ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, … Continued

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ; ಆರ್‌ಜೆಡಿ 26, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ಲೋಕಸಭೆ ಚುನಾವಣೆಗೆ ಶುಕ್ರವಾರ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ. ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 26 ರಲ್ಲಿ ಆರ್‌ಜೆಡಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಒಂಬತ್ತು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಎಡಪಕ್ಷಗಳಿಗೆ ಐದು ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಕತಿಹಾರ್, ಕಿಶನ್‌ಗಂಜ್, ಪಾಟ್ನಾ ಸಾಹಿಬ್, ಸಸಾರಾಮ್, ಭಾಗಲ್ಪುರ, ಪಶ್ಚಿಮ ಚಂಪಾರಣ್, ಮುಜಾಫರಪುರ, … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ (ಮಾರ್ಚ್‌ ೨೮) ಆರಂಭವಾಗಲಿದೆ. ಏಪ್ರಿಲ್‌ 4 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ: ಲೂಧಿಯಾನದ ಕಾಂಗ್ರೆಸ್ ಸಂಸದ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬಿನ ಲೂಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ. “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ…ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಂಜಾಬ್‌ನ ಬಗ್ಗೆ ಬಹಳಷ್ಟು ಪ್ರೀತಿಯನ್ನು … Continued

ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued