ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಕಾಂಗ್ರೆಸ್‌ ಸಂಸದನ ಹೇಳಿಕೆ

ಕಾಸರಗೋಡು (ಕೇರಳ) : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಪರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಸದರೊಬ್ಬರು  ಹೇಳಿಕೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಎರಡನೆಯ ಮಹಾಯುದ್ಧದ ನಂತರ, ನ್ಯೂರೆಂಬರ್ಗ್ ಪ್ರಯೋಗಗಳನ್ನು ಯುದ್ಧ ಅಪರಾಧಗಳಲ್ಲಿ ತೊಡಗಿರುವವರಿಗೆ … Continued

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು … Continued

ಇನ್ಮುಂದೆ ಪ್ರತಿ ತಿಂಗಳು ಚಾಮುಂಡೇಶ್ವರಿ ದೇವಿಗೂ ತಲುಪಲಿದೆ ಗೃಹಲಕ್ಷ್ಮೀ ಯೋಜನೆ ಹಣ

ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ … Continued

ಕಾಂಗ್ರೆಸ್ ಸರ್ಕಾರದ ವಸೂಲಿ ದಂಧೆ ಹಾದಿಬೀದಿಗೆ: ಸಿಎಂ ಪುತ್ರನ ವೀಡಿಯೊ ಬಿಡುಗಡೆ ಮಾಡಿ ಜನರಿಗೆ ಉತ್ತರಕೊಡಿ ಎಂದು ಎಚ್‌ಡಿಕೆ ಸವಾಲು

ಬೆಂಗಳೂರು: ಕಾಸಿಗಾಗಿ ಹುದ್ದೆ (#CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೊ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ … Continued

ಅನೇಕ ಕಾಂಗ್ರೆಸ್ ನಾಯಕರು ಭಗವಾನ್ ರಾಮ, ‘ಹಿಂದೂ’ ಎಂಬ ಪದವನ್ನು ದ್ವೇಷಿಸುತ್ತಾರೆ ; ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಶುಕ್ರವಾರ ತಮ್ಮ ಪಕ್ಷದಲ್ಲಿ ಶ್ರೀರಾಮನನ್ನು ಮತ್ತು ‘ಹಿಂದೂ’ ಪದವನ್ನು ದ್ವೇಷಿಸುವ ಅನೇಕ ನಾಯಕರು ಇದ್ದಾರೆ ಎಂದು ಹೇಳಿದ್ದಾರೆ. “ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರಿದ್ದಾರೆ ಎಂದು ನನಗೆ ಅನಿಸಿದೆ, ಈ ನಾಯಕರೂ ಹಿಂದೂ ಪದವನ್ನು ದ್ವೇಷಿಸುತ್ತಾರೆ, ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ, ಪಕ್ಷದಲ್ಲಿ … Continued

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ (DB Chandregowda) ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಎನ್‌ಡಿಟಿವಿ ಸಮೀಕ್ಷೆ; ತುರುಸಿನ ಸ್ಪರ್ಧೆಯಲ್ಲಿ ಕಾಂಗ್ರೆಸ್ಸಿನ ಕಮಲನಾಥರಿಗಿಂತ ಬಿಜೆಪಿ ಶಿವರಾಜ ಸಿಂಗ್ ಸ್ವಲ್ಪ ಮುಂದೆ

ಮಧ್ಯಪ್ರದೇಶವು ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡುವ ಎರಡು ವಾರಗಳ ಮೊದಲು, ಎನ್‌ಡಿಟಿವಿ (NDTV-CSDS) ಲೋಕನೀತಿ ಸಮೀಕ್ಷೆಯು ಕಾಂಗ್ರೆಸ್‌ನ ಕಮಲನಾಥ ಅವರಿಗಿಂತ ಹಾಲಿ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್‌ ಅವರಿಗೆ ಆದ್ಯತೆ ನೀಡುತ್ತಾರೆ ಎಂದು ಬಹಿರಂಗಪಡಿಸಿದೆ. ಆದಾಗ್ಯೂ, ಅಂತರವು ಕೇವಲ 4% ಮಾತ್ರ ಇದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳಲ್ಲಿ ಅಕ್ಟೋಬರ್ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ಮಧ್ಯದ ತುರುಸಿನ ಸ್ಪರ್ಧೆಯಲ್ಲಿ ಗೆಲುವಿನತ್ತ ಯಾರು…? ಇಂಡಿಯಾ ಟಿವಿ-ಸಿಎನ್‌ಎಕ್ಸ್ 2ನೇ ಸಮೀಕ್ಷೆಯಲ್ಲಿ ಬಹಿರಂಗ

ಈ ತಿಂಗಳು ನಡೆಯುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಪಡೆಯಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎರಡನೇ  ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಸದನದಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಪ್ರಕ್ಷೇಪಗಳು ತೋರಿಸಿವೆ, ಕಳೆದ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ … Continued

ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued