ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ಐಆರ್‌ ಸಿಟಿಸಿ ಹಗರಣ: ಲಾಲು, ತೇಜಸ್ವಿ ಯಾದವ್, ರಾಬ್ಡಿ ದೇವಿ ವಿರುದ್ಧ ನ್ಯಾಯಾಲಯ ಆರೋಪ ನಿಗದಿ

 ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧದ ಬಹುಚರ್ಚಿತ ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು, ಸೋಮವಾರ (ಸೋಮವಾರ) ವಿವಿಧ ಕ್ರಿಮಿನಲ್ ಆರೋಪಗಳನ್ನು ನಿಗದಿಪಡಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಭ್ರಷ್ಟಾಚಾರ ನಿಯಂತ್ರಣ … Continued

ಆರ್‌.ಜಿ. ಕರ್ ಭ್ರಷ್ಟಾಚಾರ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ನಾಯಕನ ಬಂಧನ

ಕೋಲ್ಕತ್ತಾ : ಇಲ್ಲಿನ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ನಂಟು ಹೊಂದಿರುವ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ. ಟಿಎಂಸಿ ಯುವ ಮುಖಂಡ ಆಶಿಶ್ ಪಾಂಡೆ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಸಂದೀಪ ಘೋಷ್ … Continued

ಆರ್‌ಜಿ ಕರ್ ಆಸ್ಪತ್ರೆ ಭ್ರಷ್ಟಾಚಾರ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮನೆ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ

ಕೋಲ್ಕತಾ: ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಭಾನುವಾರ ಬೆಳಿಗ್ಗೆ 15 ಸ್ಥಳಗಳಲ್ಲಿ ಶೋಧ ನಡೆಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ತಂಡವು ಘೋಷ್ ಅವರ ಮನೆಗೆ ಬೆಳಿಗ್ಗೆ 6:45 ಕ್ಕೆ ತಲುಪಿತು, ಆದರೆ ಅವರು … Continued

ಭ್ರಷ್ಟಾಚಾರ ಪ್ರಕರಣ : ತಮಿಳುನಾಡಿನ ಹಿರಿಯ ಸಚಿವರಿಗೆ 3 ವರ್ಷ ಜೈಲು

ಚೆನ್ನೈ:  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿದೆ ಸಚಿವರು ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದರು ಮತ್ತು ಪ್ರಕರಣವು ತುಂಬಾ ಹಳೆಯದಾಗಿದ್ದು, ಈಗ ಸಚಿವರಿಗೆ … Continued

ಭ್ರಷ್ಟಾಚಾರ ಪ್ರಕರಣ : ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ಚಂದ್ರಬಾಬು ನಾಯ್ಡು

ನವದೆಹಲಿ: ಕೌಶಲ್ಯಾಭಿವೃದ್ಧಿ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ನಾಯ್ಡು ಪರ ವಕೀಲರು ಶನಿವಾರ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಅರ್ಜಿಯ … Continued

ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ವಿಜಯವಾಡ : ತೆಲುಗು ದೇಶಂ(ಟಿಡಿಪಿ) ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಬಂಧಿಸಿದ್ದು, ವಿಜಯವಾಡದ ಭ್ರಷ್ಟಾಚಾರ ವಿರೋಧಿ ಬ್ಯೂರೋ ನ್ಯಾಯಾಲಯವು ಸೆಪ್ಟೆಂಬರ್‌ 23 ರ ವರೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಅಧಿಕಾರಿಗಳು ಸಿಆರ್‌ಪಿಸಿಯ ಸೆಕ್ಷನ್ 144 … Continued

ಭ್ರಷ್ಟಾಚಾರ ಪ್ರಕರಣ : ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧಿಸಿದ ಆಂಧ್ರ ಪೊಲೀಸರು

ಹೈದರಾಬಾದ್‌ : ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಟಿಡಿಪಿ ಶಾಸಕ ಮತ್ತು ಮಾಜಿ ಸಚಿವ ಗಂಟಾ ಶ್ರೀನಿವಾಸ ರಾವ್ ಮತ್ತು ಅವರ ಪುತ್ರ ಗಂಟಾ … Continued

ಸಿಬಿಐ ತನಿಖೆ : ಸುಪ್ರೀಂ ಕೋರ್ಟಿನಲ್ಲಿ ಡಿ.ಕೆ.ಶಿವಕುಮಾರಗೆ ರಿಲೀಫ್‌

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಸಿ.ಟಿ.ರವಿಕುಮಾರ ಮತ್ತು ನ್ಯಾಯಮೂರ್ತಿ ಸಂಜಯಕುಮಾರ ಅವರಿದ್ದ … Continued

ಭ್ರಷ್ಟಾಚಾರ ಪ್ರಕರಣದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಲೋಕಾಯುಕ್ತ ; ವಿಚಾರಣೆಗೆ ಸಮ್ಮತಿ

ನವದೆಹಲಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್‌ಡಿಎಲ್) ಗುತ್ತಿಗೆ ಹಗರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಅರ್ಜಿಯನ್ನು ಆರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ … Continued