ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued

ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಟ್ಟುತ್ತಿದ್ದಾರೋ ಮುಗಿಸುತ್ತಿದ್ದಾರೋ ಗೊತ್ತಾಗ್ತಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಮೈಸೂರು ಜಿಲ್ಲೆಯ ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟುವ ಕಾರ್ಯ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್‌ ಮುಗಿಸೋ ಪ್ರಯತ್ನ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಮೈಸೂರು ಮೇಯರ್‌ ಆಯ್ಕೆಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ಪಕ್ಷದ ವರಿಷ್ಠರು ಕಳಿಸಿದ ನೋಟೀಸ್‌ಗೆ ಉತ್ತರ ಕೊಟ್ಟಿದ್ದೇನೆ. ನನ್ನ ಮೇಲೆ ಯಾವ ಆರೋಪ ಇದೆ ಎಂಬುದೇ … Continued

ಸಿಡಿ ಪ್ರಕರಣ: ವಿಧಾನಸಭೆಯಲ್ಲಿ ಮುಂದುವರಿದ ಕಾಂಗ್ರೆಸ್‌ ಧರಣಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ 6 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರೆಸಿದ್ದರಿಂದ ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಕೂಡ ಕೋಲಾಹಲ ನಡೆಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮೊದಲು ಸಭಾಧ್ಯಕ್ಷ ಕಾಗೇರಿ ಮಾಜಿ ಸಚಿವ ಬಿ.ಡಿ.ಬಸವರಾಜ್ ಅವರಿಗೆ ಸಂತಾಪ … Continued

ಕರ್ನಾಟಕ ಉಪಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ  ಅಭ್ಯರ್ಥಿ ಹೆಸರು ಇನ್ನೂ ಪ್ರಕಟಿಸಬೇಕಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ವಿಧಾನಸಬಾ ಕ್ಷೇತ್ರದಿಂದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವನಗೌಡ ಆರ್. ತಿರುವಿಹಾಳ ಅವರಿಗೆ … Continued

ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ನಾನು ಗುರುವಾರದಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿ ಕೆಲಸ ಆರಂಭಿಸಿದ್ದೇನೆ

ಬೆಂಗಳೂರು: ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ ಎಂದು ಮಧು ಬಂಗಾರಪ್ಪ ಹೇಳಿದರು. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗುರುವಾರದಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಶುರು ಮಾಡಿದ್ದೇನೆ. ಅಧಿಕೃತವಾಗಿ ಸೇರ್ಪಡೆಯಾಗುವುದು ಬಾಕಿ ಇದೆ. ಒಂದು ವರ್ಷ ಕಾಲ ನಿರ್ಧಾರ ತೆಗೆದುಕೊಳ್ಳಲು … Continued

ಶಾಸಕಿಯರಿಂದ ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಸಿದ ಕಾಂಗ್ರೆಸ್‌ ನಾಯಕ ಹೂಡಾ…!

ಕಾಂಗ್ರೆಸ್ ನಾಯಕರೊಬ್ಬರ ಅತರೇಕದ ವರ್ತನೆ ಈಗ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ತಮ್ಮ ಅನುಚಿತ ವರ್ತನೆ ಮೂಲಕ ಸುದ್ದಿಯಲ್ಲಿದ್ದಾರೆ. ಭೂಪಿಂದರ್ ಸಿಂಗ್ ಹೂಡಾ ಅವರು ತಾವು ಕುಳಿತಿದ್ದ ಟ್ರ್ಯಾಕ್ಟರ್ ಎಳೆಯಲು ಮಹಿಳಾ ಶಾಸಕಿಯರನ್ನು ಬಳಸಿಕೊಂಡಿದ್ದಾರೆ ಎನ್ನುವುದು ಈಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರವ್ಯಾಪಿ ಚರ್ಚೆಗೂ ಕಾರಣವಾಗಿದೆ. ಈ ವಿದ್ಯಮಾನವನ್ನು … Continued

ಪಂಚರಾಜ್ಯಗಳ ಚುನಾವಣೆ: ಕಾಂಗ್ರೆಸ್‌ ನೆಲೆ ಮತ್ತಷ್ಟು ಕುಸಿದರೆ ಬಿಜೆಪಿಗೆ ತೃತೀಯ ರಂಗ ಪರ್ಯಾಯವಾಗಲಿದೆಯೇ?

ಪಂಚರಾಜ್ಯ ಚುನಾವಣೆಗಳಲ್ಲಿ ಕೇರಳ ಹಾಗೂ ಅಸ್ಸಾಂ ಪಡಿಸಿ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿಯಲ್ಲಿ ಈ ಪಕ್ಷದ ಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತ ಸಾಗಿದೆ. ಅಸ್ಸಾಂನಲ್ಲಿ ಬಿಜೆಪಿ ಸೋಲಿಸಲೇಬೇಕೆಂದು ಅನೇಕ ಪ್ರಾದೇಶಿಕ ಪಕ್ಷಗಳ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿದೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ … Continued

ಪರಿಷತ್‌: ಪ್ರಶ್ನೆ ಕೇಳದೆ ಸಚಿವ ಬೈರತಿಗೆ ಮುಜುಗರ ತರಲು ಕಾಂಗ್ರೆಸ್‌ ಸದಸ್ಯರ ಯತ್ನ

ಬೆಂಗಳೂರು: ಮಾನಹಾನಿ ಪ್ರಕರಣಗಳನ್ನು ಪ್ರಕಟಿಸದಂತೆ ಕೋರ್ಟ್ ಮೆಟ್ಟಿಲೇರಿರುವ ಆರು ಮಂದಿ ಪೈಕಿ ಒಬ್ಬರಾಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ ಕಾಂಗ್ರೆಸ್ ಪ್ರಶ್ನೆ ಕೇಳದೆ ವಿಧಾನಪರಿಷತ್‍ನಲ್ಲಿ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಆರ್.ಪ್ರಸನ್ನಕುಮಾರ್ ಮತ್ತು ಬಸವರಾಜ ಪಾಟೀಲ ಇಟಗಿ ಅವರ ಪ್ರಶ್ನೆಗಳು ಇದ್ದವು. ಆದರೆ, ಈ ಇಬ್ಬರು ಕೂಡ ನಾವು … Continued

ಸಿಂಧಗಿಯಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ ಅಶೋಕ ಮನಗೂಳಿ…!

ವಿಜಯಪುರ: ಉಪಚುನಾವಣೆ ಸನಿಹದಲ್ಲಿರುವಾಗಲೇ ಜೆಡಿಎಸ್‌ಗೆ ದೊಡ್ಡ ಶಾಕ್‌ ಆಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಮಾಜಿ ಸಚಿವ ದಿ.ಎಂ. ಸಿ.ಮನಗೂಳಿ ಅವರ ಪುತ್ರ ಪಕ್ಷ ತೊರೆಯುವುದಾಗಿ ಪ್ರಕಟಿಸುವುದರ ಮೂಲಕ ಜೆಡಿಎಸ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಅವರು ಕಾಂಗ್ರೆಸ್‌ ಸೇರುವುದಾಗಿ ಹೇಳಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (85) ಜನವರಿ 28ರಂದು … Continued