ಕರ್ನಾಟಕದಲ್ಲಿ 1,798 ದೈನಂದಿನ ಕೊರೊನಾ ಸೋಂಕು..ಎರಡನೇ ಅಲೆ ಎಚ್ಚರಿಕೆ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ( ಶನಿವಾರ) ರಾಜ್ಯದಲ್ಲಿ 1,798 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೊರೋನಾ ಸೋಂಕಿನಿಂದ ಏಳು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು 12,828 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ … Continued

ತಮಿಳುನಾಡು: ಕೊರೊನಾ ಹೆಚ್ಚಳ, 9, 10, 11ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳು ಸ್ಥಗಿತ

ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಮಾರ್ಚ್ 22ರಿಂದ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವಂತೆ ಸರ್ಕಾರ ಆದೇಶಿಸಿದೆ. ಶಾಲೆಗಳು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಕ್ತವಾಗಿರುತ್ತವೆ. ಕೋವಿಡ್ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ರಾಜ್ಯ ಮಂಡಳಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. … Continued

ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಶನಿವಾರ ಕೊವಿಡ್‌ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಆದಿತ್ಯ ಠಾಕ್ರೆ, ಕೋವಿಡ್‌ನ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ನಾನು ಪರೀಕ್ಷಿಸಿಕೊಂಡಿದ್ದೇನೆ ಮತ್ತು ಪರೀಕ್ಷೆಯಲ್ಲಿ ಕೊವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಹೀಗಾಗಿ ನನ್ನೊಂದಿಗೆ … Continued

ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯಾಗುವ ಸಾಧ್ಯತೆ: ವಿಶ್ವಸಂಸ್ಥೆ

ಜೆನಿವಾ: ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯ ರೂಪ ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಹವಾಮಾನ ಬದಲಾವಣೆಯನ್ನು ಆಧಾರವಾಗಿಟ್ಟುಕೊಂಡು ಕೊವಿಡ್‌-೧೯ ಪ್ರಸಾರ ತಡೆಯಲು ಜಾರಿಗೊಳಿಸಿರುವ ಮಾರ್ಗಸೂಚಿಗಳ ಪಾಲನೆ ಅಗತ್ಯವಾಗಿದೆ ಎಂದು ತಿಳಿಸಿದೆ. ವಿಶ್ವಸಂಸ್ಥೆಯ ಹವಾಮಾನ ಸಂಘಟನೆ, ಕೊರೊನಾ ಪ್ರಸರಣದ ಮೇಲೆ ಹವಾಮಾನ ಬದಲಾವಣೆ ಹಾಗೂ ವಾಯುವಿನ ಗುಣಮಟ್ಟ ಯಾವ ರೀತಿ ಪ್ರಭಾವ ಬೀರುತ್ತದೆ ಎಂದು … Continued

ಮಹಾರಾಷ್ಟ್ರ: 26 ಸಾವಿರ ಸಮೀಪ ಬಂದ ಕೊರೊನಾ ಪ್ರಕರಣಗಳ ಸಂಖ್ಯೆ..!

ಮುಂಬೈ: ಮಹಾರಾಷ್ಟ್ರವು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಕಳೆದ 24 ತಾಸಿನಲ್ಲಿ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನದಲ್ಲಿ 25,833 ಸೋಂಕುಗಳು ವರದಿಯಾಗಿವೆ, ಬುಧವಾರ ರಾಜ್ಯವು 23,000ಕ್ಕೂ ಹೆಚ್ಚು ಹೊಸ ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡಿತ್ತು. ಆದಾಗ್ಯೂ, ವೈರಸ್ ಸಂಬಂಧಿತ ಸಾವುನೋವುಗಳು ಇಳಿಮುಖವಾಗಿವೆ. ಗುರುವಾರ … Continued

ವಿದ್ಯಾರ್ಥಿಗಳಿಗೆ ಕೊರೊನಾ : ಮಣಿಪಾಲದ ಎಂಐಟಿ ಕಂಟೈನ್ಮೆಂಟ್ ಆಗಿ ಘೋಷಣೆ

ಮಣಿಪಾಲ್ : ಕೊರೊನಾ ಪ್ರಕರಣ ಹೆಚ್ಚಳದಿಂದಾಗಿ ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕಂಟೇನರ್ ವಲಯವೆಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ. ಕ್ಯಾಂಪಸ್ ನಲ್ಲಿ ಮಾರ್ಚ್ 11 ರಿಂದ 16ರ ನಡುವೆ 59 ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಕರೋನಾ ವೈರಸ್ ಪ್ರಕರಣಗಳು ವರದಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಪೈಕಿ … Continued

ಕೊರೊನಾ ಎರಡನೇ ಅಲೆ ಕಾಲಘಟ್ಟದಲ್ಲಿ ನಾವು,ತಡೆಯದಿದ್ದರೆ ಮಹಾಸ್ಫೋಟವಾಗಲಿದೆ: ಪ್ರಧಾನಿ ಎಚ್ಚರಿಕೆ

ನವ ದೆಹಲಿ: ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೊರೊನಾ ಎರಡನೇ ಅಲೆಗಳ ಬಗ್ಗೆ (ಕೋವಿಡ್-19 ರ) ಸೂಚನೆ ನೀಡಿದ್ದು, ಭಾರತದಲ್ಲಿ ಮಹಾರಾಷ್ಟ್ರ, ಪಂಜಾಬ್ ನಂತಹ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ … Continued

ಕೊರೊನಾ: ಕರ್ನಾಟಕದಲ್ಲಿ ಲಾಕ್‌ಡೌನ್‌ ಬಗ್ಗೆ ಹೇಳಿದ್ದೇನೆಂದರೆ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಇದಕ್ಕೆ ಲಸಿಕೆ ಇರಲಿಲ್ಲ.ಈಗ ಲಸಿಕೆ ಬಂದಿದೆ. ಕೊರೊನಾಕ್ಕೆ … Continued

ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ … Continued

ಲಾಕ್‌ಡೌನ್‌ ಪ್ರಸ್ತಾಪವಿಲ್ಲ, ಆದ್ರೆ ಜನ ನಿಯಮ ಪಾಲಿಸದಿದ್ರೆ ಅನಿವಾರ್ಯವಾಗಬಹುದು:ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಮಾಡುವ ಚಿಂತನೆ ಇಲ್ಲ ಆದರೆ, ಜನ ಸರ್ಕಾರದ ನಿಯಮ ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಎಚ್ಚರವಹಿಸಬೇಕು, ಇಲ್ಲದಿದ್ದರೆ ಲಾಕ್‌ಡೌನ್ … Continued