ಇಂದು ಭಾರತ ಜೋಡೋ ನ್ಯಾಯ ಯಾತ್ರೆಗೆ ಚಾಲನೆ : 67 ದಿನಗಳಲ್ಲಿ 15 ರಾಜ್ಯಗಳ 110 ಜಿಲ್ಲೆಗಳಲ್ಲಿ ಸಾಗಲಿದ್ದಾರೆ ರಾಹುಲ್‌ ಗಾಂಧಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ‘ಭಾರತ ಜೋಡೋ ನ್ಯಾಯ ಯಾತ್ರೆ’ ಭಾನುವಾರ (ಜನವರಿ ೧೪) ಆರಂಭವಾಗಲಿದೆ. 15 ರಾಜ್ಯಗಳು, 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿರುವ ಈ ಯಾತ್ರೆ ಮಣಿಪುರದ ತೌಬಲ್‌ನಲ್ಲಿ ಆರಂಭವಾಗಲಿದೆ. ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಚುನಾವಣೆ ಮೇಲೆ ದೃಷ್ಟಿ ಇಟ್ಟು ಈ ಪಾದಯಾತ್ರೆಯನ್ನು ಕಾಂಗ್ರೆಸ್‌ ಆಯೋಜಿಸಿದೆ ಎಂದು ಗ್ರಹಿಸಲಾಗುತ್ತಿದೆ. … Continued

ಕಾಂಗ್ರೆಸ್ಸಿಗೆ ಗುಡ್‌ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ : ಇಂದೇ ಸಿಎಂ ಏಕನಾಥ ಶಿಂಧೆ ಶಿವಸೇನೆ ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ನಿರೀಕ್ಷೆಯಿದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, … Continued

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಮುಖದ ಅಗತ್ಯವಿಲ್ಲ, ಮೈತ್ರಿಕೂಟದ ಹೆಸರಲ್ಲೇ ಮತ ಕೇಳಬೇಕು: ಶರದ್ ಪವಾರ್

ನವದೆಹಲಿ: ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ಗೆ ಪ್ರಧಾನಿ ಅಭ್ಯರ್ಥಿಯ ಅಗತ್ಯವಿಲ್ಲ, ಏಕೆಂದರೆ ನಾವು ಮೈತ್ರಿಕೂಟದ ಹೆಸರಿನಲ್ಲಿ ಹೆಸರಿನಲ್ಲಿ ಮತ ಕೇಳಬೇಕು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪವಾರ್ ಅವರು, “ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ ಮತ್ತು … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued

ರಾಮ ಮಂದಿರ ನಿರ್ಮಾಣ: ಪ್ರಧಾನಿ ಮೋದಿಯನ್ನು ಹೊಗಳಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ನಾಯಕಿ

ಶಿಮ್ಲಾ : ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಒಂದೆರಡು ದಿನಗಳ ನಂತರ, ಪಕ್ಷದ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, “ರಾಮ ಮಂದಿರವನ್ನು ನಿರ್ಮಿಸಲು ಪ್ರಧಾನಿ … Continued

ಲೋಕಸಭೆ ಚುನಾವಣೆಯಲ್ಲಿ ʼಕೈʼ ಅಭ್ಯರ್ಥಿ ಸೋತರೆ ಸಚಿವರ ತಲೆದಂಡ…!

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಈ ಜವಾಬ್ದಾರಿಯನ್ನು ನಿಭಾಯಿಸದ ಸಚಿವರ ತಲೆ … Continued

‘ಹಾನಿಯಾಗಿದೆ, ಚುನಾವಣೆಯಲ್ಲಿ ಗೋಚರಿಸುತ್ತದೆ…’: ರಾಮಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ ಬಗ್ಗೆ ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ಸಹೋದರ

ಭೋಪಾಲ್‌ : ಅಯೋಧ್ಯೆ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ ಮತ್ತು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ತಮ್ಮದೇ ಪಕ್ಷವಾದ ‘ಕಾಂಗ್ರೆಸ್‌ ‘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪಕ್ಷದ ಸಲಹೆಗಾರರನ್ನು ಪ್ರಶ್ನಿಸಿದ್ದಾರೆ. ಮಾಜಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸಿಂಗ್ ಅವರು, “… … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued

ವಿಮಾನದಲ್ಲಿ ರಾಮ ನಾಮ ಬರೆದ ಕೆ.ಎಚ್‌. ಮುನಿಯಪ್ಪ : 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ ಎಂದ ಸಚಿವರು

ನವದೆಹಲಿ: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರಲು ನಿರ್ಧರಿಸಿರುವ ವಿಚಾರ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ವಾದ ಜೋರಾಗಿದೆ. ಇದೇ ವೇಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾಮನಾಮ ಜಪ ಬರೆಯುತ್ತಿದ್ದ ವೀಡಿಯೊ ಕೂಡ ವೈರಲ್ ಆಗಿದೆ. ಕೆ.ಎಚ್.‌ ಮುನಿಯಪ್ಪ ಅವರು ಎಐಸಿಸಿ ಸಭೆ ನಿಮಿತ್ತ ನವದೆಹಲಿಗೆ ಪ್ರಯಾಣ … Continued

ಅಯೋಧ್ಯೆ ರಾಮ ಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ : ತನ್ನ ಪಕ್ಷವನ್ನು ಟೀಕಿಸಿದ ಕಾಂಗ್ರೆಸ್ ನಾಯಕ

ನವದೆಹಲಿ : ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ನ ನಿರ್ಧಾರವನ್ನು ಗುಜರಾತ್‌ ಕಾಂಗ್ರೆಸ್‌ ಹಿರಿಯ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಬುಧವಾರ ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಅರ್ಜುನ್ ಮೊದ್ವಾಡಿಯಾ ಅವರು ಹಿರಿಯ ನಾಯಕ ಜೈರಾಮ ರಮೇಶ ಅವರ ಹೇಳಿಕೆಯ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. ಅದರ ಜೊತೆಯಲ್ಲಿ ರಾಮ ಮಂದಿರದ … Continued