ಹಾಸನ: ಬೇಲೂರಿನ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

  ಹಾಸನ : ಹಾಸನದ ಬೇಲೂರಿನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಭೆಗಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಒಡೆದು ಪುಡಿ, ಪುಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಸ್ಥಳೀಯ ಮಟ್ಟದಲ್ಲಿ … Continued

ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

ನವದೆಹಲಿ: ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಅವರು ಸಂಸತ್ತಿನಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿ ಪಕ್ಷಾತೀತವಾಗಿ ಟೀಕೆ ಎದುರಿಸಿದ ನಂತರ ಹೇಳಿಕೆಗಾಗಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಧರ್ಮಪುರಿ ಸಂಸದರ ಹೇಳಿಕೆಗೆ ಬಿಜೆಪಿ ಮತ್ತು ಡಿಎಂಕೆ ಮಿತ್ರಪಕ್ಷ ಕಾಂಗ್ರೆಸ್‌ನಿಂದ ತಕ್ಷಣವೇ ಖಂಡನೆ ವ್ಯಕ್ತವಾಗಿದ್ದು, ಅವರು ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಸದನದಲ್ಲಿ ಜೆ … Continued

ಉನ್ನತ ನಾಯಕರು ಸಭೆಯಿಂದ ಹೊರಗುಳಿಯಲು ನಿರ್ಧರಿಸಿದ ನಂತರ ನಾಳೆ ನಡೆಯಬೇಕಿದ್ದ ಇಂಡಿಯಾ ಮೈತ್ರಿಕೂಟದ ಸಭೆ ಮುಂದಕ್ಕೆ

ನವದೆಹಲಿ: ದೆಹಲಿಯಲ್ಲಿ ಬುಧವಾರ ನಡೆಯಲಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಸಭೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕರೆದಿದ್ದ ಇಂಡಿಯಾ ಮೈತ್ರಿಕೂಟದ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

“ಇದು ಕಾಂಗ್ರೆಸ್ ಸೋಲು, ಜನರ ಸೋಲಲ್ಲ”: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು ಇತರ ಇಂಡಿಯಾ ಮೈತ್ರಿಕೂಟ ಸದಸ್ಯ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆಯ ಕೊರತೆಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷಗಳೊಂದಿಗೆ ಕಾಂಗ್ರೆಸ್‌ ಸೀಟು ಹಂಚಿಕೆಯು ಮೂರು ರಾಜ್ಯಗಳಲ್ಲಿ ವಿಭಿನ್ನ ಫಲಿತಾಂಶವನ್ನು ಕಾಣಬಹುದಿತ್ತು … Continued

ತೆಲಂಗಾಣದಲ್ಲಿ ನಟ ಪವನ್ ಕಲ್ಯಾಣ ಪಕ್ಷಕ್ಕೆ ಹೀನಾಯ ಸೋಲು : ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು…!

ಹೈದರಾಬಾದ್‌ : ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ತೆಲುಗು ಸೂಪರ್‌ ಸ್ಟಾರ್‌ ಜನಸೇನಾ ಪಕ್ಷವು ಸ್ಪರ್ಧಿಸಿದ್ದು, ತಾನು ಸ್ಪರ್ಧಿಸಿದ್ದ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡು ಕಳಪೆ ಸಾಧನೆ ಮಾಡಿದೆ. ಆಶ್ವರಪೇಟೆ ಮತ್ತು ವೈರಾ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷವು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದೆ. ಮೂರನೇ ಸ್ಥಾನ ಪಡೆದ ಕುಕಟ್‌ಪಲ್ಲಿ ಕ್ಷೇತ್ರದಲ್ಲಿ ಮಾತ್ರ … Continued

ಎಬಿವಿಪಿ ಕಾರ್ಯಕರ್ತನಿಂದ ಕಾಂಗ್ರೆಸ್ ಸಿಎಂ ಹುದ್ದೆ ರೇಸ್‌ ವರೆಗೆ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್ ರೆಡ್ಡಿಯ ರಾಜಕೀಯ ದಾರಿ….

ಹೈದರಾಬಾದ್ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಚಟುವಟಿಕೆಯಿಂದ ಆರಂಭವಾದ ಅನುಮುಲಾ ರೇವಂತ ರೆಡ್ಡಿ ಅವರ ರಾಜಕೀಯ ಮಾರ್ಗವು ಈಗ ತೆಲಂಗಾಣದ ಸಂಭಾವ್ಯ ಮುಖ್ಯಮಂತ್ರಿ ಹುದ್ದೆಯ ವರೆಗೆ ಅವರನ್ನು ತಂದು ನಿಲ್ಲಿಸಿದೆ. 56ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರ ಕಟುಟೀಕಾಕಾರ, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ ರೆಡ್ಡಿ … Continued

ಮುಖ್ಯಮಂತ್ರಿ ಕೆಸಿಆರ್‌- ಮುಂದಿನ ಸಿಎಂ ರೇವಂತ ರೆಡ್ಡಿ ಇಬ್ಬರನ್ನೂ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ …!

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಅಸಾಮಾನ್ಯ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ತೆಲಂಗಾಣ ಮುಖ್ಯಸ್ಥ ರೇವಂತ ರೆಡ್ಡಿ ಅವರನ್ನು ಸೋಲಿಸಿ ಇಡೀ ದೇಶವನ್ನೇ ಅಚ್ಚರಿಗೊಳಿಸಿದ್ದಾರೆ. ಕಾಮರೆಡ್ಡಿ ವಿಧಾನಸಭೆಯಲ್ಲಿ ಬಿಜೆಪಿಯ ಕೆವಿಆರ್‌ ಎಂದೇ ಜನಪ್ರಿಯವಾಗಿರುವ ಕಾಟಿಪಲ್ಲಿ … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued