ಭಗವಾನ್‌ ಅಯ್ಯಪ್ಪ ಎಡರಂಗದ ಸರ್ಕಾರದ ಪರವಾಗಿದ್ದಾನೆ : ಪಿಣರಾಯಿ ವಿಜಯನ್‌

ಭಗವಾನ್ ಅಯ್ಯಪ್ಪ ಮತ್ತು ಇತರ ಎಲ್ಲ ದೇವರುಗಳು ಎಡ ಪ್ರಜಾಪ್ರಭುತ್ವ ರಂಗದ ಕಡೆಗಿದ್ದಾರೆ . ಏಕೆಂದರೆ ಎಡರಂಗದ ಸರ್ಕಾರ ಜನರಿಗೆ ಪ್ರಾಮುಖ್ಯತೆ ನೀಡಿದೆ ಮತ್ತು ಅವರನ್ನು ರಕ್ಷಿಸಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಧರ್ಮದಂ ಕ್ಷೇತ್ರದ ಆರ್‌ಸಿ ಅಮಲಾ ಶಾಲೆಯಲ್ಲಿ ಮತ ಚಲಾಯಿಸಿದ ಅವರು, ಭಗವಾನ್‌ ಅಯ್ಯಪ್ಪ ಅವರ … Continued

ದೀದಿ ಮುಖದಲ್ಲಿ ಸೋಲಿನ ಭೀತಿ ಕಾಣುತ್ತಿದೆ: ಅಧೀರ್‌ ರಂಜನ್‌

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ತಮ್ಮ ಪಕ್ಷ ಪಶ್ಚಿಮ ಬಂಗಾಳದಲ್ಲಿ ಪರಾಭವಗೊಳ್ಳುವ ಭೀತಿ ಉಂಟಾಗಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯುವಂತೆ ಕೋರಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ತಿಳಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಬೆರ್ಹಾಂಪುರದಲ್ಲಿ ನಡೆದ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ … Continued

ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ ಕಾಂಗ್ರೆಸ್‌ನ ಲಖನ್‌‌ ಜಾರಕಿಹೊಳಿ..!

ಬೆಳಗಾವಿ: ಸಚಿವತ್ರಯರಾದ ಜಗದೀಶ ಶೆಟ್ಟರ, ಉಮೇಶ ಕತ್ತಿ ಹಾಗೂ ಬೈರತಿ ಬಸವರಾಜ ರಮೇಶ ಜಾರಕಿಹೊಳಿ ಸೋದರ ಲಖನ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವಂತೆ ಕೋರಿದರು. ಗೋಕಾಕದ ಅವರ ನಿವಾಸಕ್ಕೆ ತೆರಳಿದ ಸಚಿವರು, ಲಖನ್‌ ಜಾರಕಿಹೊಳಿ ಅವರೊಂದಿಗೆ ಕೆಲ ಹೊತ್ತು ಗುಪ್ತವಾಗಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ … Continued

ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ನೆಪವೇ: ಟ್ವೀಟ್‌ ಮೂಲಕ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬುದನ್ನು ಕಾಂಗ್ರೆಸ್‌ ಲೇವಡಿ ಮಾಡಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಹೆಸರಿನ ನೆಪವೇ ಎಂದು ಪ್ರಶ್ನಿಸಿದೆ. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಸೋಮವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಭಾನುವಾರ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು … Continued

ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ತರಲು ಏನು ಮಾಡುತ್ತಿದ್ದೀರಿ: ಸಂಸದ ತೇಜಸ್ವಿ ಸೂರ್ಯಗೆ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ಪಡೆಯಲು ಸಂಸದರಾಗಿ ಏನು ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್‌ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕೊಯಿಮತ್ತೂರು ಹೊಟೇಲ್‌ನಲ್ಲಿ ಕ್ಯಾಶಿಯರ್‌ ನಿರಾಕರಿಸಿದ್ದರೂ ಬಿಲ್‌ ಪಾವತಿಸಿದ್ದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟರ್‌ನಲ್ಲಿ ತಿಳಿಸಿದ್ದರು. ಎಲ್ಲರನ್ನು ಗೌರವಿಸುವ ಪಕ್ಷ ಬಿಜೆಪಿ. ಸಣ್ಣ ವ್ಯಾಪಾರಿಗಳಿಂದ ರೋಲ್‌ಕಾಲ್‌ ಮಾಡಲು ನಾವು ಡಿಎಂಕೆ … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued

ಯತ್ನಾಳ ಆರೋಪಗಳಿಗೆ ಈಶ್ವರಪ್ಪ ಬೀಗಮುದ್ರೆ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿದ್ದ ಆರೋಪಗಳಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಬೀಗಮುದ್ರೆ ಒತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. ಬಿಜೆಪಿ ವಿರುದ್ಧ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಬಿಜೆಪಿ ಸರಕಾರದಲ್ಲಿ ಭೃಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತವಿದ್ದು, ರಾಜ್ಯ ಅನಾಥವಾಗಿದೆ ಎಂದು ತಿಳಿಸಿದೆ. ಬಿಜೆಪಿ ಕೂಡಲೇ ಸರಕಾರವನ್ನು ವಿಸರ್ಜಿಸಬೇಕು. ಕೊರೊನಾ ಸೋಂಕಿನಲ್ಲಿ ಭೃಷ್ಟಾಚಾರ, ನೆರೆ ಪರಿಹಾರದಲ್ಲಿ ಭೃಷ್ಟಾಚಾರ, ವರ್ಗಾವಣೆ, … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ಮಗಳ ಹೇಳಿಕೆಗೆ ವಿರುದ್ಧವಾದ ಹೇಳಿಕೆ: ಪೋಷಕರು ಆರೋಪಿ ಕಸ್ಟಡಿಯಲ್ಲಿರುವುದು ಸ್ಪಷ್ಟ ಎಂದ ಕಾಂಗ್ರೆಸ್

ಬೆಂಗಳೂರು: ಮಗಳು ಕೋರ್ಟ್‌ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ವಿಜಯಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ … Continued

೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ. ರಾಯಚೂರು … Continued