ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued

ನಿವೃತ್ತ ಎಂಜಿನಿಯರ್‌ ನ ಐಷಾರಾಮಿ ಸಾಮ್ರಾಜ್ಯ : ಪತ್ತೆಯಾಯ್ತು ಕೇಜಿ ಗಟ್ಟಲೆ ಚಿನ್ನ-ಬೆಳ್ಳಿ, ಐಷಾರಾಮಿ ಕಾರುಗಳು, 17 ಟನ್ ಜೇನುತುಪ್ಪ…!

ಭೋಪಾಲ (ಮಧ್ಯಪ್ರದೇಶ): ಭೋಪಾಲ ನಗರದಲ್ಲಿ ಲೋಕೋಪಯೋಗಿ ಇಲಾಖೆಯ (PWD) ನಿವೃತ್ತ ಮುಖ್ಯ ಇಂಜಿನಿಯರ್ ಜಿ.ಪಿ. ಮೆಹ್ರಾ ಅವರ ನಿವಾಸ ಮತ್ತು ಆಸ್ತಿಗಳ ಮೇಲೆ ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಾಯುಕ್ತ ನಡೆಸಿದ ದಾಳಿಯ ನಂತರ ಅಲ್ಲಿ ಪತ್ತೆಯಾದ ಸಂಪತ್ತು ನೋಡಿ ಲೋಕಾಯುಕ್ತವೇ ಬೆಚ್ಚಿಬಿದ್ದಿದೆ…! ಹೆಚ್ಚಿನ ಆಸ್ತಿಗಳ ತನಿಖೆಯು, ಮಧ್ಯಪ್ರದೇಶದ ರಾಜ್ಯದಲ್ಲಿ ಇತ್ತೀಚಿನ ವರ್ಷಗಳ ಅತ್ಯಂತ ಸಂಚಲನ ಮೂಡಿಸಿದ  … Continued

ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ ; ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?

ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (Corruption Perceptions Index) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಶ್ರೇಯಾಂಕದಲ್ಲಿದೆ. , ಅದರ 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳಷ್ಟು … Continued

ವೀಡಿಯೊ…| ತನ್ನ ದೂರಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನೂರಾರು ಪುಟಗಳ ದಾಖಲೆಗಳ ಹಾರದೊಂದಿಗೆ ಉರುಳುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ..!

ಒಂದು ವಿಶಿಷ್ಟ ಪ್ರತಿಭಟನೆಯಲ್ಲಿ, ಭ್ರಷ್ಟಾಚಾರದ ಆರೋಪದ ಮೇಲೆ ಗ್ರಾಮದ ಸರಪಂಚ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 3 ರಂದು ವ್ಯಕ್ತಿಯೊಬ್ಬರು ತಮ್ಮ ಕುತ್ತಿಗೆಗೆ ಸುಮಾರು ನೂರಾರು ಪುಟಗಳ ದಾಖಲೆಗಳ ಹಾರವನ್ನು ಹಾಕಿಕೊಂಡು ರಸ್ತೆಯಲ್ಲಿ ಉರುಳುತ್ತ ಮಧ್ಯಪ್ರದೇಶದ ನೀಮುಚ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದಾರೆ. “ಉರುಳುವ” ಪ್ರತಿಭಟನೆಯ ನಂತರ ನೀಮಚ್ ಜಿಲ್ಲಾಧಿಕಾರಿ ಹಿಮಾಂಶು ಚಂದ್ರ ಅವರು ಈ ವ್ಯಕ್ತಿಯ … Continued

‘ಸಾಕಷ್ಟು ಇದೆ…’: ಸಂದೀಪ ಘೋಷ್‌ ಭ್ರಷ್ಟಾಚಾರ ಪ್ರಕರಣದ ಸಾಕ್ಷ್ಯಾಧಾರಗಳ ಬಗ್ಗೆ ಸಿಬಿಐ ಅಧಿಕಾರಿ

ಕೋಲ್ಕತ್ತಾ : 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ತನಿಖೆ ವೇಳೆ ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ. “ಸಾಕಷ್ಟು ಇದೆ” ಎಂದು ಸಿಬಿಐ ಅಧಿಕಾರಿಯೊಬ್ಬರು … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸಲು ʼಲೋಕಪಾಲʼ ಆದೇಶ

ನವದೆಹಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ (ಪಿಸಿಎ) ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಪಾಲವು ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು ಬಲವಾದ ಪುರಾವೆಗಳಿವೆ ಎಂದು ನ್ಯಾಯಾಂಗ ಸದಸ್ಯೆ ನ್ಯಾ. ಅಭಿಲಾಷಾ ಕುಮಾರಿ, ಸದಸ್ಯರಾದ ಅರ್ಚನಾ ರಾಮಸುಂದರಂ ಹಾಗೂ ಮಹೇಂದರ್ ಸಿಂಗ್ ಅವರನ್ನೊಳಗೊಂಡ … Continued

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು … Continued

ಭ್ರಷ್ಟಾಚಾರ ಆರೋಪ : ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕ್ರಿಕೆಟರ್‌ ಮೊಹಮ್ಮದ್ ಅಜರುದ್ದೀನ್ ವಿರುದ್ಧ 4 ಪ್ರಕರಣಗಳು ದಾಖಲು

ಹೈದರಾಬಾದ್‌ : ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸಿರುವ ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್‌ಸಿಎ) ಅಧ್ಯಕ್ಷರಾಗಿದ್ದಾಗ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮುಂದಾಗಿರುವ ಅಜರುದ್ದೀನ್ ಸೇರಿದಂತೆ ಹೈದರಾಬಾದ್ … Continued

25 ವರ್ಷಗಳೊಳಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು : 2047ರ ಗುರಿ ನಿಗದಿಪಡಿಸಿದ ಪ್ರಧಾನಿ ಮೋದಿ

ನವದೆಹಲಿ: 2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಐದು ಪ್ರತಿಜ್ಞೆಗಳೊಂದಿಗೆ ಮುನ್ನಡೆಯಲು ಪ್ರಧಾನಿ ಮೋದಿ ಜನರಿಗೆ ಕರೆ ನೀಡಿದರು.2047 ರ ಐದು ಪ್ರತಿಜ್ಞೆಗಳೆಂದರೆ — ಭಾರತವನ್ನು ಅಭಿವೃದ್ಧಿಗೊಳಿಸಿರುವುದು, ಯಾವುದೇ ದಾಸ್ಯದ ಚಿಹ್ನೆಯನ್ನು ತೆಗೆದುಹಾಕುವುದು, ಪರಂಪರೆಯಲ್ಲಿ ಹೆಮ್ಮೆ, ಏಕತೆ ಮತ್ತು ನಮ್ಮ ಕರ್ತವ್ಯಗಳನ್ನು ಪೂರೈಸುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತಕ್ಕೆ ಇಂದು 75ನೇ ಸ್ವಾತಂತ್ರ್ಯೋತ್ಸವ … Continued