ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಟಿ20ಐ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ನವದೆಹಲಿ: ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್‌ನಲ್ಲಿ ಭಾರತದ T20 ವಿಶ್ವಕಪ್ ವಿಜಯದ ನಂತರ ಸ್ಟಾರ್ ಬ್ಯಾಟರಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಸ್ವರೂಪದಿಂದ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ಜಡೇಜಾ ಸಹ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂ(Instagram)ನಲ್ಲಿ ಅವರು ತಮ್ಮ … Continued

T20 ವಿಶ್ವಕಪ್ 2024 : ಪ್ರಶಸ್ತಿ ಗೆದ್ದ ಭಾರತಕ್ಕೆ ಸಿಕ್ಕ ಟಿ20 ವಿಶ್ವಕಪ್ ಬಹುಮಾನದ ಮೊತ್ತ..ವಿವಿಧ ವಿಭಾಗದಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಭಾರತೀಯ ಕ್ರಿಕೆಟ್ ತಂಡ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತದ 11 ವರ್ಷಗಳ ಕಾಯುವಿಕೆಯ ನಂತರ ರೋಹಿತ್ ಶರ್ಮಾ ನಾಯಕತ್ವದಡಿ ಭಾರತದ ತಂಡವು ತನ್ನ ಎರಡನೇ ಟಿ 20 ವಿಶ್ವಕಪ್‌ ಪ್ರಶಸ್ತಿ ಗೆದ್ದುಕೊಂಡಿತು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಟಾಸ್ ಗೆದ್ದು … Continued

ವೀಡಿಯೊ..| ಭಾರತದ T20 ವಿಶ್ವಕಪ್ ವಿಜಯದ ನಂತರ ಬಾರ್ಬಡೋಸ್ ಪಿಚ್‌ ನ ಮಣ್ಣು ತಿಂದ ನಾಯಕ ರೋಹಿತ್ ಶರ್ಮಾ

ಭಾರತದ ನಾಯಕ ರೋಹಿತ್ ಶರ್ಮಾ ಶನಿವಾರ ವಿಶಿಷ್ಟ ರೀತಿಯಲ್ಲಿ ತಂಡದ T20 ವಿಶ್ವಕಪ್ 2024 ಗೆಲುವನ್ನು ಆಚರಿಸಿಕೊಂಡಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಜಯಸಾಧಿಸಿ T20 ವಿಶ್ವಕಪ್ 2024 ರೋಹಿತ್ ನೇತೃತ್ವದ ಟೀಮ್‌ ಏಳು ರನ್‌ಗಳಿಂದ ಜಯಸಾಧಿಸಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಬರವನ್ನು ಇದು ಕೊನೆಗೊಳಿಸಿತು. ಭಾರತೀಯ ತಂಡದಲ್ಲಿ … Continued

T20 ವಿಶ್ವಕಪ್ ಪ್ರಶಸ್ತಿ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದ ಎರಡನೇ T20 ವಿಶ್ವಕಪ್ ವಿಜಯದ ನಂತರ ಶನಿವಾರ ತಮ್ಮ T20  ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಭಾರತದ ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ … Continued

ಭಾರತ-ದಕ್ಷಿಣ ಆಫ್ರಿಕ ನಡುವೆ T20 ವಿಶ್ವಕಪ್ ಫೈನಲ್: ಮಳೆ ಬಂದ್ರೆ ಮುಂದೇನು..? ʼರಿಸರ್ವ್ ದಿನʼ ನಿಯಮ, ಕನಿಷ್ಠ ಓವರ್‌ಗಳು, ಹೆಚ್ಚುವರಿ ಸಮಯ…

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ ನಡೆಯಲಿರುವ T20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟ್ರೋಫಿಗಾಗಿ ತಮ್ಮ ಸುದೀರ್ಘ 11 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ಗುರಿಯನ್ನು ಹೊಂದಿದೆ, ಆದಾಗ್ಯೂ, ಪಂದ್ಯವು ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯು ಶೇ 51 … Continued