ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

ವೀಡಿಯೊ…| ಮೋದಿಪರ ಘೋಷಣೆ ಕೂಗುತ್ತಿದ್ದವರ ಜೊತೆ ಹಸ್ತಲಾಘವ ಮಾಡಿದ ರಾಹುಲ್ ಗಾಂಧಿ : ವೀಕ್ಷಿಸಿ

ಛತ್ತೀಸ್‌ಗಢ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರ ಕೈಕುಲುಕಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು “ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ” ಎಂದು ಹೇಳಿಕೆ ನೀಡಿದೆ. ಕಳೆದ ವಾರ ಒಡಿಶಾದ ಕೊರ್ಬಾದಿಂದ ಧೋಡಿಪಾರಾ ಮೂಲಕ ಕಟ್ಘೋರಾ ಮಾರ್ಗದಲ್ಲಿ ರಾಹುಲ್ ಗಾಂಧಿ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಪ್ರಧಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌…!

ನವದೆಹಲಿ : ಪಕ್ಷದ ವಿರುದ್ಧ ಅಶಿಸ್ತು ಮತ್ತು ಪಕ್ಷಕ್ಕೆ ಮುಜುಗರ ತರುವ ಪುನರಾವರ್ತಿತ ಹೇಳಿಕೆಗಳ ಬಗ್ಗೆ ಬಂದ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ (ಫೆಬ್ರವರಿ 10) ಪಕ್ಷದ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಹೊರಹಾಕಬೇಕೆಂಬ ಉತ್ತರ ಪ್ರದೇಶ … Continued

2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದದ್ದಕ್ಕಿಂತ 7 ಪಟ್ಟು ಹೆಚ್ಚು ಹಣ ಪಡೆದ ಬಿಜೆಪಿ : ಅದು ಪಡೆದ ಹಣ ಎಷ್ಟೆಂದರೆ…

ನವದೆಹಲಿ : ಆಡಳಿತಾರೂಢ ಬಿಜೆಪಿಯು 2022-23ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು ₹ 1300 ಕೋಟಿಗಳನ್ನು ಸ್ವೀಕರಿಸಿದೆ, ಇದು ಅದೇ ಅವಧಿಯಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಕಾಂಗ್ರೆಸ್ ಪಡೆದಿದ್ದಕ್ಕಿಂತ ಏಳು ಪಟ್ಟು ಹೆಚ್ಚು. 2022-23ರ ಹಣಕಾಸು ವರ್ಷದಲ್ಲಿ ಬಿಜೆಪಿಯ ಒಟ್ಟು ದೇಣಿಗೆ ₹ 2120 ಕೋಟಿಗಳಷ್ಟಿದ್ದು, ಇದರಲ್ಲಿ ಶೇ 61 ರಷ್ಟು ಚುನಾವಣಾ ಬಾಂಡ್‌ಗಳಿಂದ ಬಂದಿದೆ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ: ಪಂಜಾಬಿನ ಎಲ್ಲ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಆಮ್‌ ಆದ್ಮಿ ಪಕ್ಷ..!

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ ಹಾಗೂ ಪಂಜಾಬಿನಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸೂಚಿಸಿದೆ. ಎಎಪಿ ಪಂಜಾಬ್‌ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳು ಮತ್ತು ಚಂಡೀಗಢದಲ್ಲಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಘೋಷಣೆಯನ್ನು ಪಕ್ಷದ … Continued

ಲೋಕಸಭೆಗೆ ಈಗಲೇ ಚುನಾವಣೆ ನಡೆದರೆ ಅಧಿಕಾರ ಯಾರಿಗೆ : ಮೋದಿಗೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? : ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಶನ್‌ ಸರ್ವೆಯಲ್ಲಿ ಬಹಿರಂಗ

ನವದೆಹಲಿ; 2024 ರ ಲೋಕಸಭಾ ಚುನಾವಣೆಯನ್ನು ಸಮೀಪಿಸುತ್ತಿರುವಾಗ, ಮೂಡ್ ಆಫ್ ದಿ ನೇಷನ್ (Mood of the Nation) ಸಮೀಕ್ಷೆಯು ಈಗಲೇ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಹೇಳಿದೆ. ಆದಾಗ್ಯೂ, ಇದು … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಅಲ್ಪಸಂಖ್ಯಾತ ನಾಯಕ, ಮಾಜಿ ಸಚಿವ ಬಾಬಾ ಸಿದ್ದಿಕ್

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. ಅವರು ಕಳೆದ 48 ವರ್ಷಗಳಿಂದ ಕಾಂಗ್ರೆಸ್‌ ಸದಸ್ಯರಾಗಿದ್ದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, “ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಮತ್ತು ಇದು 48 ವರ್ಷಗಳ ಮಹತ್ವದ … Continued