“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ಬೆಂಗಳೂರು : ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಗದ್ದಲ…!

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಜಗಳ, ತಳ್ಳಾಟ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth Congress) ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, … Continued

ರಾಹುಲ್‌ ಗಾಂಧಿ ಪರಮಾಪ್ತಗೆ ತಪ್ಪಿದ ಹುದ್ದೆ…! ಕೇರಳದ ನೂತನ ಸಿಎಂ ಆಗಿ ಸತೀಶನ್ ಆಯ್ಕೆ :ಇವರನ್ನೇ ಆಯ್ಕೆ ಮಾಡಿದ್ದು ಯಾಕೆ…?

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟನ್ನು ಗುರುವಾರ ಕೊನೆಗೂ ಬಿಡಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಹೈಕಮಾಂಡ್‌ನ ನೆಚ್ಚಿನ ಅಭ್ಯರ್ಥಿಯಾಗಿದ್ದ ಕೆ.ಸಿ. ವೇಣುಗೋಪಾಲ ಅವರನ್ನು ಬದಿಗೊತ್ತಿ, ‘ಜನಪ್ರಿಯ ನಾಯಕ’ ಎಂದೇ ಗುರುತಿಸಿಕೊಂಡಿರುವ ಕೇರಳದ ನಿರ್ಗಮಿತ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ … Continued

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ಸಿಎಂ ವಿಜಯ ವಿಶೇಷಾಧಿಕಾರಿಯಾಗಿ ಜ್ಯೋತಿಷಿ ವೆಟ್ರಿವೇಲ್ ನೇಮಕ ; ಕಾಂಗ್ರೆಸ್‌ ಅಸಮಾಧಾನ

 ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ  ವಿಜಯ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ (OSD) ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ತಮಿಳುನಾಡು ಸರ್ಕಾರದ ಸಾರ್ವಜನಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ವೆಟ್ರಿವೇಲ್ ಅವರು ಮುಖ್ಯಮಂತ್ರಿಯವರ ರಾಜಕೀಯ ವಿಭಾಗದ ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಅಧಿಕಾರ ವಹಿಸಿಕೊಂಡ … Continued

ಮರು ಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮರು ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲು ಸೂಚಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಮಾರು … Continued

ಕೇರಳ ಸಿಎಂ ಗಾದಿಗೆ ‘ಕೈ’ ಕಚ್ಚಾಟ: ವೇಣುಗೋಪಾಲ vs ಸತೀಶನ್ ನಡುವೆ ಹಗ್ಗಜಗ್ಗಾಟ ; ಹೈಕಮಾಂಡ್‌ಗೆ ಇಕ್ಕಟ್ಟು

ತಿರುವನಂತಪುರಂ/ದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿದ್ದರೂ, ಫಲಿತಾಂಶ ಬಂದು ವಾರ ಕಳೆದರೂ ಮುಖ್ಯಮಂತ್ರಿ ಪಟ್ಟಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗದೆ ಕಾಂಗ್ರೆಸ್‌ ಹೈಕಮಾಂಡ್ ಒದ್ದಾಡುತ್ತಿದೆ. ಆಡಳಿತರೂಢ ಎಲ್‌ಡಿಎಫ್‌ ಮಣಿಸಿ 102 ಸ್ಥಾನಗಳನ್ನು ಗೆದ್ದಿರುವ ಯುಡಿಎಫ್‌ (UDF) ಮೈತ್ರಿಕೂಟದಲ್ಲಿ ಈಗ ‘ನಾಯಕತ್ವದ ಸಂಘರ್ಷ’ ಮುನ್ನಲೆಗಷ್ಟೇ ಅಲ್ಲದೆ ಬೀದಿಗೂ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸದ್ಯ ನಾಲ್ವರು … Continued

ಸಚಿವ ಡಿ.ಸುಧಾಕರ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ (D Sudhakar passes away) ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಡಿ. ಸುಧಾಕರ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ ಬೆಂಗಳೂರಿನ ಕಿಮ್ಸ್ … Continued

ಸತೀಶನ್, ವೇಣುಗೋಪಾಲ ಅಥವಾ ಚೆನ್ನಿತ್ತಲ…? ಕೇರಳದ ಮುಂದಿನ ಸಿಎಂ ಯಾರು ?

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಪೂರ್ಣ ಬಹುಮತದೊಂದಿಗೆ ಭರ್ಜರಿ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಒಟ್ಟು 140 ಸ್ಥಾನಗಳಲ್ಲಿ 102 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷವೊಂದೇ 63 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಆದರೆ, ಈ ಅಭೂತಪೂರ್ವ ಯಶಸ್ಸಿನ ನಡುವೆಯೂ ಕೇರಳಂಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ … Continued

ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued