ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು. ಹಲವು ವರ್ಷಗಳಿಂದ … Continued

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ವಂಚನೆಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತದ ತಂಡದ (Team India)ದ ಮಾಜಿ ಕ್ರಿಕೆಟ್‌ ಆಟಗಾರ, ಕನ್ನಡಿಗ ರಾಬಿನ್ ಉತ್ತಪ್ಪ (Robin Uthappa) ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ. ಅರೆಸ್ಟ್‌ ವಾರೆಂಟ್‌ ಜಾರಿ ಮಾಡುವಂತೆ ಪಿಎಫ್‌ಒ ಪ್ರಾದೇಶಿಕ ಆಯುಕ್ತ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪುಲಿಕೇಶಿ ನಗರ ಪೊಲೀಸರಿಗೆ ಪತ್ರ ಬರೆದ … Continued

ಮ್ಯಾಚ್ ಫಿಕ್ಸಿಂಗ್ ಪ್ರಕರಣ ; ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರ ಬಂಧನ

2015-16 ರ ರಾಮ್ ಸ್ಲಾಮ್ T20 ಚಾಲೆಂಜ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟ್‌ ಆಟಗಾರರನ್ನು ಬಂಧಿಸಲಾಗಿದೆ. ಮಾಜಿ ಅನುಭವಿ ಆಟಗಾರರಾದ ಲೊನ್ವಾಬೊ ತ್ಸೊಟ್ಸೊಬೆ, ಥಾಮಿ ತ್ಸೊಲೆಕಿಲೆ ಮತ್ತು ಎಥಿ ಎಂಬಾಲಾಟಿ ಅವರನ್ನು ಬಂಧಿಸಲಾಗಿದೆ ಮತ್ತು ಅವರ ಅನೇಕ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇವರು ದಕ್ಷಿಣ … Continued

ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued

ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ದೆಹಲಿ ತಂಡದ ಕ್ರಿಕೆಟ್‌ ಆಟಗಾರ ಪೃಥ್ವಿ ಶಾ ವಿರುದ್ಧದ ಹಳೆಯ ಕಿರುಕುಳದ ಆರೋಪಗಳ ತನಿಖೆಗೆ ಮುಂಬೈ ಕೋರ್ಟ್ ಸೂಚನೆ

ಮುಂಬೈ: 2023ರಲ್ಲಿ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಸಾಮಾಜಿಕ ಜಾಲತಾಣಗಳ ಪ್ರಭಾವಿ ಸಪ್ನಾ ಗಿಲ್ ನೀಡಿದ ಕಿರುಕುಳದ ದೂರಿನ ವಿಚಾರಣೆ ನಡೆಸುವಂತೆ ಇಲ್ಲಿನ ನ್ಯಾಯಾಲಯ ಬುಧವಾರ ಪೊಲೀಸರಿಗೆ ಸೂಚಿಸಿದೆ. ಜೂನ್ 19 ರೊಳಗೆ ವಿಚಾರಣೆಯ ವರದಿಯನ್ನು ಸಲ್ಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಸೂಚಿಸಿದರು. ಆದರೆ ಆಕೆಯ ದೂರಿನ ಮೇಲೆ ಶಾ ಮತ್ತು ಇತರರ ವಿರುದ್ಧ ಪ್ರಥಮ … Continued

ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ ಬಿಜೆಪಿ ಸಂಸದ-ಕ್ರಿಕೆಟಿಗ ಗೌತಮ ಗಂಭೀರ

ನವದೆಹಲಿ: ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ ಗಂಭೀರ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗೌತಮ ಗಂಭೀರ ಅವರು, ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರಿಗೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಾವು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಾವು ಆಡಿದ ಕ್ರೀಡೆಯಾದ ಕ್ರಿಕೆಟ್‌ನತ್ತ … Continued

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಿಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತೀಯರ ಮನಗೆದ್ದಿದ್ದ ವೇಗಿ ಮೊಹಮ್ಮದ್ ಶಮಿ ನೈನಿತಾಲ್‌ನಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಮಿ ಶನಿವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವೀಡಿಯೊ ಹಂಚಿಕೊಂಡಿದ್ದಾರೆ. ತಾನು ಮತ್ತು ತನ್ನ ಜೊತೆಗಿದ್ದ ಕೆಲವರು ಜೊತೆಗೂಡಿ ಬೆಟ್ಟದಲ್ಲಿ ಕೆಳಗಿಳಿದು ಅಪಘಾತದಲ್ಲಿ ಬೆಟ್ಟದಿಂದ ಕೆಳಗೆ ಬಿದ್ದಿದ್ದ ಕಾರಿನ … Continued