ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ…!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಐದನೇ ಅಭ್ಯರ್ಥಿಗೆ ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಮತದಾನ ಮಾಡಿದ ನಂತರ ಮಾಧ್ಯಮಗಳ … Continued

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿನ ಮಹಾರಾಷ್ಟ್ರ ಘಟಕದ ಕಾರ್ಯಾಧ್ಯಕ್ಷ ರಾಜೀನಾಮೆ

ಮುಂಬೈ: ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಮುರುಮಕರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದರು. ಬಸವರಾಜ ಪಾಟೀಲ ಅವರು ಭಾರತೀಯ ಜನತಾ ಪಕ್ಷಕ್ಕೆ … Continued

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು

ಅಗರ್ತಲಾ : ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ವಿಪಕ್ಷವಾದ ಕಾಂಗ್ರೆಸ್‌ನ ಇಬ್ಬರು ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಇಬ್ಬರು ಶಾಸಕರು ಮುಖ್ಯಮಂತ್ರಿ ಪೆಮಾ ಖಂಡು ಅವರ ಸಮ್ಮುಖದಲ್ಲಿ ಆಡಳಿತಾರೂಢ ಬಿಜೆಪಿ ಸೇರಿದ್ದಾರೆ. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕರಾದ ನಿನೊಂಗ್ ಎರಿಂಗ್, ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು … Continued

ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಲೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾ ವೆಂಕಟಪ್ಪ ನಾಯಕ ಅವರು ಇಬ್ಬರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೆಲವು ದಿನಗಳ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ತಮಿಳುನಾಡಿನ ಶಾಸಕಿ…!

ಚೆನ್ನೈ: ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ತಮಿಳುನಾಡಿನ ಎಸ್. ವಿಜಯಧರಣಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಸ್. ವಿಜಯಧರಣಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಮತ್ತು ತಮಿಳುನಾಡು ಚುನಾವಣಾ ಉಸ್ತುವಾರಿ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ ಮೆನನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮ್ಮ ಈ ಕ್ರಮವು ದಕ್ಷಿಣ ರಾಜ್ಯದಲ್ಲಿ ಪ್ರಧಾನಿ … Continued

ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು … Continued

23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತ; ಸರ್ಕಾರಕ್ಕೆ ಭಾರೀ ಮುಖಭಂಗ

ಬೆಂಗಳೂರು : ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ … Continued

ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಝಡ್ ಪ್ಲಸ್ ಭದ್ರತೆ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಖರ್ಗೆಯವರ ಬೆದರಿಕೆ ಗ್ರಹಿಕೆಯನ್ನು ಆಧರಿಸಿ ಗೃಹ ಸಚಿವಾಲಯವು ಈ ತಿಂಗಳ ಆರಂಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅದು ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ … Continued