ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಭಾರತದ ನಾಯಕತ್ವ: ವಿಶ್ವಸಂಸ್ಥೆ

ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ನಾಯಕತ್ವವನ್ನು ಶ್ಲಾಘಿಸಿದ ವಿಶ್ವಸಂಸ್ಥೆ, ವಿಶ್ವ ಮಟ್ಟದಲ್ಲಿ ಕೊವಿಡ್‌-೧೯ ಲಸಿಕೆ ಪೂರೈಕೆಗೆ ಭಾರತ ಮಾಡುತ್ತಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ವಿಶ್ವ ಸಂಸ್ಥೆಗೆ ಕೊವಿಡ್‌-೧೯ ಲಸಿಕೆಯ ಡೋಸ್‌ಗಳನ್ನು ನೀಡಿದ್ದಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೊನಿಯೋ ಗುಟೆರಸ್‌ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತವು ೧೫೦ ದೇಶಗಳಿಗೆ ಔಷಧಿಗಳು, … Continued

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ವರದಿ ತರುವುದು ಕಡ್ಡಾಯ

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರುವುದು ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ತಿಳಿಸಿದ್ದಾರೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬಂದವರಿಗೆ ಕೊವಿಡ್‌-೧೯ ಪರೀಕ್ಷೆ ಆಗಿದೆಯೇ ಎಂಬುದನ್ನು ಉದ್ಯೋಗದಾತ ಕಂಪನಿಗಳು, ವಾಸವಿರುವ ಅಪಾರ್ಟಮೆಂಟ್‌ ಮಾಲಿಕರ ಜವಾಬ್ದಾರಿ. ಕೊರೊನಾ ಪರೀಕ್ಷೆ ಮಾಡಿಸದೇ … Continued

ಕೊರೊನಾ: ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಬೆಂಗಳೂರು,  ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಂದೇ ದಿನ 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.  24 ಗಂಟೆಗಳಲ್ಲಿ 344 ಸೋಂಕಿತರು … Continued

ಪ್ಲಾಸ್ಟಿಕ್‌, ಗಾಜಿನ ಮೇಲೆ ಹೆಚ್ಚು ಕಾಲ ಬದುಕುವ ಕೊರೊನಾ ಸೋಂಕು: ಐಐಟಿ ಸಂಶೋಧನೆ

ಕೊರೊನಾ ಸೋಂಕು ಕಾಗದ ಹಾಗೂ ಬಟ್ಟೆಗೆ ಹೋಲಿಕೆ ಮಾಡಿದರೆ ಪ್ಲಾಸ್ಟಿಕ್‌ ಹಾಗೂ ಗಾಜಿನ ಮೇಲ್ಮೈ ಮೇಲೆ ಹೆಚ್ಚು ಕಾಲ ಬದುಕುಳಿಯುತ್ತದೆ ಎಂದು ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಬಾಂಬೆ ಸಂಶೋಧಕರು ತಿಳಿಸಿದ್ದಾರೆ. ಭೌತಶಾಸ್ತ್ರದ ಸಂಶೋಧನಾ ಜರ್ನಲ್‌ನಲ್ಲಿ ಪ್ರಕಟಗೊಂಡ ಪ್ರಬಂಧದಲ್ಲಿ ಈ ಮಹತ್ವದ ವಿಷಯವನ್ನು ತಿಳಿಸಲಾಗಿದೆ. ಗಾಜು ಹಾಗೂ ಪ್ಲಾಸ್ಟಿಕ್‌ ಮೇಲೆ ಕೊವಿಡ್‌-೧೯ ಸೋಂಕು ಹೆಚ್ಚು … Continued

ಗುಜರಾತ ಸಿಎಂ ವಿಜಯ ರೂಪಾಣಿಗೆ ಕೊರೊನಾ ದೃಢ

ಗುಜರಾತ ಮುಖ್ಯಮಂತ್ರಿ ವಿಜಯ ರೂಪಾಣಿ ಅವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಭಾನುವಾರ ರೂಪಾಣಿ ಅವರ ಮಾದರಿ ಪಡೆದು ಪರೀಕ್ಷೆಗೆ ಕಳಿಸಲಾಗಿತ್ತು. ಅವರಿಗೆ ಕೋವಿಡ್‌-೧೯ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಯು.ಎನ್‌.ಮೆಹ್ತಾ ಆಸ್ಪತ್ರೆ ತಿಳಿಸಿದೆ. ವಡೋದರಾದ ನಿಜಾಮ್‌ಪುರ ಪ್ರದೇಶದಲ್ಲಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಪ್ರಚಾರಸಭೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ವಿಜಯ ರೂಪಾಣಿ ಕುಸಿದು ಬಿದ್ದಿದ್ದರು. ಅವರನ್ನು ತಕ್ಷಣ … Continued

ಕೆನಡಾಕ್ಕೆ ಭಾರತದಿಂದ ೫ ಲಕ್ಷ ಕೊರೊನಾ ಲಸಿಕೆ ಪೂರೈಕೆ

ನವದೆಹಲಿ: ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಕೋರಿಕೆ ಮೇರೆಗೆ ಫೆಬ್ರವರಿಯಲ್ಲಿ ೫ ಲಕ್ಷ ಕೊರೊನಾ ಲಸಿಕೆಗಳನ್ನು ಕೆನಡಾಕ್ಕೆ ಪೂರೈಸಲು ಭಾರತ ಒಪ್ಪಿಕೊಂಡಿದೆ. ಕೆನಡಾ ಮಾತ್ರವಲ್ಲದೇ ಕೋವಿಡ್ ಲಸಿಕೆಯನ್ನು ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಇತರ ನೆರೆಯ ರಾಷ್ಟ್ರಗಳಿಗೆ ಪೂರೈಸಲು ಮೋದಿ ಸರ್ಕಾರ ನಿರ್ಧರಿಸಿದೆ. ಸರಬರಾಜು ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ಮಿಶ್ರಣವಾಗಿರುತ್ತದೆ. ಫೆಬ್ರವರಿ 10 ರಂದು … Continued

ಕೊರೋನಾ: ೪೩೦ ಜನರಿಗೆ ಸೋಂಕು, ೭ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ … Continued

ಮುಂಬೈ ಲೋಕಲ್‌ ಟ್ರೇನ್‌ ಆರಂಭದ ನಂತರ ಹೆಚ್ಚಿದ ಕೊರೋನಾ

ಮುಂಬೈ: ಸ್ಥಳೀಯ ರೈಲು ಸೇವೆ ಆರಂಭಗೊಂಡ ನಂತರ ಮೂಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇತ್ತೀಚಿಗೆ ನಗರದಲ್ಲಿ ಧಿಡೀರನೇ ಕೊವಿಡ್‌-೧೯ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಂಡಿರುವುದಕ್ಕೆ ಸ್ಥಳಿಯ ರೈಲು ಸೇವೆ ಆರಂಭಿಸಿರುವುದೇ ಕಾರಣ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆ.೧೦ರಂದು ನಗರದಲ್ಲಿ ೫೫೮ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೫೩೬೯ಕ್ಕೇರಿದೆ. … Continued

ಸ್ಥೂಲಕಾಯ, ವಯಸ್ಸು, ಕೊರೊನಾ ಸೋಂಕಿನ ಪ್ರಮಾಣ ವೈರಸ್‌ ಹರಡುವಿಕೆ ಮೇಲೆ ಪ್ರಭಾವ

ವ್ಯಕ್ತಿಯ ಸ್ಥೂಲಕಾಯ, ವಯಸ್ಸು ಹಾಗೂ ಕೊರೊನಾ ಸೋಂಕಿನ ಪ್ರಮಾಣ ಉಸಿರಾಡುವ ವೈರಸ್‌ ಕಣಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ೧೯೪ ವ್ಯಕ್ತಿಗಳ ಅಧ್ಯಯನ ನಡೆಸಿದ ಪಿಎನ್‌ಎಎಸ್‌ ಸಂಶೋಧನಾ ನಿಯತಕಾಲಿಕೆ ವರದಿ ಮಾಡಿದೆ. ಸಂಶೋಧನೆಯನ್ವಯ ಏರೋಸಾಲ್‌ ಕಣಗಳು ವ್ಯಕ್ತಿಯ ವಯಸ್ಸು, ವೈರಸ್‌ ಸ್ಥಿತಿ, ದೇಹದ ಸ್ಥೂಲತೆಯನ್ನು ಆಧರಿಸಿ ಬದಲಾವಣೆಯಾಗುತ್ತಿರುತ್ತದೆ. ಇತರ ಸಾಂಕ್ರಾಮಿಕ ರೋಗಗಳಲ್ಲಿ … Continued

ಕೊರೋನಾ: ೪೧೫ ಜನರಿಗೆ ಸೋಂಕು ದೃಢ, ಮೂವರ ಸಾವು

ಬೆಂಗಳೂರು,: ಕಳೆದ ೨೪ ತಾಸಿನಲ್ಲಿ ರಾಜ್ಯದಲ್ಲಿ 415 ಜನರಿಗೆ ಸೋಂಕು ದೃಡಪಟ್ಟಿದೆ. 322 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ , ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಮೂವರು, ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು ಉಳಿದ ಜಿಲ್ಲೆಗಳಲ್ಲಿ ಕೊರೋನಾ ಮರಣ ಸಂಭವಿಸಿಲ್ಲ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 943627ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟಾರೆ 5875ಸಕ್ರಿಯ ಪ್ರಕರಣಗಳಿವೆ ,141 … Continued