ಸಿಎಂ ಬದಲಾವಣೆಯ ಚರ್ಚೆಯ ಬೆನ್ನಲ್ಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ !

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರ ಗುರುವಾರದಂದು ಭೇಟಿಯಾಗಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ (ಸಿಎಂಒ) ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಬುಧವಾರ ತಿಳಿಸಿವೆ. ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲು ಗುರುವಾರ ಸಮಯ ಕೇಳಿದ್ದಾರೆ,” … Continued

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ ; ಸುಪ್ರೀಂ ಕೋರ್ಟ್‌ ಗೆ ಹೋಗುವುದು ಸೂಕ್ತ ಎಂದ ಹೈಕೋರ್ಟ್‌

ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಹಾಲಿ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದ ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ. ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ … Continued

ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ. ರಾಜ್ಯ … Continued

ಡಿಸಿಎಂ ಡಿ ಕೆ ಶಿವಕುಮಾರ ವಿರುದ್ಧ ಸಿಬಿಐ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. … Continued

ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ; ಸಿಎಂ, ಡಿಸಿಎಂ ಕುರಿತು ಕೆಟ್ಟ ಭಾಷೆ ಬಳಕೆಗೆ ಅತೃಪ್ತಿ

ಬೆಂಗಳೂರು : ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು” ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಶುಕ್ರವಾರ ಹೇಳಿದೆ. ಪ್ರಕರಣವೊಂದರ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಅರ್ಜಿ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ನನಗೆ ಬೇಡ : ಸಿಎಂ, ಡಿಸಿಎಂಗೆ ಅಕ್ಕಯ್ ಪದ್ಮಶಾಲಿ ಪತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ. “ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ … Continued

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ಸಿಎಂ, ಡಿಸಿಎಂಗೆ ಬಾಂಬ್​ ಸ್ಫೋಟಿಸುವ ಬೆದರಿಕೆಯ ಇ-ಮೇಲ್

ಬೆಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ ಬೆದರಿಕೆ ಇ-ಮೇಲ್‌ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ … Continued

ಡಿಕೆಶಿ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ : ಪ್ರಕರಣದ ವಿಚಾರಣೆ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸ್ಸು

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಕುರಿತಾದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಲ್ಲಿಸಿರುವ … Continued

ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕರ್ನಾಟಕ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. … Continued