ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಕಾಂಗ್ರೆಸ್‌ ಸಂಸದರನ್ನು ಬಂಧಿಸಿದ ಪೊಲೀಸರು…

ಲಕ್ನೋ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ. ಉತ್ತರ ಪ್ರದೇಶದ ಸೀತಾಪುರದ ಲೋಕಸಭಾ ಸಂಸದ ರಾಥೋಡ್ ಅವರನ್ನು ಅವರ ಮನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಬಂಧಿಸಲಾಯಿತು. ಸಂಸದ ರಾಥೋಡ್ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದು, ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಕೊತ್ವಾಲಿ ನಗರ ಪೊಲೀಸರು ರಾಥೋಡ್ ಅವರನ್ನು … Continued

ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

ಜನಸಮೂಹದ ಮುಂದೆಯೇ ಜೋರಾಗಿ ಅತ್ತುಕರೆದು ಗೋಳಾಡಿ ಬೊಬ್ಬೆ ಹೊಡೆದ ಕಾಂಗ್ರೆಸ್ ಶಾಸಕಿ…! ವೀಡಿಯೊ ವೈರಲ್

ಉತ್ತರಾಖಂಡದ ಪೌರ ಚುನಾವಣೆ ನಾಟಕೀಯ ತಿರುವು ಪಡೆದುಕೊಂಡಿದ್ದು, ಭಗವಾನಪುರದ ಮತಗಟ್ಟೆಯಲ್ಲಿ ಗದ್ದಲ ನಡೆದಿದೆ. ಕಾಂಗ್ರೆಸ್ ಶಾಸಕಿ ಮಮತಾ ರಾಕೇಶ ಅವರು ತಮ್ಮ ಪುತ್ರ ಹಾಗೂ ಬೆಂಬಲಿಗರೊಂದಿಗೆ ಸ್ಥಳಕ್ಕೆ ಆಗಮಿಸಿ ಜನರನ್ನು ಮತದಾನ ಮಾಡದಂತೆ ಪೊಲೀಸರು ತಡೆದಿದ್ದಾರೆ ಎಂದು ಆರೋಪಿಸಿ ಜೋರಾಗಿ ಅತ್ತ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಸಕಿ ಅತ್ತು ಕರೆದು ಮಾಡುತ್ತಿರುವ ವೀಡಿಯೊ ಸಾಮಾಜಿಕ … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ಮನಮೋಹನ್‌ ಸಿಂಗ್‌ ನಿಧನದ ಶೋಕಾಚರಣೆ ಮಧ್ಯೆ ಹೊಸವರ್ಷದ ಪಾರ್ಟಿಗೆ ವಿಯೆಟ್ನಾಂಗೆ ಹೊರಟ ರಾಹುಲ್‌ ಗಾಂಧಿ ; ಬಿಜೆಪಿ ವಾಗ್ದಾಳಿ

ನವದೆಹಲಿ: ಸೋಮವಾರ ರಾಜಕೀಯ ವಿವಾದ ಎಬ್ಬಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯವರ ಸಾವನ್ನು ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳವೀಯ, “ಗಾಂಧಿಗಳು ಮತ್ತು … Continued

2023-24ರಲ್ಲಿ ಬಿಜೆಪಿಗೆ ಬಂತು 2600 ಕೋಟಿ ರೂ. ದೇಣಿಗೆ ; ಕಾಂಗ್ರೆಸ್ಸಿಗೆ ಬಂದಿದ್ದೆಷ್ಟು..?

ನವದೆಹಲಿ: ಚುನಾವಣಾ ಆಯೋಗ (ಇಸಿ) ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ವರದಿಗಳ ಪ್ರಕಾರ 2023-24ರ ಅವಧಿಯಲ್ಲಿ ಆಡಳಿತಾರೂಢ ಬಿಜೆಪಿಯು 2,604.74 ಕೋಟಿ ರೂ.ಗೂ ಹೆಚ್ಚು ದೇಣಿಗೆಯನ್ನು ಪಡೆದಿದೆ. ಪ್ರತಿಪಕ್ಷ ಕಾಂಗ್ರೆಸ್ 281.38 ಕೋಟಿ ರೂ.ಗಳನ್ನು ಪಡೆದುಕೊಂಡಿದೆ ಎಂದು ವರದಿಗಳಲ್ಲಿ ಪಟ್ಟಿ ಮಾಡಲಾದ ದೇಣಿಗೆಗಳನ್ನು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಾರ್ಚ್ 31, 2024 ರವರೆಗೆ ಸ್ವೀಕರಿಸಲಾಗಿದೆ. 2019ರ ಲೋಕಸಭೆ … Continued