ಕೊರೊನಾ ಎರಡನೇ ಅಲೆ ಕಾಲಘಟ್ಟದಲ್ಲಿ ನಾವು,ತಡೆಯದಿದ್ದರೆ ಮಹಾಸ್ಫೋಟವಾಗಲಿದೆ: ಪ್ರಧಾನಿ ಎಚ್ಚರಿಕೆ

ನವ ದೆಹಲಿ: ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೊರೊನಾ ಎರಡನೇ ಅಲೆಗಳ ಬಗ್ಗೆ (ಕೋವಿಡ್-19 ರ) ಸೂಚನೆ ನೀಡಿದ್ದು, ಭಾರತದಲ್ಲಿ ಮಹಾರಾಷ್ಟ್ರ, ಪಂಜಾಬ್ ನಂತಹ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ … Continued

ಕೊರೊನಾ: ಕರ್ನಾಟಕದಲ್ಲಿ ಲಾಕ್‌ಡೌನ್‌ ಬಗ್ಗೆ ಹೇಳಿದ್ದೇನೆಂದರೆ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಇದಕ್ಕೆ ಲಸಿಕೆ ಇರಲಿಲ್ಲ.ಈಗ ಲಸಿಕೆ ಬಂದಿದೆ. ಕೊರೊನಾಕ್ಕೆ … Continued

ಕೊರೊನಾ: ಮತ್ತೆ ಕಠಿಣ ನಿಯಮಗಳ ಮುನ್ಸೂಚನೆ ನೀಡಿದ ಆರೋಗ್ಯ ಸಚಿವ..!

ಬೆಂಗಳೂರು: ಕೊರೊನಾ ಬಗ್ಗೆ ಜನ ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.೧೭ರಂದು ಪ್ರಧಾನಿ ಜೊತೆ ಕೊರೊನಾ ನಿಯಂತ್ರಣದ ಬಗ್ಗೆ ವಿಡಿಯೋ ಸಂವಾದವಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ … Continued

ಲಾಕ್‌ಡೌನ್‌ ಪ್ರಸ್ತಾಪವಿಲ್ಲ, ಆದ್ರೆ ಜನ ನಿಯಮ ಪಾಲಿಸದಿದ್ರೆ ಅನಿವಾರ್ಯವಾಗಬಹುದು:ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಮಾಡುವ ಚಿಂತನೆ ಇಲ್ಲ ಆದರೆ, ಜನ ಸರ್ಕಾರದ ನಿಯಮ ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಎಚ್ಚರವಹಿಸಬೇಕು, ಇಲ್ಲದಿದ್ದರೆ ಲಾಕ್‌ಡೌನ್ … Continued

ಕರ್ನಾಟಕದಲ್ಲಿ ೯೦೦ ದಾಟಿದ ದಿನವೊಂದರ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೊರೊನಾಪ್ರಕರಣ ಹೆಚ್ಚಳವಾಗುತ್ತಿದ್ದು, ಕಳೆದ ೨೪ ತಾಸಿನಲ್ಲಿ ದಿನ ನಿತ್ಯದ ಸೋಂಕು ೯೦೦ ಅನ್ನು ದಾಟಿದೆ. ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ೯೨೧ ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಮೃತಪಟ್ಟಿದ್ದಾರೆ. ಇದೇ ವೇಳೆ ೯೯೨ ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ೧೨೩ ಜನರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗಿರುತ್ತಿರುವುದರಿಂದ ರಾಜ್ಯ … Continued

೨೫ ಸಾವಿರದ ಸಮೀಪ ತಲುಪಿದ ದೇಶದ ದಿನವೊಂದರ ಕೊರೋನಾ ಪ್ರಕರಣಗಳ ಸಂಖ್ಯೆ ..!

ನವದೆಹಲಿ: ಕಳೆದ 24 ತಾಸಿನಲ್ಲಿ ದೇಶದಲ್ಲಿ 24,882 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದು ಈ ವರ್ಷದಲ್ಲಿ ದಿನವೊಂದಕ್ಕೆ ದಾಖಲಾಗಿರುವ ಅತೀ ಹೆಚ್ಚು ಸಂಖ್ಯೆಯ ಪ್ರಕರಣಗಳಾಗಿವೆ. ಇದರಲ್ಲಿ ಮಾಹಾರಷ್ಟ್ರದ ಪ್ರಕರಣಗಳೇ ಅಧಿಕ. ಕಳೆದ ಒಂದು ದಿನದಲ್ಲಿ 140 ಸೋಂಕಿತರುಮೃತಪಟ್ಟಿದ್ದಾರೆ. ಈವರೆಗೆ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 1,13,33,728 … Continued

ಕೊರೊನಾ ಹೆಚ್ಚಳ ಆತಂಕ: ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಗುರುವಾರದಿಂದ (ಮಾ.೧೧) ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್, ರೆಸ್ಟೊರೆಂಟ್‍ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. … Continued

ಬಾಲಿವುಡ್‌ ನಟ ರಣಬೀರ್ ಕಪೂರ್‌ಗೆ ಕೊರೊನಾ

ನವ ದೆಹಲಿ:ಬಾಲಿವುಡ್‌ನ ಖ್ಯಾತ ನಟ ರಣಬೀರ್ ಕಪೂರ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ನಟ ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಂಗಳವಾರ ಇನ್ ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಮಗ ರಣಬೀರ್ ಕಪೂರ್‌ ಅವರಿಗೂ ಕೊರೋನಾ ಪಾಸಿಟಿವ್ ಎಂಬುದು ಈಗ ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿರುವ ಅವರು, ವೈದ್ಯರ ಸಲಹೆಯ … Continued

ಕರ್ನಾಟಕ: ೬೨೨ ಕೊರೊನಾ ಸೋಂಕು, ೩ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾಕಳೆದ ೨೪ ತಾಸಿನಲ್ಲಿ 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,362ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ 389 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued