ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪವೇ: ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬುದನ್ನು ಕಾಂಗ್ರೆಸ್‌ ಲೇವಡಿ ಮಾಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಹೆಸರಿನ ನೆಪವೇ ಎಂದು ಪ್ರಶ್ನಿಸಿದೆ. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು … Continued

ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ತರಲು ಏನು ಮಾಡುತ್ತಿದ್ದೀರಿ: ಸಂಸದ ತೇಜಸ್ವಿ ಸೂರ್ಯಗೆ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ಪಡೆಯಲು ಸಂಸದರಾಗಿ ಏನು ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್‌ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕೊಯಿಮತ್ತೂರು ಹೊಟೇಲ್‌ನಲ್ಲಿ ಕ್ಯಾಶಿಯರ್‌ ನಿರಾಕರಿಸಿದ್ದರೂ ಬಿಲ್‌ ಪಾವತಿಸಿದ್ದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟರ್‌ನಲ್ಲಿ ತಿಳಿಸಿದ್ದರು. ಎಲ್ಲರನ್ನು ಗೌರವಿಸುವ ಪಕ್ಷ ಬಿಜೆಪಿ. ಸಣ್ಣ ವ್ಯಾಪಾರಿಗಳಿಂದ ರೋಲ್‌ಕಾಲ್‌ ಮಾಡಲು ನಾವು ಡಿಎಂಕೆ … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued

ಯತ್ನಾಳ ಆರೋಪಗಳಿಗೆ ಈಶ್ವರಪ್ಪ ಬೀಗಮುದ್ರೆ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿದ್ದ ಆರೋಪಗಳಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಬೀಗಮುದ್ರೆ ಒತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. ಬಿಜೆಪಿ ವಿರುದ್ಧ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಬಿಜೆಪಿ ಸರಕಾರದಲ್ಲಿ ಭೃಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತವಿದ್ದು, ರಾಜ್ಯ ಅನಾಥವಾಗಿದೆ ಎಂದು ತಿಳಿಸಿದೆ. ಬಿಜೆಪಿ ಕೂಡಲೇ ಸರಕಾರವನ್ನು ವಿಸರ್ಜಿಸಬೇಕು. ಕೊರೊನಾ ಸೋಂಕಿನಲ್ಲಿ ಭೃಷ್ಟಾಚಾರ, ನೆರೆ ಪರಿಹಾರದಲ್ಲಿ ಭೃಷ್ಟಾಚಾರ, ವರ್ಗಾವಣೆ, … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ಮಗಳ ಹೇಳಿಕೆಗೆ ವಿರುದ್ಧವಾದ ಹೇಳಿಕೆ: ಪೋಷಕರು ಆರೋಪಿ ಕಸ್ಟಡಿಯಲ್ಲಿರುವುದು ಸ್ಪಷ್ಟ ಎಂದ ಕಾಂಗ್ರೆಸ್

ಬೆಂಗಳೂರು: ಮಗಳು ಕೋರ್ಟ್‌ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ವಿಜಯಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ … Continued

೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ. ರಾಯಚೂರು … Continued

ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued

ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಟ್ಟುತ್ತಿದ್ದಾರೋ ಮುಗಿಸುತ್ತಿದ್ದಾರೋ ಗೊತ್ತಾಗ್ತಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಮೈಸೂರು ಜಿಲ್ಲೆಯ ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟುವ ಕಾರ್ಯ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್‌ ಮುಗಿಸೋ ಪ್ರಯತ್ನ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಮೈಸೂರು ಮೇಯರ್‌ ಆಯ್ಕೆಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ಪಕ್ಷದ ವರಿಷ್ಠರು ಕಳಿಸಿದ ನೋಟೀಸ್‌ಗೆ ಉತ್ತರ ಕೊಟ್ಟಿದ್ದೇನೆ. ನನ್ನ ಮೇಲೆ ಯಾವ ಆರೋಪ ಇದೆ ಎಂಬುದೇ … Continued

ಸಿಡಿ ಪ್ರಕರಣ: ವಿಧಾನಸಭೆಯಲ್ಲಿ ಮುಂದುವರಿದ ಕಾಂಗ್ರೆಸ್‌ ಧರಣಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ 6 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರೆಸಿದ್ದರಿಂದ ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಕೂಡ ಕೋಲಾಹಲ ನಡೆಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮೊದಲು ಸಭಾಧ್ಯಕ್ಷ ಕಾಗೇರಿ ಮಾಜಿ ಸಚಿವ ಬಿ.ಡಿ.ಬಸವರಾಜ್ ಅವರಿಗೆ ಸಂತಾಪ … Continued