ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ … Continued

ದೇಶದಲ್ಲೇ ಅತಿದೊಡ್ಡ ಸೈಬರ್‌ ವಂಚನೆ ; ₹58 ಕೋಟಿ ಮೊತ್ತದ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಭೇದಿಸಿದ ಪೊಲೀಸರು…!

ಮುಂಬೈ : ಮುಂಬೈನಲ್ಲಿ ನಡೆದ ಬರೋಬ್ಬರಿ 58.13 ಕೋಟಿ ರೂಪಾಯಿ ಮೌಲ್ಯದ ‘ವರ್ಚುವಲ್ ಅರೆಸ್ಟ್’ (ಕಲ್ಪಿತ ಬಂಧನ) ಹಗರಣವನ್ನು ಮಹಾರಾಷ್ಟ್ರ ಸೈಬರ್ ಪೊಲೀಸರು ಭೇದಿಸಿದ್ದು, ಈ ಸಂಬಂಧ ಏಳು ಜನರನ್ನು ಬಂಧಿಸಿದ್ದಾರೆ. ಇದು ದೇಶದಲ್ಲಿ ಇತ್ತೀಚೆಗೆ ವರದಿಯಾದ ಇಂತಹ ಅತಿ ದೊಡ್ಡ ಸೈಬರ್‌ ವಂಚನೆ ಪ್ರಕರಣ ಎಂದು ಹೇಳಲಾಗಿದೆ. ಮುಂಬೈನ 72 ವರ್ಷದ ಹಿರಿಯ ನಾಗರಿಕರೊಬ್ಬರಿಗೆ … Continued

ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ 9 ಕೋಟಿ ರೂ. ಕಳೆದುಕೊಂಡ 80ರ ವೃದ್ಧ…2 ವರ್ಷದಲ್ಲಿ 734 ಬಾರಿ ಹಣ ವರ್ಗಾವಣೆ…!! ವಂಚನೆ ಮಾಡಿದ್ದು ಹೇಗೆ ಗೊತ್ತಾ ?

ಮುಂಬೈ: ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ನಂತರ 80 ವೃದ್ಧರೊಬ್ಬರು ಬರೋಬ್ಬರಿ 9 ಕೋಟಿ ರೂ. ಹಣ ಕಳೆದುಕೊಂಡ ಘಟನೆ ಮುಂಬೈನಲ್ಲಿ (Mumbai) ನಡೆದಿದೆ. ಸುಮಾರು ಎರಡು ವರ್ಷಗಳ ಕಾಲ ನಡೆದ ಈ ವಂಚನೆಯ ಹಗರಣದಲ್ಲಿ, ವೃದ್ಧರು ಫೇಸ್‌ಬುಕ್‌ನಲ್ಲಿ ಮಹಿಳೆಯೊಬ್ಬಳ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ನಂತರ 734 ಬಾರಿ ಹಣ ವರ್ಗಾವಣೆ ಮಾಡಿ, 9 ಕೋಟಿ … Continued

ಬೆಂಗಳೂರಿನ ಕಂಪನಿಯ ಸರ್ವರ್‌ ಹ್ಯಾಕ್‌ ಮಾಡಿ 378 ಕೋಟಿ ಕಳ್ಳತನ ; ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು : ಬೆಂಗಳೂರು ಮೂಲದ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವಾದ ನೆಬ್ಲಿಯೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಿಂದ 378 ಕೋಟಿ ರೂ.ಗಳಿಗೂ ಹೆಚ್ಚು ಹಣ ಕಳ್ಳತನವಾಗಿರುವ ಬೃಹತ್ ಸೈಬರ್ ಅಪರಾಧವನ್ನು ಬೆಂಗಳೂರು ಪೊಲೀಸರು ಬಯಲು ಮಾಡಿದ್ದಾರೆ. ಒಂದೇ ಪ್ರಕರಣದಲ್ಲಿ 378 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋ ಕರೆನ್ಸಿ ಕಳ್ಳತನ ಮಾಡಿರುವ ಘಟನೆ, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ … Continued

ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಡಿಜಿಟಲ್​ ಅರೆಸ್ಟ್​: ಬೆಂಗಳೂರಿನ ಟೆಕ್ಕಿಗೆ ಬರೋಬ್ಬರಿ 11.8 ಕೋಟಿ ರೂ. ವಂಚನೆ ಮಾಡಿದ ಖದೀಮರು…!

ಬೆಂಗಳೂರು : ಡಿಜಿಟಲ್ ಅರೆಸ್ಟ್ ಮೂಲಕ ನಗರದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರಿಗೆ 11.83 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ. ಈಶಾನ್ಯ ವಿಭಾಗದ ಸೆನ್ ಠಾಣೆಯ ಪೊಲೀಸರು ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಿದ್ದಾರೆ. ಒಂದು ತಂಡ ಗುಜರಾತಿಗೆ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿದ್ದು, ಸೈಬರ್ ವಂಚಕರಿಗಾಗಿ ಪತ್ತೆ ಕಾರ್ಯದಲ್ಲಿ ತೊಡಗಿವೆ. ಷೇರು … Continued

5,000 ‘ಸೈಬರ್ ಕಮಾಂಡೋಸ್’, ಆನ್‌ಲೈನ್ ನೋಂದಣಿ : ಸೈಬರ್ ಅಪರಾಧ ತಡೆಗೆ ಕೇಂದ್ರದಿಂದ ನೂತನ ಕ್ರಮಗಳು

ನವದೆಹಲಿ: ಸೈಬರ್ ಭದ್ರತೆ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ 5,000 ‘ಸೈಬರ್ ಕಮಾಂಡೋ’ಗಳಿಗೆ ತರಬೇತಿ, ವೆಬ್ ಆಧಾರಿತ ಡೇಟಾ ರಿಜಿಸ್ಟ್ರಿ ಮತ್ತು ಸೈಬರ್ ಅಪರಾಧ ಮಾಹಿತಿ ಹಂಚಿಕೊಳ್ಳಲು ಪೋರ್ಟಲ್ ಮತ್ತು ರಾಷ್ಟ್ರೀಯ ನೋಂದಣಿ ಸೇರಿದಂತೆ ಹಲವಾರು ನೂತನ ಉಪಕ್ರಮಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ … Continued

ಅತಿದೊಡ್ಡ ಸೈಬರ್ ವಂಚನೆಯಲ್ಲಿ ₹ 13 ಕೋಟಿ ಕಳೆದುಕೊಂಡ 75 ವರ್ಷದ ವೃದ್ಧ…!

ಹೈದರಾಬಾದ್: ತೆಲಂಗಾಣದ ಸೈಬರ್ ಸೆಕ್ಯುರಿಟಿ ಬ್ಯೂರೋಗೆ ವ್ಯಕ್ತಿಯೊಬ್ಬರಿಂದ ಅತಿದೊಡ್ಡ ಸೈಬರ್ ಹಣಕಾಸು ವಂಚನೆ ದೂರು ಬಂದಿದ್ದು, 75 ವರ್ಷದ ವ್ಯಕ್ತಿಯೊಬ್ಬರು ₹ 13 ಕೋಟಿ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ವ್ಯಕ್ತಿ ಸಾರ್ವಜನಿಕ ವಲಯದ ಘಟಕದ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಈ ವ್ಯಕ್ತಿ ಜುಲೈ 1 ರಂದು ವಾಟ್ಸ್‌ಆ್ಯಪ್ ಮೂಲಕ ಹೂಡಿಕೆಯ ಪ್ರಸ್ತಾಪವನ್ನು … Continued