ಅಹಮದಾಬಾದ್ ಐಐಎಂನಲ್ಲಿ 40 ಮಂದಿಗೆ ಕೊರೊನಾ ಸೋಂಕು

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ) ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ … Continued

2ನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕೊರೊನಾ…!!

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಆರಂಭವಾಗಿದೆ ಎಂದು ಆರೋಗ್ಯ ಸಚಿವರಾದ ಡಾ.ಸುಧಾಕರ ಅವರೇ ಹೇಳಿದ್ದು, ಸರ್ಕಾರ ಸೋಂಕು ಹರಡುವಿಕೆ ತಡೆಯಲು ಹಲವು ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕದಲ್ಲಿ ಶನಿವಾರ 2,886 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,252. ಬೆಂಗಳೂರು ನಗರದಲ್ಲಿ 1820 ಹೊಸ ಪ್ರಕರಣ ದಾಖಲಾಗಿದೆ. ಆದರೆ ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಕೊರೊನಾ … Continued

ಕೋಲಾರ ಸಂಸದರಿಗೆ ಕೊರೊನಾ ಸೋಂಕು ದೃಢ

ಕೋಲಾರ: ಸಂಸದ ಎಸ್‌.ಮುನಿಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಸಂಸದರು ಬೆಂಗಳೂರಿನ ತಮ್ಮ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಶುಕ್ರವಾರ ಅನಾರೋಗ್ಯದಿಂದ ಬಳಲಿದ ಅವರು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದ ಸಂಸದರು ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದ … Continued

ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢ

ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ಮಾಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ … Continued

ಮಣಿಪಾಲ ಎಂಐಟಿಯಲ್ಲಿ  10 ದಿನದಲ್ಲಿ 770 ವಿದ್ಯಾರ್ಥಿಗಳಿಗೆ ಕೊರೊನಾ  

ಉಡುಪಿ: ಮಣಿಪಾಲದ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಸೋಂಕಿನಿಂದಾಗಿ ಉಡುಪಿ ಜಿಲ್ಲೆಯಲ್ಲಿ ಏಕದಿನದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶುಕ್ರವಾರ 210ಕ್ಕೆ ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ ಎಂಐಟಿ 184 ವಿದ್ಯಾರ್ಥಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. 10-12 ದಿನಗಳಲ್ಲಿ ಸುಮಾರು 770 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎರಡುವಾರದ ಹಿಂದೆ ಎಂಐಟಿಯಲ್ಲಿ ಆಫ್’ಲೈನ್ ಎಂಜಿನಿಯರಿಂಗ್ ತರಗತಿಗಳನ್ನು ಆರಂಭವಾಗಿದ್ದವು. … Continued

ಶುಕ್ರವಾರ ಮಣಿಪಾಲ ಎಂಐಟಿಯ 184 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಉಡುಪಿ: ಕೋವಿಡ್ ಎರಡನೇ ಅಲೆಯ ಭೀತಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 210 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, . ಇವರಲ್ಲಿ 184 ಸೋಂಕಿತರು ಮಣಿಪಾಲ ಎಂಐಟಿ ಕ್ಯಾಂಪಸ್ ಒಳಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 210 ಜನರಿಗೆ ಕೊರೊನಾ ಸೋಂಕು … Continued

ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ಸಂಪರ್ಕ ರಸ್ತೆಗಳು ಬಂದ್‌

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾಪ್ರಕರಣಗಳ ದಾಖಲೆ ಮಟ್ಟದಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯದ ರಸ್ತೆಗಳಿಗೆ ಮುಳ್ಳು ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಚಿಕ್ಕೋಡಿ, ಅಥಣಿ ಹಾಗೂ ಕಾಗವಾಡ ತಾಲೂಕಿನ ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಿದೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ – ದಾನವಾಡ, ಯಕ್ಸಂಬಾ – ದತ್ತವಾಡ, ಮಲಿಕವಾಡ – ದತ್ತವಾಡ … Continued

ಮಹಾರಾಷ್ಟ್ರದಲ್ಲಿ ಮಾ.೨೮ರಿಂದ ರಾತ್ರಿ ಕರ್ಫ್ಯೂ

ಮುಂಬೈ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 28 ರಿಂದ ಇಡೀ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರದಿಂದ ರಾತ್ರಿ ಕರ್ಫ್ಯೂ ಆದೇಶಿಸಿದ್ದಾರೆ. ಜನರು ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್ ಅನ್ನು ಗಮನಿಸದಿದ್ದರೆ ಕಠಿಣ ನಿರ್ಬಂಧಗಳ ಬಗ್ಗೆ ಠಾಕ್ರೆ ಎಚ್ಚರಿಸಿದ್ದಾರೆ. ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು … Continued

ಬೆಂಗಳೂರಲ್ಲಿ ೧೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಬೆಂಗಳೂರು: ಬೆಂಗಳೂರು ನಗರದ ಶಾಲಾ ಮಕ್ಕಳಲ್ಲಿ ೧೪ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿ ನಾಲ್ಕು ಶಾಲೆಗಳ ೧೪ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಆಡಳಿತಕ್ಕೆ ತಲೆನೋವು ತಂದಿದೆ. ಹತ್ತು ವರ್ಷದೊಳಗಿನ ಮಕ್ಕಳಿಗೆ ಸೋಂಕು ಹರಡುತ್ತಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಜೋಗುಪಾಳ್ಯ ವಾರ್ಡ್‍ನಲ್ಲಿರುವ ಬಿಬಿಎಂಪಿಯ ಒಂದೇ … Continued

ಬಾಲಿವುಡ್‌ ನಟ ಅಮೀರ್‌ ಖಾನಗೆ ಕೊರೊನಾ ಸೋಂಕು

ಮುಂಬೈ: ಖ್ಯಾತ ಬಾಲಿವುಡ್‌ ನಟ ಅಮೀರ್ ಖಾನಗೆ  ಕೊರೊನಾ ಸೋಂಕು ದೃಢಪಟ್ಟಿದೆ. ಕ ರಣಬೀರ್ ಕಪೂರ್ ಮತ್ತು ಕಾರ್ತಿಕ್ ಆರ್ಯನ್ ನಂತರ ಅಮೀರ್ ಖಾನ್ ಕೊರೊನಅ ಸೋಂಕಿಗೆ ಒಳಗಾಗಿದ್ದು, ನಟ ಹೋಮ್‌ ಕ್ಯಾರೆಂಟೈನ್‌ನಲ್ಲಿದ್ದಾರೆ. ನಟ ಅಮೀರ್ ಖಾನ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್‌ ಬಂದಿದೆ. ಅಮೀರ್ ವಕ್ತಾರರು, ಅಮೀರ್ ಖಾನ್ ಅವರಿಗೆ ಕೊರೊನಅ ಸೋಖು ದೃಢಪಟ್ಟಿದೆ. … Continued