ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ ; ಮೂರು ಮಾಜಿ ಸಿಎಂ ಮಕ್ಕಳಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕಮಲನಾಥ ಮತ್ತು ಅಶೋಕ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಪುತ್ರರಿಗೆ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ ಅವರ ಪುತ್ರರಾಗಿರುವ ನಕುಲನಾಥ ಅವರನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಣಕ್ಕಿಳಿಸಲಾಗಿದೆ. ಅವರು ಕ್ಷೇತ್ರದಿಂದ ಹಾಲಿ ಸಂಸದರಾಗಿದ್ದಾರೆ. ರಾಜಸ್ಥಾನದ ಮಾಜಿ … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued

₹105 ಕೋಟಿ ತೆರಿಗೆ : ಐಟಿಎಟಿ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯು ₹105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸಿಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ತುಷಾರ ರಾವ್ ಗೆಡೇಲಾ ಅವರಿದ್ದ ಪೀಠದ ಮುಂದೆ … Continued

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯು ರಾಹುಲ್‌ ಕಸ್ವಾನ್ … Continued

ಸಂವಿಧಾನ ತಿದ್ದುಪಡಿ ಹೇಳಿಕೆ ಸಂಸದ ಅನಂತರಕುಮಾರ ಹೆಗಡೆ ವೈಯಕ್ತಿಕ ಅಭಿಪ್ರಾಯ, ಇದು ಪಕ್ಷದ ನಿಲುವಲ್ಲ: ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂಬ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಹೇಳಿಕೆಗೆ ಬಿಜೆಪಿ ಸ್ಪಷ್ಟನೆ ನೀಡಿದ್ದು, ಅದು ಸಂಸದ ಅನಂತಕುಮಾರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ. … Continued

‘ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯ’: ತೃಣಮೂಲನಿಂದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಗ್ಗೆ ಕಾಂಗ್ರೆಸ್‌

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭಾನುವಾರ (ಮಾರ್ಚ್‌ 10) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂಬರುವ ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಮಾತುಕತೆಗೆ “ಬಾಗಿಲುಗಳು ಇನ್ನೂ ತೆರೆದಿವೆ” ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಮಾತನ್ನು ತಳ್ಳಿಹಾಕಿದೆ. ಕಾಂಗ್ರೆಸ್ ಮತ್ತು ತೃಣಮೂಲಎರಡೂ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಹರಿಯಾಣದಲ್ಲಿ ಬಿಜೆಪಿಗೆ ಹಿನ್ನಡೆ : ಹಿಸ್ಸಾರ್ ಸಂಸದ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದ ಬಿಜೆಪಿಯ ಸಂಸದ ಬ್ರಿಜೇಂದ್ರ ಸಿಂಗ್ ಭಾನುವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಬಲವಾದ ರಾಜಕೀಯ ಕಾರಣಗಳಿಗಾಗಿಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. “ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು … Continued

ತಮಿಳುನಾಡಿನಲ್ಲಿ 2019ರ ಸೂತ್ರದಂತೆ ಸ್ಥಾನ ಹಂಚಿಕೆ ಮಾಡಿದ ಡಿಎಂಕೆ : ಕಾಂಗ್ರೆಸ್ಸಿಗೆ 9 ಸ್ಥಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ತನ್ನ ಮಿತ್ರ ಪಕ್ಷವಾದ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಡಿಎಂಕೆ ಪಕ್ಷವು ತನ್ನ ಇಂಡಿಯಾ ಬ್ಲಾಕ್ ಮಿತ್ರವಾದ ಕಾಂಗ್ರೆಸ್ಸಿಗೆ ತಮಿಳುನಾಡಿನಲ್ಲಿ ಒಂಬತ್ತು ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನು ನೀಡಿದೆ. ಡಿಎಂಕೆಯ 2019 ರ ಸೀಟು ಹಂಚಿಕೆಯ ಸೂತ್ರದಂತೆ ಈ ಬಾರಿಯೂ … Continued