ಕಾನೂನು ಬಾಹಿರವಾಗಿ ಸದನ ಹಿಡಿದಿಟ್ಟುಕೊಂಡ ಕಾಂಗ್ರೆಸ್‌: ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು  ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಸದನದಲ್ಲಿ ಕಾಂಗ್ರೆಸ್‌ ವರತ್ನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗುರುವಾರ ಸಂಜೆ ವಿಧಾನಸಭೆ ಅಧಿವೇಶನ ಮುಂದೂಡಲ್ಪಟ್ಟ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continued

ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯದಿದ್ದರೆ ರಾಷ್ಟ್ರಪತಿಗೆ ದೂರು : ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಬೇಕು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಇಲ್ಲದೇ ಹೋದರೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್‌ ಎಚ್ಚರಿಸಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ … Continued

ಪಿಚ್ಚರ್ ಅಭಿ ಬಾಕಿ ಹೈ; ರಾಸಲೀಲೆ ಸಿಡಿ ಬಗ್ಗೆ ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ಸಚಿವರ ರಾಸಲೀಲೆಯದ್ದು ಎನ್ನಲಾದ ಸಿಡಿ ಬಗ್ಗೆ ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಇದು ಕೇವಲ ಟ್ರೇಲರ್ “ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾಗುತ್ತಿದ್ದಂತೆ ಅಸಮಾಧಾನಿತರು, ಅತೃಪ್ತರು ಒಳಗೊಳಗೇ ಸಂತೃಪ್ತಿಯ … Continued

ಮೋದಿ ಹೊಗಳಿದ್ದಕ್ಕೆ ಆಜಾದ್‌ ಪ್ರತಿಕ್ರತಿ ದಹನ, ಆನಂದ ಶರ್ಮಾ ವಿರುದ್ಧ ಅಧೀರ್‌ ವಾಗ್ದಾಳಿ.

ಪಂಚರಾಜ್ಯಗಳ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಂತರ್ಯುದ್ಧವೂ ಜೋರಾಗಿದೆ. ಜಮ್ಮುವಿನಲ್ಲಿ ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಮಾಜಿ ಕೇಂದ್ರ ಸಚಿವ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಮಾಮ್‌ ನಬಿ ಆಜಾದ್‌ ವಿರುದ್ದ ಜಮ್ಮುವಿನಲ್ಲಿ ಆಕ್ರೋಶಿತ ಕಾಂಗ್ರೆಸ್‌ ಕಾರ್ಯಕರ್ತರು ಅವರ ಪ್ರತಿಕೃತಿ ದಹನ ಮಾಡಿದ್ದಾರೆ. ಅದೇರೀತಿ ಪಶ್ಚಿಮ ಬಂಗಾಳದಲ್ಲಿ ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್‌ ಪಕ್ಷವು … Continued

ಬಂಗಾಳದಲ್ಲಿ ಮುಸ್ಲಿಂ ಧರ್ಮಗುರು ಸಿದ್ದಿಕಿ ಪಕ್ಷದ ಜೊತೆ ಮೈತ್ರಿ: ಕಾಂಗ್ರೆಸ್‌ ನಾಯಕತ್ವದ ವಿರುದ್ಧ ತಿರುಗಿಬಿದ್ದ ಶರ್ಮಾ

ಪಶ್ಚಿಮ ಬಂಗಾಳದ ಮುಸ್ಲಿಂ ಧರ್ಮಗುರು ಅಬ್ಬಾಸ್ ಸಿದ್ದಿಕಿ ನೇತೃತ್ವದ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಒಂದಿಗೆ ಕಾಂಗ್ರೆಸ್‌ ಪಸ್ಚಿಮ ಬಂಗಾಳ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವುದನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಆನಂದ್ ಶರ್ಮಾ ಸೋಮವಾರ ಖಂಡಿಸಿದ್ದು, ಇದು ಪಕ್ಷದ ಪ್ರಮುಖ ಸಿದ್ಧಾಂತ, ಗಾಂಧಿ ಮತ್ತು ನೆಹರೂ ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಪಕ್ಷವು ಕೋಮುವಾದಿಗಳ ವಿರುದ್ಧ ಹೋರಾಡುವಲ್ಲಿ … Continued

ಮೈಸೂರು ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರ: ಡಿಕೆಶಿ

ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರವಾಗಿದ್ದು, ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗಬೇಕಿತ್ತು. ಆದರೆ ಮನೆಯಲ್ಲಿ ಕೆಲಸ ಇದ್ದುದರಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು. ಮೈಸೂರು ಮಹಪೌರ ಚುನಾವಣೆ … Continued

ಜೆಡಿಎಸ್‌ಗೆ ಥೂ….ಎಂದು ಉಗಿದು ಕಾಂಗ್ರೆಸ್‌ ಸೇರಿದ ದೇವೆಗೌಡರ ಸಂಬಂಧಿ..!

ಪಿರಿಯಾಪಟ್ಟಣ: ಜೆಡಿಎಸ್‌ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತವಿಲ್ಲ, ಕೇವಲ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣ ಮಾತ್ರ ಗೊತ್ತಿದೆ ಎಂದು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಾಜಿ ಶಾಸಕ ಕೆ. ವೆಂಕಟೇಶ ಆರೋಪ ಮಾಡಿದರು. ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವೆಂಕಟೇಶ ಮಾತನಾಡಿ, ೨೫ ವರ್ಷಗಳಿಂದ ಜೆಡಿಎಸ್‌ನಲ್ಲಿದ್ದೆ. ಎಚ್‌.ಡಿ. ದೇವೆಗೌಡರು ನಮ್ಮ … Continued

ಪುದುಚೇರಿ: ಕಾಂಗ್ರೆಸ್‌ಗೆ‌ ಮೊದಲ ಶಾಂಕಿಂಗ್‌ ನ್ಯೂಸ್‌…!

ಪುದುಚೇರಿ: ತನ್ನ ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಏ.೬ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೇಳಿದೆ. ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ-ವೋಟರ್ಸ್ ಸಮೀಕ್ಷೆ ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ. ಒಟ್ಟು ೩೦ ವಿಧಾಸಭಾ ಕ್ಷೇತ್ರವಿರುವ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿರುವ ಏಪ್ರಿಲ್ … Continued

ಅಸ್ಸಾಂ:ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್‌ ತೆಕ್ಕೆಗೆ..!

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿಕೂಟವಾಗಿದ್ದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಕೇಸರಿ ಪಕ್ಷದೊಂದಿಗಿನ ಸಂಬಂಧವನ್ನು ಮುರಿದಿದೆ. ಪಕ್ಷವು ಈಗ ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ಸೇರಲಿದೆ ಎಂದು ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ ಶನಿವಾರ ಪ್ರಕಟಿಸಿದ್ದಾರೆ. ಶಾಂತಿ, ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) … Continued

ಕಾಂಗ್ರೆಸ್‌ನಿಂದ ಅಮಾನತು ಮಾಡಿದರೂ ಡೋಂಟ್‌ ಕೇರ್:‌ ಶಾಸಕ ತನ್ವೀರ್‌ ಸೇಠ್‌

ಮೈಸೂರು: ಕಾಂಗ್ರೆಸ್‌ ಪಕ್ಷದಿಂದ ನನ್ನನ್ನು ಅಮಾನತು ಮಾಡಿದರೂ ನಾನು ಹೆದರುವುದಿಲ್ಲ, ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ ಸೇಠ್‌ ಪಕ್ಷದ ಮುಖಂಡರ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲಿಗರು  ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಮರುದಿನ ಸೇಠ್‌ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ನಾನು ಕೂಡ 5 ಬಾರಿ ಗೆದ್ದಿದ್ದೇನೆ . ಒಬ್ಬರ … Continued