಾನ್ ಅವರು ಲೋಕಸಭೆ ಚುನಾವನೆಯಲ್ಲಿ ಪಂಜಾಬಿನಲ್ಲಿ ಎರಡು ಪಕ್ಷಗಳ ನಡುವಿನ ಮೈತ್ರಿ ಸ್ಪರ್ಧೆಯನ್ನು ಬುಧವಾರ ತಳ್ಳಿಹಾಕಿದ್ದಾರೆ. ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಬ್ಲಾಕ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ಮಿತ್ರಪಕ್ಷಗಳಾಗಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ … Continued

ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಪಕ್ಷದ ನಿಲುವಿನಿಂದ ಅಸಮಾಧಾನ : ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ. ಚಾವ್ಡಾ ಅವರು ಅಯೋಧ್ಯಾ ರಾಮಮಂದಿರದ ಬಗ್ಗೆ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶುಕ್ರವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭೆ ಸ್ಪೀಕರ್ ಶಂಕರ ಚೌಧರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಅಧಿಕಾರಿ … Continued

ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ … Continued

ಯಾವ ಕ್ಷಣದಲ್ಲೂ ನಿಗಮ‌ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು : 39 ಕಾರ್ಯಕರ್ತರಿಗೆ, 36 ಶಾಸಕರಿಗೆ ಅವಕಾಶ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಬಳಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಟ್ಟಿ ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು ಎಂದರು. ಕಾರ್ಯಕರ್ತರು … Continued

ತೆಲಂಗಾಣದಲ್ಲಿ ಅದಾನಿ ಸಮೂಹದಿಂದ 12400 ಕೋಟಿ ರೂ. ಹೂಡಿಕೆ

ಹೈದರಾಬಾದ್: ತೆಲಂಗಾಣದಲ್ಲಿ 12,400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಗಾಗಿ ಅದಾನಿ ಸಮೂಹ ಮತ್ತು ತೆಲಂಗಾಣ ಸರ್ಕಾರ ಬುಧವಾರ ನಾಲ್ಕು ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿವೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ 2024 ರಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತು ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಸಮ್ಮುಖದಲ್ಲಿ ಎಂಒಯುಗಳಿಗೆ … Continued