ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ಸಿನ ಪುಟ್ಟಣ್ಣಗೆ ಜಯ

ಬೆಂಗಳೂರು : ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರು ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ​ ಅವರನ್ನು 1507 ಮತಗಳ ಅಂತರದಿಂದ ಸೋಲಿಸಿದರು. ಇಂದು, ಮಂಗಳವಾರ (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಕಾಂಗ್ರೆಸ್‌ ನಾಯಕ ಕಮಲನಾಥ ಬಿಜೆಪಿ ಸೇರ್ತಾರಾ..? ಸಾಮಾಜಿಕ ಮಾಧ್ಯಮ ಬಯೋದಿಂದ ಕಾಂಗ್ರೆಸ್‌ ಅನ್ನು ಕೈಬಿಟ್ಟ ಮಗ ನಕುಲ್‌..!

ನವದೆಹಲಿ : ಪಕ್ಷದ ನಾಯಕತ್ವದ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಅವರು ಹೇಳಿಕೊಂಡ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ನಕುಲ ಕಮಲನಾಥ ಅವರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ತೆಗೆದುಹಾಕಿದ್ದು, ಸಂಭವನೀಯ ರಾಜಕೀಯ ಬದಲಾವಣೆಯ ಪ್ರಮುಖ ಸುಳಿವನ್ನು ನೀಡಿದ್ದಾರೆ … Continued

ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ ಚವಾಣ ಪಕ್ಷ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರು ಗೈರು…!

ಮುಂಬೈ: ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಮಹಾರಾಷ್ಟ್ರದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಶಾಸಕರ ಸಭೆಗೆ ಕನಿಷ್ಠ ಐವರು ಶಾಸಕರು ಹಾಜರಾಗಲಿಲ್ಲ ಎಂದು ವರದಿಯಾಗಿದೆ. ಇದು ಇನ್ನೂ ಅನೇಕ ಶಾಸಕರು ಬಿಜೆಪಿಗೆ ಪಕ್ಷಾಂತರವಾಗಬಹುದು ಎಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕರಾದ ಜೀಶನ್ ಸಿದ್ದಿಕ್ (ಬಾಂದ್ರಾ ಪೂರ್ವ), … Continued

2022ರ ವರೆಗೆ ₹ 16,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳು ಮಾರಾಟ : ಬಿಜೆಪಿಗೆ ಸಿಂಹ ಪಾಲು ; ಯಾವ ಪಕ್ಷಗಳು ಪಡೆದದ್ದೆಷ್ಟು ಎಂಬುದು ಇಲ್ಲಿದೆ…

ನವದೆಹಲಿ: ಚುನಾವಣಾ ಬಾಂಡ್‌ಗಳು ಇದುವರೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ₹ 16,437.63 ಕೋಟಿ ಮೌಲ್ಯದ 28,030 ಎಲೆಕ್ಟೋರಲ್ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರಲ್ಲಿ ಸಿಂಹ ಪಾಲು ಬಿಜೆಪಿ ಪಾಲಾಗಿದೆ ಎಂದು ಅಂದಾಜಿಸಲಾಗಿದೆ. ಈಗ ರದ್ದಾದ ಚುನಾವಣಾ ಬಾಂಡ್ ಯೋಜನೆಯನ್ನು 2018ರಲ್ಲಿ ಪರಿಚಯಿಸಿದ ನಂತರ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ₹ 12,000 ಕೋಟಿಗೂ ಹೆಚ್ಚು ಹಣವನ್ನು … Continued

ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿಯಾಗಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕುಪೇಂದ್ರ ರೆಡ್ಡಿ ಕಣಕ್ಕೆ ; ಇದರ ಹಿಂದಿನ ಲೆಕ್ಕಾಚಾರ ಏನು..?

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎನ್​ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್‌ ನಾಯಕ ಹಾಗೂ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಲಾಲಬಹದ್ದೂರ ಶಾಸ್ತ್ರೀ ಮೊಮ್ಮಗ..

ನವದೆಹಲಿ: ಮಾಜಿ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಶಾಸ್ತ್ರಿ ಇಂದು, ಬುಧವಾರ ಮುಂಜಾನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ತೊರೆದ ಕೆಲವು ಗಂಟೆಗಳ ನಂತರ ಅವರು ಭಾರತೀಯ ಜನತಾ … Continued