ಟೆಕ್ಕಿ ಅತುಲ್‌ ಸುಭಾಷ ಆತ್ಮಹತ್ಯೆ ಪ್ರಕರಣ : ಪತ್ನಿ ನಿಖಿತಾ ಸೇರಿ ಮೂವರಿಗೆ ಜಾಮೀನು

ಬೆಂಗಳೂರು : ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಅತುಲ್‌ ಸುಭಾಷ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಅವರ ಪರಿತ್ಯಕ್ತ ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ತಾಯಿ ಮತ್ತು ಸಹೋದರಿಗೆ ಬೆಂಗಳೂರಿನ ಮೆಯೋ ಹಾಲ್‌ನ ಸತ್ರ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ. ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ನಿಖಿತಾ ಸಹೋದರ … Continued

ಮಾಜಿ ಶಾಸಕ ಉಮಾಪತಿಗೆ 3 ತಿಂಗಳ ಜೈಲು ಶಿಕ್ಷೆ

ಬೆಂಗಳೂರು : ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಲಾದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪಿತ ಪ್ರಕರಣದಲ್ಲಿ ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ ಎ.ವಿ. ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ ದಂಡ ವಿಧಿಸಿದೆ. ಕರ್ನಾಟಕ ಲೋಕಾಯಕ್ತ ರಿಜಿಸ್ಟ್ರಾರ್‌ ದಾಖಲಿಸಿದ್ದ ಕ್ರಿಮಿನಲ್‌ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ … Continued

ಇಸ್ಕಾನ್ ಮೂಲಭೂತವಾದಿ ಸಂಘಟನೆ : ನ್ಯಾಯಾಲಯಕ್ಕೆ ತಿಳಿಸಿದ ಬಾಂಗ್ಲಾದೇಶ ಸರ್ಕಾರ…!

ನವದೆಹಲಿ: ಬಾಂಗ್ಲಾದೇಶವು ಆ ದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಇಸ್ಕಾನ್ ಅನ್ನು “ಧಾರ್ಮಿಕ ಮೂಲಭೂತವಾದಿ” ಸಂಘಟನೆ ಎಂದು ಕರೆದಿದೆ. ಆಗಸ್ಟ್‌ನ ವಿದ್ಯಾರ್ಥಿಗಳ ನೇತೃತ್ವದ ದಂಗೆ ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಅಧಿಕಾರದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ “ಇಸ್ಕಾನ್ ಬಗ್ಗೆ ಪರಿಶೀಲನೆ ನಡೆಸುತ್ತಿದೆ ” ಎಂದು ಹೇಳಿದರು. ಇದು ಸೋಮವಾರದಂದು ಹಿಂದೂ ಸ್ವಾಮೀಜಿ … Continued

ವೀಡಿಯೊ…| ಬಾಂಗ್ಲಾದೇಶದ ಬಂಧಿತ ಹಿಂದೂ ಧಾರ್ಮಿಕ ಸಂತನ ಬೆಂಬಲಿಗರನ್ನು ನ್ಯಾಯಾಲಯದ ಹೊರಗೆ ಥಳಿಸಿದ ಪೊಲೀಸರು…

ಚಟ್ಟೋಗ್ರಾಮ (ಬಾಂಗ್ಲಾದೇಶ) : ಮಂಗಳವಾರ ಬಾಂಗ್ಲಾದೇಶದ ಚಟ್ಟೋಗ್ರಾಮದ ನ್ಯಾಯಾಲಯದ ಹೊರಗೆ ಬಂಧಿತ ಹಿಂದೂ ಸಂತ ಚಿನ್ಮಯ ಕೃಷ್ಣ ದಾಸ ಅವರ ಬೆಂಬಲಿಗರು ಮತ್ತು ಪೊಲೀಸರು ನಡುವೆ ಘರ್ಷಣೆಗಳು ನಡೆದವು. ಅಲ್ಪಸಂಖ್ಯಾತ ಹಿಂದೂ ಸಮುದಾಯದವರು ಎಂದು ನಂಬಲಾದ ನೂರಾರು ಜನರು, ಇಸ್ಕಾನ್ ಸ್ವಾಮೀಜಿ ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿರುವುದನ್ನು ವಿರೋಧಿಸಿ ನ್ಯಾಯಾಲಯದ ಆವರಣದ ಹೊರಗೆ ಜಮಾಯಿಸಿದ್ದರು. ಬಾಂಗ್ಲಾದೇಶ … Continued

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಜಿ ಸಚಿವ ಬಿ ನಾಗೇಂದ್ರಗೆ ಷರತ್ತುಬದ್ಧ ಜಾಮೀನು

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ಹಣ ವರ್ಗಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿರುವ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ … Continued

ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಮಗುವಾಗಿದ್ದಾಗ ತನ್ನ ಅಪಹರಣ ಮಾಡಿದ್ದ ಆರೋಪಿಗಳಿಗೆ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಕೀಲ…!

ಆಗ್ರಾ: ಅದೃಷ್ಟದ ಕುತೂಹಲಕಾರಿ ತಿರುವಿನಲ್ಲಿ, ತಾನು ಏಳು ವರ್ಷದವನಿದ್ದಾಗ ತನ್ನನ್ನು ಅಪಹರಿಸಿದ್ದ ದರೋಡೆಕೋರರಿಗೆ ಈಗ ವಕೀಲನಾದ ಅದೇ ಹುಡುಗ 17 ವರ್ಷಗಳ ನಂತರ ಶಿಕ್ಷೆ ಕೊಡಿಸಿದ ವಿದ್ಯಮಾನ ಉತ್ತರ ಪ್ರದೇಶದಲ್ಲಿ ನಡೆದಿದೆ..! ಉತ್ತರ ಪ್ರದೇಶದ ಆಗ್ರಾದ ಖೀರಗಢ ಪಟ್ಟಣದಲ್ಲಿ ಏಳು ವರ್ಷದ ಬಾಲಕನನ್ನು ಆತನ ತಂದೆ ಮತ್ತು ಚಿಕ್ಕಪ್ಪ ಪಟ್ಟದ ಔಷಧದ ಅಂಗಡಿಯಿಂದ ದರೋಡೆಕೋರರು ಅಪಹರಿಸಿದ್ದರು. … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್‌ ಕೆರೆಹಳ್ಳಿ ಅವರನ್ನು … Continued

ನೇಹಾ ಹಿರೇಮಠ ಹತ್ಯೆ ಪ್ರಕರಣ : 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

ಹುಬ್ಬಳ್ಳಿ :   ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಸೋಮವಾರ ಸುಮಾರು 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ … Continued