ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು…!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಹಿಮಾಚಲ ಪ್ರದೇಶ ಉಸ್ತುವಾರಿ ಸ್ಥಾನವನ್ನೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, “ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued

ಹೇಮಾಮಾಲಿನಿ ಬಗ್ಗೆ ಅಸಭ್ಯ ಹೇಳಿಕೆ: ಕಾಂಗ್ರೆಸ್‌ ನಾಯಕ ರಣದೀಪ ಸುರ್ಜೇವಾಲಾಗೆ ಚುನಾವಣಾ ಪ್ರಚಾರದಿಂದ 48 ಗಂಟೆ ನಿಷೇಧ

ನವದೆಹಲಿ : ಕಾಂಗ್ರೆಸ್ ನಾಯಕ ರಣದೀಪ ಸಿಂಗ್‌ ಸುರ್ಜೇವಾಲಾ ಅವರ ಮೇಲೆ ಚುನಾವಣಾ ಪ್ರಚಾರ ಕೈಗೊಳ್ಳದಂತೆ ಚುನಾವಣಾ ಆಯೋಗವು 48 ಗಂಟೆಗಳ ಕಾಲ ನಿಷೇಧ ಹೇರಿದೆ. ಬಿಜೆಪಿ ಸಂಸದೆ ಹಾಗೂ ಅಭ್ಯರ್ಥಿ ಹೇಮಾ ಮಾಲಿನಿ ಅವರ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ ಅವರು ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಲೋಕಸಭೆ ಚುನಾವಣೆ 2024 : ‘ನ್ಯಾಯ’ ವಿಷಯದ ಹೊಸ ಪ್ರಚಾರ ಗೀತೆ ಬಿಡುಗಡೆ ಮಾಡಿದ ಕಾಂಗ್ರೆಸ್‌ | ವೀಡಿಯೊ ವೀಕ್ಷಿಸಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದು, “ನ್ಯಾಯ”ದ ವಿಷಯವನ್ನು ಕೇಂದ್ರೀಕರಿಸಿದೆ. ಸೋಮವಾರ, ಪಕ್ಷವು ಹೆಚ್ಚು ಸಮಾನ ಮತ್ತು ನ್ಯಾಯಯುತ ಭಾರತಕ್ಕಾಗಿ ತನ್ನ ದೃಷ್ಟಿಕೋನವುಳ್ಳ ಪ್ರಚಾರ ಹಾಡನ್ನು ಬಿಡುಗಡೆ ಮಾಡಿದೆ. “ಹಮ್ ಸಾಥ್ ಹೈ ತೋ ಹಾಥ್ ಯೇ ಹಾಲತ್ ಬದಲ್ ದೇಗಾ” ಎಂಬ ಗೀತೆಯನ್ನು ಕಾಂಗ್ರೆಸ್ ಪ್ರಧಾನ … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ತಾಯಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ನನ್ನನ್ನು ಬಿಡಲಿಲ್ಲ : ಕಾಂಗ್ರೆಸ್ಸಿನ ‘ಸರ್ವಾಧಿಕಾರಿ’ ಆರೋಪಕ್ಕೆ ತುರ್ತು ಪರಿಸ್ಥಿತಿ ಕರಾಳತೆ ನೆನಪಿಸಿದ ರಾಜನಾಥ ಸಿಂಗ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಗುರುವಾರ ಪ್ರತಿಪಕ್ಷಗಳ ಮೇಲೆ ಭಾವನಾತ್ಮಕ ವಾಗ್ದಾಳಿ ನಡೆಸಿದರು. ಆಡಳಿತಾರೂಢ ಭಾರತೀಯ ಜನತಾ ಪಕ್ಷವು “ಅಘೋಷಿತ ತುರ್ತು ಪರಿಸ್ಥಿತಿ” ಅನ್ನು ಹೇರಿದೆ ಎಂದು ಆಗಾಗ್ಗೆ ಆರೋಪಿಸಿದೆ. ಆದರೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿನಲ್ಲಿದ್ದಾಗ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸದಂತೆ ತನಗೆ ನಿರ್ಬಂಧಿಸಲಾಗಿತ್ತು ಎಂದು … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued