ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಇ.ಡಿ.ಸಮನ್ಸ್‌ಗೆ ಡೋಂಟ್‌ ಕೇರ್‌ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued

‘ಹಿಂದೂ’ ಪದದ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು : ಹಿಂದು ಪದದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ‘ಹಿಂದೂ’ ಎಂಬ ಪದವು ಪರ್ಷಿಯನ್ ಪದವಾಗಿದ್ದು, ಅದಕ್ಕೆ ‘ಅಶ್ಲೀಲ’ ಎಂಬ ಅರ್ಥವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸತೀಶ … Continued

ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ : ಕೋರ್ಟ್‌ ಆದೇಶ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಪಕ್ಷದ ಚಿಹ್ನೆ ಬಳಸದಂತೆ ಸಿ.ಎಂ. ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. … Continued

ಭರವಸೆ ಕಳೆದುಕೊಂಡಿದ್ದೇನೆ, ಜೈಲಿನಲ್ಲಿ ಸಾಯುವುದೇ ಉತ್ತಮ: ಕೈಮುಗಿದು ಕೋರ್ಟ್‌ಗೆ ಹೇಳಿದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್

ಮುಂಬೈ : ಮುಂಬೈ : ಬದುಕಿನ ಆಸೆ ಆಕಾಂಕ್ಷೆ ಹಾಗೂ ಭರವಸೆಯನ್ನು ನಾನು ಕಳೆದುಕೊಂಡಿದ್ದೇನೆ. ನಾನು ಈ ಸ್ಥಿತಿಯಲ್ಲಿ ಜೀವನ ಸಾಗಿಸುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ’ ಎಂದು ಜೆಟ್‌ ಏರ್‌ ವೇಸ್‌ ಸಂಸ್ಥಾಪಕ ನರೇಶ ಗೋಯಲ್‌ ವಿಶೇಷ ನ್ಯಾಯಾಲಯದ ಮುಂದೆ ಕೈಮುಗಿದು ಅಳಲು ತೋಡಿಕೊಂಡರು. .ಜೆಟ್‌ ಏರ್‌ ವೇಸ್‌ ಸಂಸ್ಥಾಪಕ ನರೇಶ ಗೋಯಲ್‌ ಅವರನ್ನು ಕೆನರಾ … Continued

ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ 6.96 ಕೋಟಿ ರೂ. ದಂಡ; ತಪ್ಪಿದರೆ 6 ತಿಂಗಳು ಜೈಲು ಶಿಕ್ಷೆ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶುಕ್ರವಾರ 6.96 ಕೋಟಿ ರೂ. ಮೊತ್ತದ ಭಾರಿ ದಂಡ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಂಡ ಕೊಡದೆ ಹೋದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ. ಮಧು ಬಂಗಾರಪ್ಪ ನಿರ್ದೇಶಕರಾಗಿರುವ ಆಕಾಶ್‌ ಆಡಿಯೋ ಸಂಸ್ಥೆ ಹಾಗೂ ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ನ … Continued

ಕೋರ್ಟ್‌ಗೆ ಪೊಲೀಸರು ಕರೆತಂದಿದ್ದ ಕೊಲೆ ಪ್ರಕರಣದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ…!

ಧಾರವಾಡ : ಕೊಲೆ ಪ್ರಕರಣದ ವಿಚಾರಣೆಗಾಗಿ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯೊಬ್ಬರು ಸಮೀಪದ ಸತ್ತೂರಿನ ಲಾಡ್ಜ್‌ ಒಂದರಲ್ಲಿ ಯುವತಿ ಜೊತೆಗಿದ್ದ ಘಟನೆ ನಡೆದಿದೆ. ನಂತರ ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ ಎಂಬಾತನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. … Continued

ಬೇಲೆಕೇರಿ ಅದಿರು ಪ್ರಕರಣ: ಸಚಿವ ಆನಂದ ಸಿಂಗ್‌, ಜನಾರ್ದನ ರೆಡ್ಡಿ, ನಾಗೇಂದ್ರಗೆ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ ಅವರಿಗೆ ಸೋಮವಾರ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ. ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ … Continued

ಸಚಿವಾಕಾಂಕ್ಷಿ ರೇಣುಕಾಚಾರ್ಯಗೆ ಮತ್ತೆ ಸಿಡಿ ಭೀತಿ..?; ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಪ್ರಯತ್ನ ಮಾಡುತ್ತಿರುವ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರಿಗೆ ಈಗ ಸಿಡಿ ಭಯ ಶುರುವಾಗಿದೆ. ಹೀಗಾಗಿ ಅವರು ಈಗ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಯಾವುದೇ ಸಿಡಿಯನ್ನು ಪ್ರಸಾರ ಮಾಡದಂತೆ … Continued