ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

₹2,500 ಕೋಟಿ ಸೈಬರ್‌ ವಂಚನೆ ಜಾಲ ಪತ್ತೆ ; ಖಾಸಗಿ ಬ್ಯಾಂಕ್ ಅಧಿಕಾರಿಗಳು ಶಾಮೀಲು, 20 ಆರೋಪಿಗಳ ಬಂಧನ

ರಾಜಕೋಟ್: ಸೈಬರ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ವಿರುದ್ಧ ಸಮರ ಸಾರಿರುವ ಗುಜರಾತ್‌ನ ರಾಜ್‌ಕೋಟ್ ಗ್ರಾಮಾಂತರ ಪೊಲೀಸರು, ಇತಿಹಾಸದಲ್ಲೇ ಅತಿದೊಡ್ಡ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಜಾಲವು ಆನ್‌ಲೈನ್ ಗೇಮಿಂಗ್ ಮತ್ತು ಜಿಎಸ್‌ಟಿ ಕಳ್ಳತನದ ಮೂಲಕ ಸಂಗ್ರಹವಾದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸುತ್ತಿತ್ತು. ಇದುವರೆಗೆ 20 ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಯೆಸ್ ಬ್ಯಾಂಕ್ (Yes … Continued

ಬೆಳಗಾವಿ : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹15.45 ಕೋಟಿ ವಂಚನೆ ; ಹೈದರಾಬಾದಿನಲ್ಲಿ ಇಬ್ಬರ ಬಂಧನ

ಬೆಳಗಾವಿ : ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡು 81 ವರ್ಷದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನೀವು ಹಣಕಾಸು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಉದ್ಯಮಿಗೆ ಬೆದರಿಸಿ ಈ ವಂಚನೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಹೈದರಾಬಾದ್ ನಿವಾಸಿಗಳಾದ ವೆಂಕಟೇಶ ಶರತ ನಾಯ್ಕ ಮತ್ತು ದೇಗಾವತ್ ಶ್ರೀಪಾದ … Continued

11 ದಿನದಲ್ಲಿ ಹಣ ದುಪ್ಪಟ್ಟು ಮಾಡುವ ಆಸೆಗೆ ಬಿದ್ದು ₹12.31 ಕೋಟಿ ಕಳೆದುಕೊಂಡ ವೈದ್ಯ…!

ಪುಣೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಕೇವಲ 11 ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ, 75 ವರ್ಷದ ಹಿರಿಯ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 12.31 ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಈ ವರ್ಷದ ಜನವರಿಯಲ್ಲಿ ಈ ವೈದ್ಯರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ಷೇರು … Continued

ಬೆಂಗಳೂರು : ಸ್ನೇಹಿತನಿಗೆ ಬ್ಯಾಂಕ್‌ ವಿವರ ನೀಡಿ 7 ಕೋಟಿ ರೂ. ವಂಚನೆ ಜಾಲದಲ್ಲಿ ಸಿಲುಕಿದ ವಿದ್ಯಾರ್ಥಿ…!

ಬೆಂಗಳೂರು: ತನ್ನ ಸ್ನೇಹಿತನನ್ನು ಅತಿಯಾಗಿ ನಂಬಿದ್ದು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಪಾಲಿಗೆ ಅದೇ ದುಸ್ವಪ್ನವಾಗಿ ಪರಿಣಮಿಸಿದೆ. ಸ್ನೇಹಿತನಿಗೆ ಸಹಾಯ ಮಾಡಲು ಹೋದ ಈತ ಈಗ ಕೋಟ್ಯಂತರ ರೂಪಾಯಿಗಳ ಸೈಬರ್ ಹಗರಣದಲ್ಲಿ ಸಿಲುಕಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರು ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆಗೆ ಬಳಸಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರು … Continued

ಸೈಬರ್ ವಂಚಕರ ಜಾಲಕ್ಕೆ ಬಿದ್ದ ಎನ್‌ಆರ್‌ಐ ದಂಪತಿ; ಬರೋಬ್ಬರಿ 14.85 ಕೋಟಿ ರೂ. ಲೂಟಿ…!

ನವದೆಹಲಿ: ದೆಹಲಿಯಲ್ಲಿ ವಾಸವಾಗಿರುವ ವೃದ್ಧ ಎನ್‌ಆರ್‌ಐ ವೈದ್ಯ ದಂಪತಿಯನ್ನು ಸರಿಸುಮಾರು ಎರಡು ವಾರಗಳ ಕಾಲ ‘ಡಿಜಿಟಲ್ ಅರೆಸ್ಟ್’ (Digital Arrest) ಹೆಸರಿನಲ್ಲಿ ಬಂಧನದಲ್ಲಿರಿಸಿ, ಬರೋಬ್ಬರಿ 14.85 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಡಾ. ಓಂ ತನೇಜಾ ಮತ್ತು ಅವರ ಪತ್ನಿ ಡಾ. ಇಂದಿರಾ ತನೇಜಾ ಅವರು ಸುಮಾರು 48 ವರ್ಷಗಳ ಕಾಲ ಅಮೆರಿಕಾದಲ್ಲಿ … Continued

ಹುಷಾರ್‌… ನಿಮ್ಮ ಸಂಬಂಧಿಕರ ಧ್ವನಿಯನ್ನೇ ಅನುಕರಿಸಿ ಮೋಸ ಮಾಡುತ್ತಾರೆ ಸೈಬರ್‌ ವಂಚಕರು…!

ಇಂದೋರ್ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಧ್ವನಿಯನ್ನು ಅನುಕರಿಸಿ (Voice Cloning) ಹಣ ದೋಚುವ ಹೊಸ ಮಾದರಿಯ ಸೈಬರ್ ವಂಚನೆಗೆ ಇಂದೋರ್‌ನ ಶಾಲಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಇದು ಮಧ್ಯಪ್ರದೇಶದ ಮೊದಲ ಎಐ ಆಧಾರಿತ ಧ್ವನಿ ಬದಲಾವಣೆ (Voice-modulation) ವಂಚನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇಂದೋರ್ ನಿವಾಸಿ ಸ್ಮಿತಾ ಎಂಬ ಶಾಲಾ ಶಿಕ್ಷಕಿಗೆ ಜನವರಿ … Continued

ಎಲ್ಲ ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ

ನವದೆಹಲಿ: ಭಾರತದ ದೂರಸಂಪರ್ಕ ಸಚಿವಾಲಯವು ಸ್ಮಾರ್ಟ್‌ಫೋನ್ ತಯಾರಕರಿಗೆ ‘ಸಂಚಾರ ಸಾಥಿ’ (Sanchar Saathi) ಎಂಬ ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಅಪ್ಲಿಕೇಶನ್ ಅನ್ನು ಎಲ್ಲಾ ಸಾಧನಗಳಲ್ಲಿ ಮೊದಲೇ ಅಳವಡಿಸಲು ಸೂಚಿಸಿದೆ. ದೂರಸಂಪರ್ಕ ಇಲಾಖೆ (DoT) ನವೆಂಬರ್ 28 ರಂದು ಈ ಕುರಿತು ನಿರ್ದೇಶನಗಳನ್ನು ಹೊರಡಿಸಿದೆ. ಇದರನ್ವಯ, ತಯಾರಕರಿಂದ ಮಾರಾಟವಾಗುವ ಎಲ್ಲಾ ಹೊಸ ಸಾಧನಗಳಲ್ಲಿ ‘ಸಂಚಾರ ಸಾಥಿ’ … Continued

ದೇಶಾದ್ಯಂತ ʼಡಿಜಿಟಲ್ ಬಂಧನ’ ವಂಚನೆ ಪ್ರಕರಣಗಳು : ಸಿಬಿಐಗೆ ತನಿಖೆ ನಡೆಸಲು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜೋಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, ನ್ಯಾಯಾಲಯದ ಸಲಹೆಗಾರರು (Amicus Curiae) ಎತ್ತಿ ತೋರಿಸಿದ ಸೈಬರ್ ಅಪರಾಧಗಳಾದ ಡಿಜಿಟಲ್ ಬಂಧನ ವಂಚನೆಗಳು … Continued

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ ; ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ 5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿಕೊಂಡಿದ್ದಾನೆ ಹಾಗೂ ನಿಮ್ಮ … Continued