ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಅಶ್ಲೀಲ ಪದ … Continued

ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued

ಸಚಿವೆಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ಅಶ್ಲೀಲ ಪದಬಳಕೆ ಆರೋಪಿತ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರರಣೆ ನಡೆಸಿದ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶರು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ಅವರು … Continued

ರಾಷ್ಟ್ರಪತಿಗೆ ಏಕವಚನದಲ್ಲಿ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ : ಸಿಎಂ ಸ್ಥಾನದಿಂದ ವಜಾಗೊಳಿಸಲು ಕುಮಾರಸ್ವಾಮಿ ಆಗ್ರಹ

 ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಶೋಷಿತ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವಳನ್ನು ನೂತನ … Continued

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ : ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಪತ್ರ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿ.ಟಿ. ರವಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಚಾಮರಾಜಪೇಟೆಯ … Continued