ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಈಗ ಚುನಾವಣೆ ನಡೆದರೆ ಎನ್‌ಡಿಎ ಎಷ್ಟು ಗೆಲ್ಲಲಿದೆ..? ಇಂಡಿಯಾ ಮೈತ್ರಿಕೂಟ ಗೆಲ್ಲುವುದೆಷ್ಟು..? : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್ ಹೇಳಿದ್ದೇನೆಂದರೆ…

ನವದೆಹಲಿ: ಈಗಲೇ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಮಂಗಳವಾರ (ಮಾರ್ಚ್ 5) ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್ (ತೃಣಮೂಲ ಕಾಂಗ್ರೆಸ್ ಇಲ್ಲದೆ) 98 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಮಮತಾ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸ್ವೀಪ್, ತೆಲಂಗಾಣ, ತಮಿಳುನಾಡಿನಲ್ಲಿ ಬಿಜೆಪಿ ಗಮನಾರ್ಹ ಸಾಧನೆ; ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌

ಬೆಂಗಳೂರು : 2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಭವಿಷ್ಯ ನುಡಿದಿದೆ. ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಸೋಮವಾರ (ಮಾರ್ಚ್ 4) ಪ್ರಕಟವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ … Continued

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ಸಿನ ಡಾ ನಾಸಿರ್‌ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ‘ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ’ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ … Continued

ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ…!

ಕೋಲ್ಕತ್ತಾ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿ ಇರುವವರೆಗೆ ತಲೆ ಕೂದಲು ಬೆಳೆಸಿಕೊಳ್ಳುವುದಿಲ್ಲ ಎಂದು ಶಪಥಗೈದಿದ್ದ ಕಾಂಗ್ರೆಸ್ ಮಾಜಿ ನಾಯಕ ಕೌಸ್ತವ್ ಬಾಗ್ಚಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಕೌಸ್ತವ ಬಾಗ್ಚಿ ಅವರನ್ನು ಸ್ವಾಗತಿಸಲು ನಮಗೆ ಸಂತೋಷವಾಗಿದೆ ಎಂದು ಪಕ್ಷದ ಮುಖಂಡ ಸುವೆಂದು ಅಧಿಕಾರಿ ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ … Continued

ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶವೇ ಹೊರತು ನಮಗಲ್ಲ : ವಿವಾದಕ್ಕೆ ಕಾರಣವಾದ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಹರಿಪ್ರಸಾದ … Continued

ಹಿಮಾಚಲ: ಪತನದ ಭೀತಿಯಲ್ಲಿ ಕಾಂಗ್ರೆಸ್​ ಸರ್ಕಾರ…! ಬಹುಮತವಿದ್ರೂ ರಾಜ್ಯಸಭೆ ಚುನಾವಣೆಯಲ್ಲಿ ಸೋಲು, ಪ್ರಬಲ ಸಚಿವ ರಾಜೀನಾಮೆ, 26 ಶಾಸಕರು ರೆಬೆಲ್..!!

ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿ ಎಂಬಂತೆ ಬಿಜೆಪಿ ಜಯಗಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಶಾಸಕರಿಂದ ದೊಡ್ಡ ಪ್ರಮಾಣದಲ್ಲಿ ಅಡ್ಡಮತದಾನ ನಡೆದಿದ್ದು, ಇದು ಹಿಮಾಚಲದ ಕಾಂಗ್ರೆಸ್ ಸರ್ಕಾರವನ್ನೇ ಉರುಳಿಸುವ ಸುಳಿವನ್ನು ಕೂಡ ನೀಡಿದೆ. ಆಡಳಿತಾರೂಢ ಕಾಂಗ್ರೆಸ್​ ಶಾಸರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಶಾಸಕರ ವಿಶ್ವಾಸ … Continued

ರಾಜ್ಯಸಭೆ ಚುನಾವಣೆ : ಕಾಂಗ್ರೆಸ್‌ ಶಾಸಕರ ಅಡ್ಡಮತದಾನ, ಹಿಮಾಚಲದಲ್ಲಿ ಅಭಿಷೇಕ ಮನು ಸಿಂಘ್ವಿಗೆ ಸೋಲು

ಶಿಮ್ಲಾ: ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಮಂಗಳವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ..! ಮತ ಎಣಿಕೆಯ ವೇಳೆ ಇಬ್ಬರು ಅಭ್ಯರ್ಥಿಗಳು ತಲಾ 34-34 ಮತಗಳನ್ನು ಪಡೆದ ನಂತರ ಸಮನಾದ ಟಾಸ್‌ ಮಾಡುವ ಮೂಲಕ ವಿಜೇತರನ್ನು ನಿರ್ಧರಿಸಲಾಯಿತು. 68 ಸದಸ್ಯ … Continued

ವೀಡಿಯೊ..| ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್‌ ಹುಸೇನ್‌ ಗೆಲುವಿನ ಸಂಭ್ರಮದ ವೇಳೆ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ; ಬಿಜೆಪಿ ಆಕ್ರೋಶ

ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಮಂಗಳವಾರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರು ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಅವರ ಬೆಂಬಲಿಗರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ … Continued

ರಾಜ್ಯಸಭೆ ಚುನಾವಣೆ : ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್‌ 3, ಬಿಜೆಪಿ 1ರಲ್ಲಿ ಗೆಲುವು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದ್ದು. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಕಾಂಗ್ರೆಸ್ಸಿನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ ಮಾಕನ್ -47 ಮತಗಳು, ನಾಸೀರ್ ಹುಸೇನ್ – 47 … Continued